5 ವರ್ಷದ ಹಿಂದೆ ನಾಪತ್ತೆಯಾದ ಮಗಳಿಗಾಗಿ ತಾಯಿ ದೂರು; ಮರ್ಯಾದಾ ಹತ್ಯೆ ಶಂಕೆ
ಮಂಡ್ಯ, ಅಕ್ಟೋಬರ್ 21: ಐದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಮಗಳು ನಾಪತ್ತೆಯಾಗಿದ್ದಾಳೆ ಎಂದು ಯುವತಿಯ ತಾಯಿ ದೂರು ನೀಡಿದ್ದು, ಮರ್ಯಾದಾ ಹತ್ಯೆಯ ಶಂಕೆ ವ್ಯಕ್ತವಾಗಿದೆ.
ಮಂಡ್ಯದ ಮಳವಳ್ಳಿ ತಾಲೂಕಿನ ನಂಜೇಗೌಡದೊಡ್ಡಿ ಗ್ರಾಮದ ಮೇಘನಾ ನಾಪತ್ತೆಯಾಗಿರುವ ಯುವತಿ. ಈಕೆಯ ತಾಯಿ ಮಹದೇವಮ್ಮ, ಮಗಳು ನಾಪತ್ತೆಯಾಗಿದ್ದು, ಈ ಕುರಿತು ತನಿಖೆ ನಡೆಸಬೇಕು ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
2014ರಲ್ಲಿ ಬೆಂಗಳೂರಿನಲ್ಲಿಪಿಯುಸಿ ಓದುತ್ತಿದ್ದ ಮೇಘಾ ಪಾಂಡವಪುರ ತಾಲೂಕಿನ ತಿರುಮಲಪುರ ಮೂಲದ ಸ್ವಾಮಿಗೌಡ ಎಂಬ ಯುವಕನನ್ನು ಮದುವೆಯಾಗಿದ್ದಳು. ಮದುವೆಯಾದ ಬಳಿಕ ಮೇಘಾ ತನ್ನ ತವರು ಮನೆಯವರ ಸಂಪರ್ಕ ಬಿಟ್ಟಿದ್ದಳು. ಮದುವೆಯಾದ ಆರು ತಿಂಗಳ ಬಳಿಕ ಅಕ್ಕನ ಮದುವೆಗೆ ಬಂದು ಹೋಗಿದ್ದಳು. ನಂತರ ಕೆಲ ದಿನ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದವಳು ಮತ್ತೆ ಸಂಪರ್ಕ ಕಡಿದುಕೊಂಡಿದ್ದಳು. ಇದಾದ ಕೆಲ ವರ್ಷಗಳ ಬಳಿಕ ಮನೆ ಸ್ವಚ್ಛ ಮಾಡುವಾಗ ಮಹದೇವಮ್ಮ ಅವರಿಗೆ ಬೀರುವಿನಲ್ಲಿ ಮೇಘ ಮತ್ತು ಸ್ವಾಮಿಯ ಐಡಿ ಕಾರ್ಡ್ ಸಿಕ್ಕಿದೆ.

ಆ ಕಾರ್ಡಿನಲ್ಲಿದ್ದ ವಿಳಾಸವನ್ನು ಹುಡುಕಿಕೊಂಡು ಮಹದೇವಮ್ಮ ಸ್ವಾಮಿ ಊರಿಗೆ ಹೋಗಿ ವಿಚಾರಿಸಿದಾಗ, ಆಘಾತದ ಮಾಹಿತಿ ತಿಳಿದುಬಂದಿದೆ. ಮೇಘಾಳ ಹತ್ಯೆಯಾಗಿದೆ, ಈ ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸರಿಗೆ ದೂರು ನೀಡಲು ಹೋದರೆ, ಸಾಕ್ಷ್ಯಾಧಾರವಿಲ್ಲ ಎಂದು ದೂರನ್ನೂ ದಾಖಲಿಸಿಕೊಂಡಿಲ್ಲ. ಇದೀಗ ಮಹದೇವಮ್ಮ ಅವರು ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಸಂಘಟನೆಯ ಸಹಾಯ ಪಡೆದು ಮಾನವ ಹಕ್ಕು ಆಯೋಗ ಮತ್ತು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ.
ಮೇಘಾಳನ್ನು ಆಕೆಯ ಗಂಡ ಹಾಗೂ ಅವರ ಮನೆಯವರು ಕೊಲೆ ಮಾಡಿದ್ದು, ಅನ್ಯ ಜಾತಿ ಎಂಬ ಕಾರಣಕ್ಕೆ ಮರ್ಯಾದಾ ಹತ್ಯೆ ನಡೆದಿದೆ ಎಂದು ಯುವತಿ ಪೋಷಕರು ಆರೋಪ ಮಾಡಿದ್ದಾರೆ. ಐದು ವರ್ಷಗಳ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ನಿಜಾಂಶ ಹೊರಬರಬೇಕಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications