ಬೆಳ್ಳಂಬೆಳಗ್ಗೆ ಹೊತ್ತಿ ಉರಿದ ಖಾಸಗಿ ಬಸ್: ಪ್ರಯಾಣಿಕರು ಪಾರಾಗಿದ್ದೇಗೆ?
ಮಂಡ್ಯ, ಏಪ್ರಿಲ್ 26: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಏಕಾಏಕಿ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ನಡೆದಿದೆ. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ 25ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ನಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ವ್ಯಾಪಿಸಲು ಆರಂಭವಾಗಿದ್ದು, ಕೂಡಲೇ ಬಸ್ನ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಕರ ಪ್ರಾಣ ಉಳಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಸ್ಅನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಚಾಲಕ ಕೂಡಲೇ ನಿರ್ವಾಹಕರ ಗಮನಕ್ಕೆ ತಂದು ಪ್ರಯಾಣಿಕರಿಗೆ ವಿಷಯ ಮುಟ್ಟಿಸಿದ್ದಾರೆ. ಯಾರೂ ಗಾಬರಿಯಾಗದಂತೆ ಸಮಯ ನಿರ್ವಹಿಸಿದ ಚಾಲಕ ಹಾಗೂ ನಿರ್ವಾಹಕ ಬೆಂಕಿ ಸಂಪೂರ್ಣ ಬಸ್ ವ್ಯಾಪಿಸುವ ಮೊದಲು ಎಲ್ಲಾ ಪ್ರಯಾಣಿಕರನ್ನು ಬಸ್ನಿಂದ ಕೆಳಗೆ ಇಳಿಸಿ ದೂರ ಕರೆದುಕೊಂಡು ಹೋಗಿದ್ದಾರೆ.
ನೋಡ ನೋಡುತ್ತಿದ್ದಂತೆ ಬೆಂಕಿ ಸಂಪೂರ್ಣ ಬಸ್ ವ್ಯಾಪಿಸಿ ಹೊತ್ತಿ ಉರಿದು ಸ್ಥಳದಲ್ಲೇ ಸುಟ್ಟು ಕರಕಲಾಗಿದೆ. ಬೆಂಕಿಯ ಜ್ವಾಲೆ ಅತಿಯಾಗಿದ್ದ ಕಾರಣ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಸ್ವಲ್ಪ ಸಮಯದವರೆಗೆ ದಟ್ಟ ಹೊಗೆ ತುಂಬಿಕೊಂಡಿತ್ತು.

ಬಸ್ ಹೊತ್ತಿ ಉರಿಯುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ನಾಗಮಂಗಲ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಬೆಂಕಿ ಆರಿಸಿದ್ದಾರೆ. ಆದರೆ ಅಷ್ಟರಲ್ಲೇ ಸಂಪೂರ್ಣ ಬಸ್ ಹೊತ್ತಿ ಉರಿದು ಭಸ್ಮವಾಗಿದೆ. ಇನ್ನು ಚಾಲಕನ ಸಮಯ ಪ್ರಜ್ಞೆಯಿಂದ 25ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿದಿದ್ದು, ಚಾಲಕ ಹಾಗೂ ನಿರ್ವಾಹಕರಿಗೆ ಪ್ರಯಾಣಿಕರು ಧನ್ಯವಾದ ತಿಳಿಸಿದ್ದಾರೆ. ಬಳಿಕ ಬದಲಿ ವ್ಯವಸ್ಥೆಯಿಂದ ತಾವು ತೆರಳಬೇಕಾದ ಸ್ಥಳಕ್ಕೆ ಪ್ರಯಾಣ ಬೆಳೆಸಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಟೆಕ್ಕಿ ಸಾವು
ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಮೃತಪಟ್ಟ ಘಟನೆ ಗೆಜ್ಜಲಗೆರೆ ಬಳಿ ನಡೆದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಿ ಅಶ್ವಿನಿ (33) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಮೃತ ಅಶ್ವಿನಿ ತಮ್ಮ ಪತಿ ಹಾಗೂ ಎರಡು ವರ್ಷದ ಮಗುವಿನ ಜೊತೆಯಲ್ಲಿ ಪ್ರವಾಸಕ್ಕೆಂದು ಮೈಸೂರಿಗೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಮೈಸೂರಿನಿಂದ ಬೆಂಗಳೂರು ಕಡೆ ಹೋಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಅಶ್ವಿನಿ ಪತಿ ಸಾಫ್ಟ್ವೇರ್ ಎಂಜಿನಿಯರ್ ಶ್ರೀಕಾಂತ್ (37) ಮತ್ತು 2 ವರ್ಷದ ಮಗು ಗಾಯಗೊಂಡಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications