5 ವರ್ಷದ ಹಿಂದೆ ನಾಪತ್ತೆಯಾದ ಮಗಳಿಗಾಗಿ ತಾಯಿ ದೂರು; ಮರ್ಯಾದಾ ಹತ್ಯೆ ಶಂಕೆ
ಮಂಡ್ಯ, ಅಕ್ಟೋಬರ್ 21: ಐದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಮಗಳು ನಾಪತ್ತೆಯಾಗಿದ್ದಾಳೆ ಎಂದು ಯುವತಿಯ ತಾಯಿ ದೂರು ನೀಡಿದ್ದು, ಮರ್ಯಾದಾ ಹತ್ಯೆಯ ಶಂಕೆ ವ್ಯಕ್ತವಾಗಿದೆ.
ಮಂಡ್ಯದ ಮಳವಳ್ಳಿ ತಾಲೂಕಿನ ನಂಜೇಗೌಡದೊಡ್ಡಿ ಗ್ರಾಮದ ಮೇಘನಾ ನಾಪತ್ತೆಯಾಗಿರುವ ಯುವತಿ. ಈಕೆಯ ತಾಯಿ ಮಹದೇವಮ್ಮ, ಮಗಳು ನಾಪತ್ತೆಯಾಗಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
2014ರಲ್ಲಿ ಬೆಂಗಳೂರಿನಲ್ಲಿಪಿಯುಸಿ ಓದುತ್ತಿದ್ದ ಮೇಘಾ ಪಾಂಡವಪುರ ತಾಲೂಕಿನ ತಿರುಮಲಪುರ ಮೂಲದ ಸ್ವಾಮಿಗೌಡ ಎಂಬ ಯುವಕನನ್ನು ಮದುವೆಯಾಗಿದ್ದಳು. ಮದುವೆಯಾದ ಬಳಿಕ ಮೇಘಾ ತನ್ನ ತವರು ಮನೆಯವರ ಸಂಪರ್ಕ ಬಿಟ್ಟಿದ್ದಳು. ಮದುವೆಯಾದ ಆರು ತಿಂಗಳ ಬಳಿಕ ಅಕ್ಕನ ಮದುವೆಗೆ ಬಂದು ಹೋಗಿದ್ದಳು. ನಂತರ ಕೆಲ ದಿನ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದವಳು ಮತ್ತೆ ಸಂಪರ್ಕ ಕಡಿದುಕೊಂಡಿದ್ದಳು. ಇದಾದ ಕೆಲ ವರ್ಷಗಳ ಬಳಿಕ ಮನೆ ಸ್ವಚ್ಛ ಮಾಡುವಾಗ ಮಹದೇವಮ್ಮ ಅವರಿಗೆ ಬೀರುವಿನಲ್ಲಿ ಮೇಘ ಮತ್ತು ಸ್ವಾಮಿಯ ಐಡಿ ಕಾರ್ಡ್ ಸಿಕ್ಕಿದೆ.

ಆ ಕಾರ್ಡಿನಲ್ಲಿದ್ದ ವಿಳಾಸವನ್ನು ಹುಡುಕಿಕೊಂಡು ಮಹದೇವಮ್ಮ ಸ್ವಾಮಿ ಊರಿಗೆ ಹೋಗಿ ವಿಚಾರಿಸಿದಾಗ, ಆಘಾತದ ಮಾಹಿತಿ ತಿಳಿದುಬಂದಿದೆ. ಮೇಘಾಳ ಹತ್ಯೆಯಾಗಿದೆ, ಈ ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸರಿಗೆ ದೂರು ನೀಡಲು ಹೋದರೆ, ಸಾಕ್ಷ್ಯಾಧಾರವಿಲ್ಲ ಎಂದು ದೂರನ್ನೂ ದಾಖಲಿಸಿಕೊಂಡಿಲ್ಲ. ಇದೀಗ ಮಹದೇವಮ್ಮ ಅವರು ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಸಂಘಟನೆಯ ಸಹಾಯ ಪಡೆದು ಮಾನವ ಹಕ್ಕು ಆಯೋಗ ಮತ್ತು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ.
ಮೇಘಾಳನ್ನು ಆಕೆಯ ಗಂಡ ಹಾಗೂ ಅವರ ಮನೆಯವರು ಕೊಲೆ ಮಾಡಿದ್ದು, ಅನ್ಯ ಜಾತಿ ಎಂಬ ಕಾರಣಕ್ಕೆ ಮರ್ಯಾದಾ ಹತ್ಯೆ ನಡೆದಿದೆ ಎಂದು ಯುವತಿ ಪೋಷಕರು ಆರೋಪ ಮಾಡಿದ್ದಾರೆ. ಐದು ವರ್ಷಗಳ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ನಿಜಾಂಶ ಹೊರಬರಬೇಕಿದೆ.
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ?












Click it and Unblock the Notifications