ಮಂಡ್ಯ: ಮಹಾಕುಂಭಮೇಳಕ್ಕೆ ಸರ್ಕಾರಿ ಆದೇಶ, ಬಸವರಾಜ ಬೊಮ್ಮಾಯಿ ಭರವಸೆ
ಮಂಡ್ಯ, ಅಕ್ಟೋಬರ್, 16; ಪ್ರತಿ 12 ವರ್ಷಕ್ಕೊಮ್ಮೆ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ ನಡೆಯುವಂತೆ ಸರ್ಕಾರಿ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಭಾನುವಾರ (ಅಕ್ಟೋಬರ್ 16) ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳದ ಸಮಾರೋಪದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದೊಂದು ಪವಿತ್ರ ಕ್ಷೇತ್ರವಾಗಿದೆ. ಅಲ್ಲದೆ ಪ್ರವಾಸೋದ್ಯಮ ಕ್ಷೇತ್ರವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸುತ್ತೇನೆ. ಇಲ್ಲಿ ಪ್ರತಿ ನಿತ್ಯ ಧಾರ್ಮಿಕ ಕೈಂಕರ್ಯ ನಡೆಯಲು ಹಾಗೂ ಸಂಗಮದ ಅಭಿವೃದ್ಧಿಗೆ ಅಗತ್ಯವಿರುವಷ್ಟು ಅನುದಾನ ಕೊಡುವುದಾಗಿ ಭರವಸೆ ನೀಡಿದರು.
ಕುಂಭಮೇಳದಿಂದ ಪುಣ್ಯ ಫಲ
ಕುಂಭಮೇಳದ ಪ್ರಾಪ್ತಿ ಪುಣ್ಯಫಲದಿಂದ ಬರುತ್ತದೆ. ಪಾಪವನ್ನು ಕಳೆದು ಪುಣ್ಯವನ್ನು ಬರಿಸಿಕೊಳ್ಳುವ ಧಾರ್ಮಿಕ ವಿಧಿವಿಧಾನ ಕುಂಭಮೇಳ ಆಗಿದೆ. ನದಿಗಳು ಸಂಗಮವಾಗುವದೇ ತೀರ್ಥ ಕ್ಷೇತ್ರ. ನಿಂತ ನೀರಿನಿಂದ ಸಾಧನೆ ಆಗುವುದಿಲ್ಲ. ಹಾಗೆಯೇ ಮನಷ್ಯರು ಚಲನಶಕ್ತಿಯಿಂದ ಆಧ್ಯಾತ್ಮಿಕವಾಗಿ ಮುಂದೆ ಹೋಗಬೇಕು. ಆತ್ಮಸಾಕ್ಷಿ ಇದ್ದರೇ ಆತ್ಮಗೌರವ ಬರಲಿದೆ. ಆತ್ಮಗೌರವ ಇದ್ದವನಿಗೆ ಆತ್ಮ ಶಾಂತಿಯಿದ್ದು, ಅಂತವಹವರು ಸ್ಥಿತಪ್ರಜ್ಞನಾಗುತ್ತಾರೆ. ಇದು ಪ್ರಾಪ್ತಿ ಆಗಬೇಕಾದರೆ ಒಂದು ಗುರು, ಇನ್ನೊಂದು ಗುರಿ ಇರಬೇಕು. ಕರಾರುರಹಿತ ಪ್ರೀತಿಯೇ ಭಕ್ತಿ ಆಗಿರುತ್ತದೆ. ಈ ಭಕ್ತಿಯನ್ನು ಗುರುವಿನಲ್ಲಿ ಇಡಬೇಕು. ಗುರುವಿನಲ್ಲಿ ಭಕ್ತಿ ಸಮರ್ಪಣೆ ಮಾಡಿ ಲೀನವಾಗಬೇಕು. ಗುರುವಿನ ಆಶೀರ್ವಾದ ಇದ್ದರೆ ಮನುಷ್ಯನಲ್ಲಿ ತ್ರಿವೇಣಿ ಸಂಗಮವಾಗಿ ಮೋಕ್ಷ, ಸಾಕ್ಷತ್ಕಾರ ಸಿಗಲಿದೆ ಎಂದರು.

ಈ ಸಂದರ್ಭದಲ್ಲಿ ಆದಿಚುಂಚನಗಿರಿ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಅವಧೂತ ವಿನಯ್ ಗುರೂಜಿ, ಚಂದ್ರವನ ಆಶ್ರಮದ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಪಾದರು, ಮಾದರಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದರಚನ್ನಯ್ಯ ಸ್ವಾಮೀಜಿ, ಗುಜರಾತ್ನ ಹಿಂದೂ ಧರ್ಮ ಆಚಾರ್ಯ ಸಭಾದ ಪರಮಾತ್ಮಾನಂದ ಸರಸ್ವತಿ ಸ್ವಾಮೀಜಿ, ಶಾಸಕ ಹರ್ಷವರ್ಧನ್, ಮಾಜಿ ಸಚಿವ ಬಿ.ಸೋಮಶೇಖರ್, ಮಾಜಿ ಶಾಸಕ ಡಿ.ಮಾದೇಗೌಡ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು.ಸಿದ್ಧಲಿಂಗಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications