ಮಂಡ್ಯದಲ್ಲಿ ಬಂಡಾಯ ಶಾಸಕರ ವಿರುದ್ಧ ಎಚ್ಡಿಕೆ ವಾಗ್ದಾಳಿ
ಮಂಡ್ಯದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಜೆಡಿಎಸ್ ಬಂಡಾಯ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದರು.
ಮಂಡ್ಯ, ಏಪ್ರಿಲ್ 24: ಜೆಡಿಎಸ್ ನಿಂದ ಬಂಡಾಯವೆದ್ದು ಹೊರ ಹೋಗಿರುವ ಶಾಸಕರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಡುವಿನ ಮಾತಿನ ಜಟಾಪಟಿ ಮುಂದುವರೆದಿದೆ. 'ನನ್ನ ಬದುಕು ತೆರೆದ ಪುಸ್ತಕ ಒಂದು ವೇಳೆ ನಿಮ್ಮ ಬಳಿ ನನ್ನ ಕುರಿತ ನಗ್ನ ಸತ್ಯವಿದ್ದರೆ, ಅದನ್ನು ಬಿಚ್ಚಿಡಿ ನೋಡೋಣ' ಎಂದು ಬಂಡಾಯ ಶಾಸಕರಿಗೆ ಎಚ್.ಡಿ.ಕುಮಾರಸ್ವಾಮಿ ಸವಾಲು ಎಸೆದಿದ್ದಾರೆ.
ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, 'ನನ್ನನ್ನು ಹೆದರಿಸಿ ರಾಜಕೀಯ ಮಾಡುತ್ತೇನೆ ಎನ್ನುವ ನಿಮ್ಮ ಕನಸು ಈ ಜನ್ಮದಲ್ಲಿ ನನಸಾಗುವುದಿಲ್ಲ ಎಂದು ಬಂಡಾಯ ಶಾಸಕರನ್ನುದ್ದೇಶಿಸಿ ನುಡಿದರು. ಅಲ್ಲದೆ, ಚಲುವರಾಯಸ್ವಾಮಿ ಅವರನ್ನು ಸೋಲಿಸುವುದು ನನ್ನ ಗುರಿಯಲ್ಲ. ಅದಕ್ಕಾಗಿ ನನಗೆ ಅಧಿಕಾರ ಬೇಕಿಲ್ಲ. ರೈತರ ಉದ್ಧಾರ ನನ್ನ ಜೀವನದ ಗುರಿ' ಎಂದರು.['ಕಾನೂನಿನ ಹೆಸರಿನಲ್ಲಿ ಕರಾವಳಿಯಲ್ಲಿ ದೌರ್ಜನ್ಯ' - ಕುಮಾರಸ್ವಾಮಿ]

ಸಾಲ ಬಾಧೆ ತಾಳಲಾರದೆ ಜಿಲ್ಲೆಯಲ್ಲಿ ಸುಮಾರು 150ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಾಗ, ಸರ್ಕಾರ ಸಹಾಯ ಮಾಡದಿದ್ದರೂ ನಾನು 50 ರಿಂದ 1 ಲಕ್ಷ ರೂ. ಸಹಾಯ ಧನ ನೀಡಿದ್ದೇನೆ. ಆಗ ಈ ನೆಲದ ಸ್ವಂತ ಮಗ ಎಲ್ಲಿಗೆ ಹೋಗಿದ್ದ ಎಂದು ಚಲುವರಾಯಸ್ವಾಮಿ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದರು.
ಜಮೀರ್ ಅಹಮದ್ ರಾಜಕೀಯಕ್ಕೆ ಬರದಿದ್ದರೆ ಹೇಗಿರುತ್ತಿದ್ದರು ಅನ್ನೋದು ಗೊತ್ತು. ರಾಜಕೀಯಕ್ಕೆ ಬಂದು ಏನೆಲ್ಲಾ ಮಾಡಿದ್ದಾರೆ ಅಂತಾನೂ ಗೊತ್ತು. ಹತ್ತು ವರ್ಷ ನನ್ನ ಜೊತೆ ಇದ್ದರು. ಯಾವುದಕ್ಕೆ ನನ್ನ ಜೊತೆ ಕೈ ಜೋಡಿಸಿದ್ದಾರೆ. ದೇವೇಗೌಡರ ಬಗ್ಗೆ ಬಹಳ ಹಗುರವಾಗಿ ಮಾತನಾಡಿದ್ದಾರೆ. ನಾನು ನೋಡಿದಂತೆ ಯಾರೂ ಅಷ್ಟು ಮಾತನಾಡಿರಲಿಲ್ಲ. ನಿಮ್ಮ ಸಹವಾಸ ಮಾಡಿದ್ದಕ್ಕೆ ನೀವು ಕೊಟ್ಟ ಸರ್ಟಿಫಿಕೇಟ್ ಸಾಕು. ನಾವು ಇನ್ನು ಮುಂದೆ ನಿಮ್ಮ ಬಗ್ಗೆ ಮಾತನಾಡೋಲ್ಲ. ನೀವೂ ನಮ್ಮ ಬಗ್ಗೆ ಮಾತನಾಡಬೇಡಿ ಎಂದು ಹೇಳಿದರು.
ನಾನು ಅಧಿಕಾರ ಕೇಳ್ತಿರೋದು ದರ್ಪ ತೋರಿಸುವುದಕ್ಕಲ್ಲ. ರೈತರು ಮತ್ತು ರೈತರ ಕುಟುಂಬಗಳನ್ನು ಉಳಿಸೋಕೆ ಎಂದ ಅವರು, ಮತ ನೀಡಿ ಅಧಿಕಾರ ಕೊಟ್ಟರೆ 24 ಗಂಟೆಯೊಳಗೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದಾಗಿ ಹೇಳಿದರು.
'ರೈತರ ಸಂಕಷ್ಟ ಮನಗಂಡು ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ನನ್ನ ಕೈಲಾದಷ್ಟು ಧನ ಸಹಾಯ ಮಾಡಿದ್ದೇನೆ. ಅವರ ಎಲ್ಲಾ ಸಮಸ್ಯೆಗಳಿಗೆ ಪರಿಹರಿಸಲು ನಾನೇನು ಸಾಹುಕಾರನಲ್ಲ. ನನ್ನ ಬಳಿ ಅಧಿಕಾರವೂ ಇಲ್ಲ. ಜನರು ಅಧಿಕಾರ ನೀಡಿದರೆ ಅವರ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸೂಚಿಸುತ್ತೇನೆ' ಎಂದು ಭರವಸೆ ನೀಡಿದರು.
'ದೇವರ ಮೇಲೆ ಆಣೆ ಮಾಡಿ ಎನ್ನುವ ಜಮೀರ್, ಎಷ್ಟು ಸಲ ಅವರ ತಾಯಿ ಮೇಲೆ ಆಣೆ ಮಾಡಿದ್ದಾರೆ? ಅವರಿಗೆ ಹೆತ್ತ ತಾಯಿಯ ಮೇಲೆ ನಂಬಿಕೆ ಇಲ್ಲ. ಇನ್ನು ದೇವರ ಮೇಲೆ ನಂಬಿಕೆ ಬರಲು ಹೇಗೆ ಸಾಧ್ಯ ಎಂದು ಕಟುವಾಗಿ ಹೇಳಿದರರು. ಹತ್ತು ವರ್ಷ ಎಲ್ಲವನ್ನೂ ತಡೆದುಕೊಂಡು ಬಂದಿದ್ದೇನೆ. ಇವರೆಲ್ಲಾ ಸೇರಿ ನನಗೆ ಅಷ್ಟೆಲ್ಲಾ ಚಿತ್ರಹಿಂಸೆ ಕೊಟ್ಟಿದ್ದಾರೆ. ಸಿಎಂ ಆದ ಮೂರೇ ತಿಂಗಳಿಗೆ ನನ್ನನ್ನ ಅಧಿಕಾರದಿಂದ ಇಳಿಸೋಕೆ ಹೊರಟಿದ್ರು. ಇದನ್ನು ಮಂಡ್ಯದ ಜನರು ಮರೆತಿಲ್ಲ ಎಂದು ಛೇಡಿಸಿದರು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications