ಮಂಡ್ಯ ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ಮಂಡ್ಯ, ನವೆಂಬರ್ 24: ಮಂಡ್ಯದ ಕನಗನಮರಡಿಯಲ್ಲಿ ನಡೆದ ಬಸ್ ಅಪಘಾತದಲ್ಲಿ ಮಡಿದವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಕುಮಾರಸ್ವಾಮಿ ಘೋಷಿಸಿದ್ದಾರೆ.

ಮಂಡ್ಯದ ಕನಗನಮರಡಿಯಲ್ಲಿ ಖಾಸಗಿ ಬಸ್‌ ಒಂದು ನಾಲೆಗೆ ಉರುಳಿದ ಪರಿಣಾಮ 25 ಕ್ಕೂ ಹೆಚ್ಚು ಜನ ಮರಣಹೊಂದಿದ್ದಾರೆ. ಘಟನೆ ಬಗ್ಗೆ ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಇದೀಗ ಪರಿಹಾರವನ್ನು ಸರ್ಕಾರದ ವತಿಯಿಂದ ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದು, ಘಟನಾ ಸ್ಥಳಕ್ಕೆ ಧಾವಿಸುತ್ತಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪರಿಹಾರವನ್ನೂ ಘೋಷಿಸುವ ಕಾರ್ಯ ಸಹ ಮಾಡಿದ್ದಾರೆ.

Government announce 5 lakh relief to Mandya accident victims families

ನಾಲೆಗೆ ಬಸ್ ಉರುಳಿದ ಘಟನೆಯಲ್ಲಿ ಬಸ್‌ನಲ್ಲಿದ್ದ ಬಹುತೇಕರು ಅಸುನೀಗಿದ್ದು, ಕೇವಲ ಇಬ್ಬರಷ್ಟೆ ಬದುಕಿ ಮೇಲೆ ಬಂದಿದ್ದಾರೆ ಎನ್ನಲಾಗಿದೆ. ಈವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ 25 ಮಂದಿ ಅಸುನೀಗಿದ್ದಾರೆ, ಆದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+