ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಬೇಡ, ಅಂಬರೀಶ್ ಮಗ ಸ್ಪರ್ಧಿಸಲಿ: ಬೇಡಿಕೆ
ಮಂಡ್ಯ, ಜನವರಿ 12: ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವಂತೆ ಒತ್ತಡ ಒಂದೆಡೆಯಿಂದ ಮತ್ತೊಂದೆಡೆಯಿಂದ ಅಂಬರೀಶ್ ಅವರ ಪುತ್ರ ಅಭಿಶೇಕ್ ಅಂಬರೀಶ್ ಸ್ಪರ್ಧಿಸಲಿ ಎಂಬ ಒತ್ತಡವೂ ಬರುತ್ತಿದೆ.
ಮಂಡ್ಯದಿಂದ ನಿಖಿಲ್ ಗೆ ಟಿಕೆಟ್ ನೀಡಬೇಕೆಂಬ ಒತ್ತಡ ಇದೆ ಎಂದು ಇತ್ತೀಚೆಗಷ್ಟೆ ಸ್ವತಃ ಕುಮಾರಸ್ವಾಮಿ ಹೇಳಿದ್ದರು. ಅವರು ಹೇಳಿಕೆ ನೀಡಿದ ಮರುದಿನವೇ ಕಾಂಗ್ರೆಸ್ ಕಾರ್ಯಕರ್ತರು ಈ ಬೇಡಿಕೆ ಮುಂದಿಟ್ಟಿದ್ದಾರೆ.
ಇತ್ತೀಚೆಗಷ್ಟೆ ಮಂಡ್ಯದ ಗಂಡು ಅಂಬರೀಶ್ ಅವರು ಕಾಲವಾಗಿದ್ದು, ಅವರು ಇಷ್ಟು ಪ್ರತಿನಿಧಿಸುತ್ತಿದ್ದ ಜಿಲ್ಲೆ ಮಂಡ್ಯ ಹಾಗಾಗಿ ಅವರ ಮಗನಿಗೆ ಕಾಂಗ್ರೆಸ್ನಿಂದ ಟಿಕೆಟ್ ನೀಡಬೇಕು. ಅಭಿಶೇಕ್ ಅಂಬರೀಶ್ಗೆ ಜೆಡಿಎಸ್ ಸಹ ಬೆಂಬಲ ನೀಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಂಬರೀಶ್ ಅಭಿಮಾನಿಗಳು ಒತ್ತಾಯ ಮಾಡಿದ್ದಾರೆ.

ನಿಖಿಲ್ ಸ್ಪರ್ಧೆಗೆ ಮಂಡ್ಯ ಕಾಂಗ್ರೆಸ್ ವಿರೋಧ
ಈ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅರವಿಂದ ಕುಮಾರ್ ಮಾತನಾಡಿ, ನಿಖಿಲ್ ಸ್ಪರ್ಧೆಗೆ ನಮ್ಮ ವಿರೋಧವಿದೆ. ಮಂಡ್ಯದಿಂದ ಅಂಬರೀಶ್ ಅವರ ಪುತ್ರ ಅಭಿಷೇಕ್ಗೆ ಟಿಕೆಟ್ ನೀಡಲಿ. ಅವರಿಗೆ ಜೆಡಿಎಸ್ ಸಹ ಬೆಂಬಲ ನೀಡಲಿ ಎಂದಿದ್ದಾರೆ.

ಶಿವರಾಮೇಗೌಡ ಇತ್ತೀಚಿಗಷ್ಟೆ ಗೆದ್ದಿದ್ದಾರೆ
ಇತ್ತೀಚೆಗಷ್ಟೆ ನಡೆದ ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಜೆಡಿಎಸ್ನಿಂದ ಶಿವರಾಮೇಗೌಡ ಗೆದ್ದಿದ್ದಾರೆ. ಈಗ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಯನ್ನು ಬದಲಾಯಿಸುವ ಮಾತನಾಡಲಾಗುತ್ತಿದೆ.

ಸುಮಲತಾಗೆ ಟಿಕೆಟ್ ಕೊಡುವ ಸಾಧ್ಯತೆ
ತಾವು ಬದುಕಿರುವವರೆಗೂ ಮಗ ರಾಜಕೀಯಕ್ಕೆ ಬರಬಾರದು ಎಂಬುದು ಅಂಬರೀಶ್ ಅವರ ಷರತ್ತಾಗಿತ್ತು. ಆದರೆ ಈಗ ಅವರು ಕಾಲವಾಗಿದ್ದಾರೆ. ಈಗ ಅಭಿಶೇಕ್ ಅವರು ರಾಜಕೀಯಕ್ಕೆ ಧುಮುಕಲು ಸಕಾಲ ಎನ್ನಲಾಗುತ್ತಿದೆ. ಅಭಿಶೇಕ್ ಅವರಾಗದಿದ್ದರೆ ಸುಮಲತಾ ಅವರಿಗಾದರೂ ಟಿಕೆಟ್ ಕೊಡಬೇಕು ಎಂಬ ಮಾತುಗಳು ಮಂಡ್ಯದಲ್ಲಿ ಕೇಳಿಬರುತ್ತಿವೆ.

ಮಂಡ್ಯ ಕೈತಪ್ಪಿದರೆ ಚಿಕ್ಕಬಳ್ಳಾಪುರದಿಂದ?
ಹಾಸನದಿಂದ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಚುನಾವಣೆ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಹಾಗಾಗಿ ನಿಖಿಲ್ ಕುಮಾರಸ್ವಾಮಿ ಸಹ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರುತ್ತಿದ್ದಾರೆ ಎನ್ನಲಾಗುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರ ಕೈತಪ್ಪಿದರೆ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications