ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ; ಆರೋಗ್ಯ ಇಲಾಖೆ ನೌಕರರೇ ಶಾಮೀಲು
ಮಂಡ್ಯ ಸಮೀಪದ ಆಲೆಮನೆಯೊಂದರಲ್ಲಿ ಭ್ರೂಣಲಿಂಗ ಪತ್ತೆ ಪ್ರಕರಣ ಮಾಸುವ ಮುನ್ನವೇ ಪಾಂಡವಪುರದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಟ್ಟಣದ ಆರೋಗ್ಯ ಇಲಾಖೆ ವಸತಿ ಗೃಹದಲ್ಲೇ ಆರೋಗ್ಯ ಇಲಾಖೆ ನೌಕರರೇ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವುದು ಆತಂಕಕಾರಿಯಾಗಿದೆ.
ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆಂಬ್ಯುನ್ಸ್ ಚಾಲಕ ಆನಂದ್ (37), ಹೊರಗುತ್ತಿಗೆ ಡಿ-ಗ್ರೂಪ್ ನೌಕರೆ ಅಶ್ವಿನಿ (32), ಆಕೆಯ ತಾಯಿ ಸತ್ಯಮ್ಮ (54), ಹಿಂದೆ ಪಾಂಡವಪುರ ಖಾಸಗಿ ನರ್ಸಿಂಗ್ ಹೋಂನಲ್ಲಿ ಡಿ-ಗ್ರೂಪ್ ನೌಕರೆಯಾಗಿದ್ದ ಗಿರಿಜಮ್ಮ (48) ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆ ವಿವರ
ಆಂಬ್ಯುಲೆನ್ಸ್ ಚಾಲಕನಾಗಿದ್ದ ಆನಂದ್ಗೆ ಪಾಂಡವಪುರ ತಾಲೂಕು ಆರೋಗ್ಯ ಇಲಾಖೆಗೆ ಸೇರಿದ ವಸತಿಗೃಹವನ್ನು ವಾಸಕ್ಕೆ ನೀಡಲಾಗಿತ್ತು. ಆನಂದ್, ಪತ್ನಿ ಅಶ್ವಿನಿ, ಆಕೆಯ ತಾಯಿ ಸತ್ಯಮ್ಮ ಅಲ್ಲಿ ವಾಸವಿದ್ದರು. ಅಶ್ವಿನಿ ಆರೋಗ್ಯ ಇಲಾಖೆಯಲ್ಲೇ ಹೊರಗುತ್ತಿಗೆ ಆಧಾರದ ಮೇಲೆ ಡಿ-ಗ್ರೂಪ್ ನೌಕರೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ವಸತಿ ಗೃಹದಲ್ಲಿ ವಾಸವಿದ್ದ ಆನಂದ್ ಮತ್ತು ಅಶ್ವಿನಿ ರಹಸ್ಯವಾಗಿ ಹೊರಗಿನಿಂದ ಗರ್ಭಿಣಿ ಮಹಿಳೆಯರನ್ನು ಕರೆತಂದು ಹೆಣ್ಣು ಭ್ರೂಣಹತ್ಯೆ ನಡೆಸುತ್ತಿದ್ದರು. ಕಳೆದ ಆರು ತಿಂಗಳಿಂದ ದಂಪತಿ ಈ ಕೃತ್ಯದಲ್ಲಿ ತೊಡಗಿದ್ದರು. ಇದಕ್ಕೆ ಖಾಸಗಿ ನರ್ಸಿಂಗ್ ಹೋಂನಲ್ಲಿ ಡಿ-ಗ್ರೂಪ್ ನೌಕರೆಯಾಗಿ ಕೆಲಸ ನಿರ್ವಹಿಸಿ ಅನುಭವ ಹೊಂದಿದ್ದ ಗಿರಿಜಮ್ಮ ಸಹಾಯ ಮಾಡುತ್ತಿದ್ದರು ಎನ್ನುವ ಆರೋಪ ಕೇಳಿಬಂದಿದೆ.
ಭಾನುವಾರ ತಡರಾತ್ರಿ ಮೈಸೂರು ಮೂಲದ ಗರ್ಭಿಣಿಯೊಬ್ಬರು ವಸತಿಗೃಹಕ್ಕೆ ಆಗಮಿಸಿದ್ದರು. ಇದನ್ನು ನೋಡಿದ ಸ್ಥಳೀಯರು ಗರ್ಭಿಣಿ ಮಹಿಳೆ ಮೇಲೆ ಅನುಮಾನ ವ್ಯಕ್ತಪಡಿಸಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕೆ.ಮೋಹನ್ ಅವರಿಗೆ ರಾತ್ರಿ 11 ಗಂಟೆಗೆ ವಿಷಯ ತಿಳಿಸಿದ್ದರು.
ಕೂಡಲೇ ತಾಲೂಕು ಆರೋಗ್ಯಾಧಿಕಾರಿ ಡಾ.ಅರವಿಂದ್ ಅವರನ್ನು ಸಂಪರ್ಕಿಸಿ ದಾಳಿ ನಡೆಸುವಂತೆ ಸೂಚಿಸಿದರು. ಡಾ.ಅರವಿಂದ್ ಅವರು ಕೂಡಲೇ ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಧಾವಿಸಿದಾಗ ಗರ್ಭಿಣಿ ಮಹಿಳೆಗೆ ಅಬಾರ್ಷನ್ ಮಾಡುವ ಪ್ರಕ್ರಿಯೆ ನಡೆದಿತ್ತು ಎನ್ನಲಾಗಿದೆ.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ ಅವರು ಸ್ಥಳಕ್ಕೆ ಬಂದರು. ವಸತಿಗೃಹದಲ್ಲಿ ಪರಿಶೀಲನೆ ನಡೆಸಿದಾಗ ಗರ್ಭಪಾತ ಮಾತ್ರೆಗಳು, ಸಿರೆಂಜ್, ಡ್ರಿಪ್ ಸೇರಿದಂತೆ ಭ್ರೂಣ ಹತ್ಯೆಗೆ ನೀಡುವ ಔಷಧಗಳು ಕಂಡುಬಂದಿವೆ.
ಪೊಲೀಸರು ದಂಪತಿಯನ್ನು ಸ್ಥಳದಲ್ಲೇ ಬಂಧಿಸಿದರಲ್ಲದೆ, ಈ ಪಾಪಕೃತ್ಯಕ್ಕೆ ನೆರವಾಗಿದ್ದ ಶಶಿಕಲಾ ಮತ್ತು ಗಿರಿಜಾಂಬ ಅವರನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications