ಶಿಶು ಕಚ್ಚಿಕೊಂಡು ಓಡಾಡಿದ ನಾಯಿ, ಮಗುವಿನ ತಂದೆ ವಿರುದ್ಧ ಪ್ರಕರಣ
ಮಂಡ್ಯ, ಜುಲೈ 27: ನಗರದ ಮಿಮ್ಸ್ (ಮಂಡ್ಯ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್)ಆವರಣದಲ್ಲಿ ನವಜಾತ ಹೆಣ್ಣು ಶಿಶುವಿನ ದೇಹವನ್ನು ನಾಯಿ ಕಚ್ಚಿಕೊಂಡು ಓಡಾಡಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮಗುವಿನ ತಂದೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಗುವಿನ ತಂದೆ ಸಮೀವುಲ್ಲಾ ಎನ್ನಲಾಗಿದ್ದು, ಮದ್ದೂರು ಪಟ್ಟಣದ ನಿವಾಸಿಯಾದ ಸಮೀವುಲ್ಲಾ ಹಾಗೂ ರಿಜ್ವಾನ್ ದಂಪತಿ ನವಜಾತ ಶಿಶು ಎನ್ನುವುದು ಇದೀಗ ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಗರ್ಭಿಣಿಯಾಗಿದ್ದ ಸಮೀವುಲ್ಲಾ ಪತ್ನಿ ರಿಜ್ವಾನ್ ಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಎರಡು ದಿನಗಳ ಹಿಂದೆ ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಮಧ್ಯರಾತ್ರಿ ಮಗು ಹೊಟ್ಟೆಯಲ್ಲೇ ಮೃತಪಟ್ಟಿತ್ತು. ಹೆರಿಗೆಯಾದ ಬಳಿಕ ಮಗುವನ್ನು ಆಸ್ಪತ್ರೆ ಸಿಬ್ಬಂದಿ ತಂದೆ ಸಮೀವುಲ್ಲಾ ಅವರಿಗೆ ಹಸ್ತಾಂತರಿಸಿದರು.
ಮಗುವನ್ನು ಪಡೆದ ಸಮೀವುಲ್ಲಾ ಅಂತ್ಯಸಂಸ್ಕಾರ ನಡೆಸದೆ ರಸ್ತೆ ಬದಿ ಬಿಸಾಡಿ ಹೋಗಿದ್ದ. ರಸ್ತೆಯ ಬದಿ ಕಸದಲ್ಲಿ ಬಿದ್ದಿದ್ದ ಮೃತ ಮಗುವಿನ ದೇಹವನ್ನು ನಾಯಿಯೊಂದು ಕಚ್ಚಿಕೊಂಡು ಆಸ್ಪತ್ರೆ ಆವರಣದಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಆತಂಕ ಮೂಡಿಸಿತ್ತು.
ಆಸ್ಪತ್ರೆ ಆವರಣದಲ್ಲಿರುವ ರಕ್ತನಿಧಿ ಕೇಂದ್ರದ ಬಳಿ ಸಾರ್ವಜನಿಕರು ನಾಯಿಯಿಂದ ಮಗುವನ್ನು ಬಿಡಿಸಿ ಬಳಿಕ ಸಿಬ್ಬಂದಿಗೆ ವಿಚಾರ ಮುಟ್ಟಿಸಿದರು. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಅದನ್ನು ವಶಕ್ಕೆ ಪಡೆದರು.
ಆಸ್ಪತ್ರೆಯ ಮುಖ್ಯಸ್ಥರು ಎಲ್ಲಾ ವಾರ್ಡ್ ಗಳಲ್ಲೂ ಪರಿಶೀಲನೆ ನಡೆಸಿದರು. ಮಿಮ್ಸ್ ನಲ್ಲಿ ದಾಖಲಾಗಿದ್ದ ಯಾವ ಮಗುವೂ ನಾಪತ್ತೆಯಾಗಿಲ್ಲ ಎಂದು ತಿಳಿದುಬಂತು. ಹೀಗಾಗಿ ಹೊರಗಿನಿಂದ ತಂದು ಆಸ್ಪತ್ರೆ ಆವರಣದಲ್ಲಿ ಶವವನ್ನು ಬಿಟ್ಟು ಹೋಗಿರಬಹುದು ಎಂದು ಶಂಕಿಸಲಾಗಿತ್ತು.
ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಸಮೀವುಲ್ಲಾ ಮಗುವನ್ನು ಎಸೆದು ಹೋಗಿದ್ದು ಬೆಳಕಿಗೆ ಬಂದಿದೆ. ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದಾನೆ. ಪೂರ್ವ ಠಾಣೆ ಪೊಲೀಸರು ಆತನ ವಿರುದ್ಧ 317ರ ಕಲಂನಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications