'ಕಾಂಗ್ರೆಸ್ ಬಿಟ್ಟ ಎಸ್ಸೆಂ ಕೃಷ್ಣ ರಾಜಕೀಯದಿಂದ ನಿವೃತ್ತರಾಗಬೇಕಿತ್ತು'
Recommended Video
ಮಂಡ್ಯ, ಜುಲೈ 16: "ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರು ಕಾಂಗ್ರೆಸ್ ಪಕ್ಷವನ್ನು ಬಿಡಬಾರದಿತ್ತು. ಇನ್ನು ಕಾಂಗ್ರೆಸ್ ತೊರೆಯುವ ನಿರ್ಧಾರ ಮಾಡಿದ ಮೇಲೆ ರಾಜಕೀಯ ನಿವೃತ್ತಿಯನ್ನು ಪಡೆಯಬೇಕಿತ್ತು. ಈಗ ಅವರ ರಾಜಕೀಯ ಜೀವನದ ಅಧ್ಯಾಯ ಮುಗಿದಿದೆ" ಎಂದು ಚಾಮರಾಜನಗರದ ಸಂಸದ ಹಾಗೂ ಕಾಂಗ್ರೆಸ್ ತೊರೆದು ಬಿಜೆಪಿಯಲ್ಲಿರುವ ವಿ.ಶ್ರೀನಿವಾಸ ಪ್ರಸಾದ್ ಅಭಿಪ್ರಾಯ ಪಟ್ಟಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಶ್ರೀನಿವಾಸ ಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಹುದ್ದೆ, ಮುಖ್ಯಮಂತ್ರಿ, ರಾಜ್ಯಪಾಲ ಹಾಗೂ ಕೇಂದ್ರ ವಿದೇಶಾಂಗ ಸಚಿವ ಹುದ್ದೆ ಸೇರಿದಂತೆ ಕಾಂಗ್ರೆಸ್ ನಲ್ಲಿ ಬೆಳವಣಿಗೆ ಕಂಡವರು ಎಸ್ಸೆಂ ಕೃಷ್ಣ. ಆ ಪಕ್ಷದಿಂದ ಎಲ್ಲ ಅಧಿಕಾರವನ್ನೂ ಅನುಭವಿಸಿದ್ದಾರೆ ಎಂದು ಹೇಳಿದರು.
ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷವು ಹಾಸನಕ್ಕಿಂತ ಮಂಡ್ಯದಲ್ಲಿ ತಳ ಮಟ್ಟದಿಂದಲೂ ಗಟ್ಟಿಯಾಗಿದೆ. ಸ್ಥಳೀಯ ಸಂಸ್ಥೆಯಿಂದ ಮೊದಲುಗೊಂಡು ಎಲ್ಲ ಹಂತದಲ್ಲೂ ಜೆಡಿಎಸ್ ನ ಜನಪ್ರತಿನಿಧಿಗಳು ಇದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತದಾರರು ಸರಿಯಾದ ಪಾಠವನ್ನು ಕಲಿಸಿದ್ದಾರೆ ಎಂದು ಅಭಿಪ್ರಾಯ ಪಟ್ಟರು.

ಜೆಡಿಎಸ್ ಶಾಸಕರ ನಾಲಗೆಯೇ ಸೋಲಿಗೆ ದಾರಿ ಮಾಡಿಕೊಟ್ಟಿತು. ಜೆಡಿಎಸ್ ನ ಭದ್ರಕೋಟೆಯಾದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಗೆಲುವಿಗೆ ಅದೇ ಕಾರಣ ಆಯಿತು. ಈ ವಿದ್ಯಮಾನವು ಜೆಡಿಎಸ್ ಗೆ ಮಾತ್ರವಲ್ಲ, ಎಲ್ಲ ರಾಜಕೀಯ ಪಕ್ಷಗಳಿಗೂ ಒಂದು ಪಾಠ ಎಂದು ಅವರು ಹೇಳಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications