ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಖಾಸಗಿ ಬಸ್: ಪ್ರಯಾಣಿಕರು ಪಾರಾಗಿದ್ದೇಗೆ?
ಮಂಡ್ಯ, ಏಪ್ರಿಲ್ 26: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಏಕಾಏಕಿ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ 25ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ವ್ಯಾಪಿಸಲು ಆರಂಭವಾಗಿದ್ದು, ಕೂಡಲೇ ಬಸ್ನ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಕರ ಪ್ರಾಣ ಉಳಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್ಅನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಚಾಲಕ ಕೂಡಲೇ ನಿರ್ವಾಹಕರ ಗಮನಕ್ಕೆ ತಂದು ಪ್ರಯಾಣಿಕರಿಗೆ ವಿಷಯ ಮುಟ್ಟಿಸಿದ್ದಾರೆ. ಯಾರೂ ಗಾಬರಿಯಾಗದಂತೆ ಸಮಯ ನಿರ್ವಹಿಸಿದ ಚಾಲಕ ಹಾಗೂ ನಿರ್ವಾಹಕ ಬೆಂಕಿ ಸಂಪೂರ್ಣ ಬಸ್ ವ್ಯಾಪಿಸುವ ಮೊದಲು ಎಲ್ಲಾ ಪ್ರಯಾಣಿಕರನ್ನು ಬಸ್ನಿಂದ ಕೆಳಗೆ ಇಳಿಸಿ ದೂರ ಕರೆದುಕೊಂಡು ಹೋಗಿದ್ದಾರೆ.
ನೋಡ ನೋಡುತ್ತಿದ್ದಂತೆ ಬೆಂಕಿ ಸಂಪೂರ್ಣ ಬಸ್ ವ್ಯಾಪಿಸಿ ಹೊತ್ತಿ ಉರಿದು ಸ್ಥಳದಲ್ಲೇ ಸುಟ್ಟು ಕರಕಲಾಗಿದೆ. ಬೆಂಕಿಯ ಜ್ವಾಲೆ ಅತಿಯಾಗಿದ್ದ ಕಾರಣ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಸ್ವಲ್ಪ ಸಮಯದವರೆಗೆ ದಟ್ಟ ಹೊಗೆ ತುಂಬಿಕೊಂಡಿತ್ತು.

ಬಸ್ ಹೊತ್ತಿ ಉರಿಯುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ನಾಗಮಂಗಲ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ಆರಿಸಿದ್ದಾರೆ. ಆದರೆ ಅಷ್ಟರಲ್ಲೇ ಸಂಪೂರ್ಣ ಬಸ್ ಹೊತ್ತಿ ಉರಿದು ಭಸ್ಮವಾಗಿದೆ. ಇನ್ನು ಚಾಲಕನ ಸಮಯ ಪ್ರಜ್ಞೆಯಿಂದ 25ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿದಿದ್ದು, ಚಾಲಕ ಹಾಗೂ ನಿರ್ವಾಹಕರಿಗೆ ಪ್ರಯಾಣಿಕರು ಧನ್ಯವಾದ ತಿಳಿಸಿದ್ದಾರೆ. ಬಳಿಕ ಬದಲಿ ವ್ಯವಸ್ಥೆಯಿಂದ ತಾವು ತೆರಳಬೇಕಾದ ಸ್ಥಳಕ್ಕೆ ಪ್ರಯಾಣ ಬೆಳೆಸಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಟೆಕ್ಕಿ ಸಾವು
ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಮೃತಪಟ್ಟ ಘಟನೆ ಗೆಜ್ಜಲಗೆರೆ ಬಳಿ ನಡೆದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಿ ಅಶ್ವಿನಿ (33) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಮೃತ ಅಶ್ವಿನಿ ತಮ್ಮ ಪತಿ ಹಾಗೂ ಎರಡು ವರ್ಷದ ಮಗುವಿನ ಜೊತೆಯಲ್ಲಿ ಪ್ರವಾಸಕ್ಕೆಂದು ಮೈಸೂರಿಗೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಮೈಸೂರಿನಿಂದ ಬೆಂಗಳೂರು ಕಡೆ ಹೋಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಅಶ್ವಿನಿ ಪತಿ ಸಾಫ್ಟ್ವೇರ್ ಎಂಜಿನಿಯರ್ ಶ್ರೀಕಾಂತ್ (37) ಮತ್ತು 2 ವರ್ಷದ ಮಗು ಗಾಯಗೊಂಡಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications