ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂಬಿ ಹುಟ್ಟೂರಲ್ಲಿ ಸುಮಲತಾ-ನಿಖಿಲ್ ಬೆಂಬಲಿಗರ ನಡುವೆ ಮಾರಾ-ಮಾರಿ

|
Google Oneindia Kannada News

Recommended Video

ಘೋಷಣೆ ಕೂಗಿದ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ವಾಗ್ವಾದ: Lok Sabha Elections 2019

ಮಂಡ್ಯ, ಏಪ್ರಿಲ್ 18: ಅಂಬರೀಶ್ ಹುಟ್ಟೂರಾದ ದೊಡ್ಡರಸಿನಕೆರೆಯಲ್ಲಿ ಸುಮಲತಾ ಮತ್ತು ನಿಖಿಲ್ ಕುಮಾರಸ್ವಾಮಿ ಅವರ ಬೆಂಬಲಿಗರ ನಡುವೆ ಮಾರಾ-ಮಾರಿ ನಡೆದಿದೆ.

ದೊಡ್ಡರಸಿನಕೆರೆಯಲ್ಲಿ ಸುಮಲತಾ ಅವರ ಪರವಾಗಿ ಪ್ರಚಾರಕ್ಕೆ ಪೊಲೀಸರು ಅಡ್ಡಿ ಪಡಿಸಿದರು ಎಂಬ ಕಾರಣಕ್ಕೆ ಶುರುವಾದ ಗಲಾಟೆ ನಿಖಿಲ್ ಕುಮಾರಸ್ವಾಮಿ ಮತ್ತು ಸುಮಲತಾ ಅವರ ಬೆಂಬಲಿಗರ ನಡುವೆ ವಾಗ್ವಾದ ಆರಂಭವಾಗಿ ನೂಕಾಟ-ತಳ್ಳಾಟ ಸಹ ನಡೆದು, ಕೈ-ಕೈ ಮಿಲಾಯಿಸಿದ್ದಾರೆ.

ಮಂಡ್ಯದ ಜನ ಸ್ವಾಭಿಮಾನಕ್ಕೆ ಮತಹಾಕ್ತಾರೆ: ಮತದಾನದ ಬಳಿಕ ಸುಮಲತಾ ವಿಶ್ವಾಸ ಮಂಡ್ಯದ ಜನ ಸ್ವಾಭಿಮಾನಕ್ಕೆ ಮತಹಾಕ್ತಾರೆ: ಮತದಾನದ ಬಳಿಕ ಸುಮಲತಾ ವಿಶ್ವಾಸ

ನಿಖಿಲ್ ಕುಮಾರಸ್ವಾಮಿ ಅವರು ದೊಡ್ಡರಸಿನಕೆರೆಗೆ ಬಂದಾಗ ಅವರ ಪರ ಕೆಲವರು ಘೋಷಣೆಗಳನ್ನು ಕೂಗಿದ್ದಾರೆ ಆಗ ಸುಮಲತಾ ಅವರ ಪರ ಘೋಷಣೆಗಳನ್ನು ಕೂಗಿದರು. ಆದರೆ ಇದಕ್ಕೆ ಪೊಲೀಸರು ಅಡ್ಡಿ ಪಡಿಸಿದರು ಎಂದು ಸುಮಲತಾ ಪರ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದರು.

Fight between Nikhil Kumaraswamy-Sumalatha followers

ನಿಖಿಲ್ ಕುಮಾರಸ್ವಾಮಿ-ಸುಮಲತಾ ಬೆಂಬಲಿಗರ ನಡುವೆ ವಾಗ್ವಾದ ಮೇರೆ ಮೀರಿ, ಕೈ-ಕೈ ಮಿಲಾಯಿಸುವ ಹಂತಕ್ಕೆ ಹೋದಾಗ ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಲಘು ಲಾಠಿ ಪ್ರಹಾರ ನಡೆಸಿದರು.

ಕರ್ನಾಟಕ ಲೋಕ ಸಮರ LIVE: ಸುಮಲತಾ-ನಿಖಿಲ್ ಬೆಂಬಲಿಗರ ನಡುವೆ ಮಾರಾ-ಮಾರಿಕರ್ನಾಟಕ ಲೋಕ ಸಮರ LIVE: ಸುಮಲತಾ-ನಿಖಿಲ್ ಬೆಂಬಲಿಗರ ನಡುವೆ ಮಾರಾ-ಮಾರಿ

ದೊಡ್ಡರಸಿನಕೆರೆಯಲ್ಲಿ ಸುಮಲತಾ ಅವರು ಕೆಲವು ಸಮಯದ ಮುಂದೆ ಅಷ್ಟೆ ಮತಚಲಾಯಿಸಿ ಹೋಗಿದ್ದರು, ಅವರು ಅಲ್ಲಿಂದ ತೆರಳಿದ ಸ್ವಲ್ಪ ಹೊತ್ತಲ್ಲೆ ಗಲಾಟೆ ಪ್ರಾರಂಭವಾಗಿದೆ. ದೊಡ್ಡರಿನಕೆರೆಯು ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ.

English summary
Fight happend between Nikhil Kumaraswamy and Sumalatha followers in Mandya's Doddarasinakere village. police use light lathi charge.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X