ಮಂಡ್ಯ: ಮುಚ್ಚುವ ಹಂತದಲ್ಲಿ ಸಿಎಂ ಬಿಎಸ್ವೈ ಓದಿದ ಸರ್ಕಾರಿ ಶಾಲೆ

ಮಂಡ್ಯ, ಸೆಪ್ಟೆಂಬರ್ 10: ಕಳೆದ ಇಪ್ಪತ್ತು ವರ್ಷಗಳ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳಿದ್ದ ಶಾಲೆ ಅದು. ಆ ಶಾಲೆಯಲ್ಲಿ ಸಿಎಂ ಯಡಿಯೂರಪ್ಪನವರು ಸಹ ಅಭ್ಯಾಸ ಮಾಡಿದ್ದರು. ಸದ್ಯ ಈ ಶಾಲೆಯಲ್ಲಿ ಇರುವುದು ಕೇವಲ 8 ವಿದ್ಯಾರ್ಥಿಗಳು ಮತ್ತು 4 ಜನ ಶಿಕ್ಷಕರಿದ್ದಾರೆ.

ಮಂಡ್ಯ ನಗರದ ಆನೆಕೆರೆ ಬೀದಿಯಲ್ಲಿರುವ ಈ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪನವರು ವ್ಯಾಸಂಗ ಮಾಡಿದ್ದರು. ಅವರು 1954-55 ರಲ್ಲಿ ಮೂರನೇ ತರಗತಿ ದಾಖಲಾಗಿ ವ್ಯಾಸಂಗ ಮಾಡಿದ್ದರು. ಆದರೆ ಸದ್ಯ ಈ ಶಾಲೆ ಮುಚ್ಚುವ ಹಂತದಲ್ಲಿದೆ.

ಆಗ ಸಿಎಂ ಯಡಿಯೂರಪ್ಪ ಓದಿದ್ದ ಇದೇ ಶಾಲೆ ಇಂದು ಮುಚ್ಚುವ ದುಸ್ಥಿತಿಗೆ ತಲುಪಿದೆ. ಸರಿಯಾದ ನಿರ್ವಹಣೆ ಇಲ್ಲದೆ ಶಾಲೆಯ ಕಟ್ಟಡ ಶಿಥಿಲವಾಗಿದ್ದರೆ, ಮತ್ತೊಂದು ಕಡೆ ಶಾಲೆಗೆ ಓದಲು ಮಕ್ಕಳಿಲ್ಲದ ಪರಿಸ್ಥಿತಿ ಎದುರಾಗಿದೆ. ಸದ್ಯ ಈ ಶಾಲೆಯಲ್ಲಿ ಕೇವಲ 8 ಜನ ಮಕ್ಕಳಿದ್ದರೆ, ಅವರಿಗೆ 4 ಜನ ಶಿಕ್ಷಕರಿದ್ದಾರೆ. ಈ ಹಿಂದೆ 800 ರಿಂದ 900 ಮಕ್ಕಳು ಈ ಶಾಲೆಯಲ್ಲಿ ಕಲಿಯುತ್ತಿದ್ದರು.

Govt School In Mandya Where CM Yediyurappa Studied Is In Danger Of Closing Down

ಈ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಏಕೆ ಕಡಿಮೆಯಾಗಿದೆ ಎಂದು ಕೇಳಿದರೆ, ಸದ್ಯ ಈ ಶಾಲೆ ಇರುವ ಪ್ರದೇಶ ವಾಣಿಜ್ಯ ವಹಿವಾಟಿನ ಕೇಂದ್ರವಾಗಿದೆ. ಹೀಗಾಗಿ ಇಲ್ಲಿಗೆ ವಿದ್ಯಾರ್ಥಿಗಳು ಬರುತ್ತಿಲ್ಲ. ಮುಂದಿನ ದಿನಗಳಲ್ಲಿ ಈ ಶಾಲೆಗೆ ಹೆಚ್ಚು ವಿದ್ಯಾರ್ಥಿಗಳು ಬರುವಂತೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಹೇಳಿದರು.

ಶಾಲೆಯ ಕಟ್ಟಡ ಅಭಿವೃದ್ಧಿಯ ಕುರಿತು ಕೇಳಿದರೆ, ಹೀಗಾಗಲೇ ನಾವು 6 ಲಕ್ಷ ರುಪಾಯಿಯನ್ನು ಶಾಲೆಯ ಅಭಿವೃದ್ಧಿಗೆ ನೀಡಿದ್ದು, ನಿರ್ಮಿತಿ ಕೇಂದ್ರದ ಮೂಲಕ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಕೆಲವೇ ದಿನಗಳಲ್ಲಿ ಶಾಲೆಯ ಕಟ್ಟಡವನ್ನು ದುರಸ್ಥಿಪಡಿಸಿ, ಹೆಚ್ಚು ಮಕ್ಕಳು ಈ ಶಾಲೆಗೆ ಬರುವಂತಹ ವಾತಾವರಣವನ್ನು ಸೃಷ್ಟಿ ಮಾಡುತ್ತೇವೆ ಎನ್ನುತ್ತಾರೆ. ಸಿಎಂ ಯಡಿಯೂರಪ್ಪ ನವರು ಓದಿದ ಶತಮಾನದ ಶಾಲೆಯಾಗಿದೆ. ಆದರೆ ಇದರ ಘನತೆ ಮಾತ್ರ ಈಗ ಶಾಲೆಗೆ ಇಲ್ಲದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+