ಭಾರೀ ಮಳೆಗೆ ರಂಗನತಿಟ್ಟು ಪಕ್ಷಿಧಾಮ ಮುಳುಗುತ್ತಿದೆಯೇ..?
Recommended Video

ಮಂಡ್ಯ, ಜುಲೈ 16: ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ಪಕ್ಷಿಕಾಶಿ ಎಂದೇ ಪ್ರಸಿದ್ಧಿ ಪಡೆದ ರಂಗನತಿಟ್ಟು ಮುಳುಗುವ ಭೀತಿ ಎದುರಿಸುತ್ತಿದೆ.
ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 123.27(ನೆಲಮಟ್ಟದಿಂದ) ಅಡಿ ತಲುಪಿದ್ದು ಐದು ವರ್ಷಗಳ ಬಳಿಕ ಜಲಾಶಯ ಭರ್ತಿಯಾಗಿದೆ! ಜಲಾಶಯದಿಂದ 20 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಕೆಆರ್ ಎಸ್ ನ ಗರಿಷ್ಠ ಮಟ್ಟ 124.80 ಅಡಿ. ಕಾವೇರಿ ನದಿ ಪಾತ್ರದಲ್ಲಿ ಸಾಕಷ್ಟು ಮಳೆಯಾದ ಪರಿಣಾಮ ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು, ಇದೀಗ ಈ ಭಾಗದ ಜನರು ಪ್ರವಾಹ ಭೀತಿ ಎದುರಿಸುವಂತಾಗಿದೆ.
ಮಂಡ್ಯ ಜಿಲ್ಲೆಯ ರಂಗನತಿಟ್ಟು ಪಕ್ಷಿಧಾಮ ಕರ್ನಾಟಕದ ಪ್ರಮುಖ ಪ್ರವಾಸೀ ತಾಣಗಳಲ್ಲೊಂದು. ತರಹೇವಾರಿ ವಲಸೆ ಪಕ್ಷಿಗಳನ್ನು ಹೊಂದಿರುವ ಈ ಪಕ್ಷಿಧಾಮ ಮುಳುಗುವ ಭೀತಿ ಎದುರಿಸುತ್ತಿರುವುದರಿಂದ ಪಕ್ಷಿಗಳೂ ತೊಂದರೆ ಅನುಭವಿಸಬೇಕಾಬಹುದು ಎಂದು ಅಂದಾಜಿಸಲಾಗಿದೆ. ಇಲ್ಲಿ ಹರಿಯುವ ಕಾವೇರಿ ನದಿಯ ನಡುವಲ್ಲಿ ಚಿಕ್ಕ ಚಿಕ್ಕ ದ್ವೀಪಗಳಿದ್ದು ಇಲ್ಲೆಲ್ಲ ವಲಸೆ ಪಕ್ಷಿಗಳು ವಾಸಿಸುತ್ತವೆ. ಆದರೆ ಹಲವು ಚಿಕ್ಕ ಚಿಕ್ಕ ದ್ವೀಪಗಳು ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಈಗಾಗಲೇ ಮುಳುಗಿವೆ!

ಈ ಕುರಿತು ಪ್ರತಿಕ್ರಿಯೆ ನೀಡಿದ ವನ್ಯಜೀವಿ ವಾರ್ಡನ್ ನವೀನ್ ಕುಮಾರ್, 'ರಂಗನತಿಟ್ಟು ಪಕ್ಷಿಧಾಮದಲ್ಲಿ ಚೆಕ್ ಡ್ಯಾಮ್ ಗಳಿವೆ. ಇದು ನೀರಿನ ಒತ್ತಡವನ್ನು ನಿಯಂತ್ರಿಸುತ್ತದೆ. ಯಾರೂ ಗಾಬರಿ ಪಡುವ ಅಗತ್ಯವಿಲ್ಲ. ಅಕಸ್ಮಾತ್ ಪ್ರವಾಹ ಸ್ಥಿತಿ ಎದುರಾದರೆ ನಾವು ಸಣ್ಣ ಸಣ್ಣ ದ್ವೀಪದ ಸುತ್ತ ಮರಳಿನ ಬ್ಯಾಗುಗಳನ್ನು ಇಟ್ಟು ಮಣ್ಣಿನ ಸವಕಳಿ ಆಗದಂತೆ ನೋಡಿಕೊಳ್ಳುತ್ತೇವೆ. ಕೆಲವು ಸಣ್ಣ ಪುಟ್ಟ ಪಕ್ಷಿಗಳನ್ನು ಕಳೆದುಕೊಳ್ಳಬೇಕಾಗಬಹುದು. ಆದರೆ ಶೇ.90 ರಷ್ಟು ಪಕ್ಷಿಗಳನ್ನು ನಾವು ರಕ್ಷಿಸುವ ಭರವಸೆ ನೀಡುತ್ತೇವೆ' ಎಂದಿದ್ದಾರೆ.
ಸದ್ಯಕ್ಕೆ ಕೆಆರ್ ಎಸ್ ಉತ್ತರ ಉದ್ಯಾನವನಕ್ಕೆ ಸಂಚಾರ ನಿರ್ಬಂಧಿಸಲಾಗಿದೆ. ರಂಗನತಿಟ್ಟುವಿನಲ್ಲಿ ಸಹ ದೋಣಿ ವಿಹಾರವನ್ನು ಸದ್ಯಕ್ಕೆ ನಿಷೇಧಿಸಲಾಗಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications