ದರ್ಶನ್ರನ್ನು ನನ್ನ ಮಗು ಅಂದುಕೊಳ್ಳಿ; ಹಂಸಲೇಖ ಅಚ್ಚರಿಯ ಹೇಳಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಬಗ್ಗೆ ಮೌನ ತಾಳಿದ್ದ ಚಿತ್ರರಂಗದ ಹಿರಿಯ ಕಲಾವಿದರು ಈಗ ಮಾತನಾಡಲು ಶುರು ಮಾಡಿದ್ದಾರೆ. ಇತ್ತಿಚೆಗೆ ತಾನೆ ರಕ್ಷಿತ ಮತ್ತು ಪ್ರೇಮ್ ದರ್ಶನ್ರನ್ನು ಭೇಟಿ ಮಾಡಿ ಬಂದಿದ್ದಾರೆ. ದರ್ಶನ್ ಪ್ರಕರಣದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ಕೂಡ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಮಂಡ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹಂಸಲೇಖ, ದರ್ಶನ್ ಪ್ರಕರಣವನ್ನು ಪ್ರಸ್ತಾಪಿಸಿದರು. ಆತನನ್ನು ನನ್ನ ಮಗು ಎಂದುಕೊಳ್ಳಿ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ದರ್ಶನ್ ಬಂಧನ ಪ್ರಕರಣ ಕನ್ನಡ ಚಿತ್ರರಂಗಕ್ಕೆ ಕೆಟ್ಟ ಹೆಸರು ಎನ್ನುವ ಬಗ್ಗೆ ಮಾತನಾಡಿದ ಅವರು, ದರ್ಶನ್ ಅತ್ಯುತ್ತನ್ನ ಸ್ಥಾನಕ್ಕೆ ಏರಿದವನು, ಆತ ಕೆಳಗೆ ಬೀಳುವುದು ಬೇಡ, ಮಲಯಾಳಂ ಚಿತ್ರರಂಗ ಕೂಡ ಹೀಗೆ ಆಗಿತ್ತು, ಆದರೆ ಈಗ ಅದು ಉತ್ತುಂಗದಲ್ಲಿದೆ ಎಂದರು.
ಮಲಯಾಳಂ ಸಿನಿಮಾ ರಂಗ ಕೆಳಗೆ ಬಿದ್ದು ಮೇಲೆ ಎದ್ದಿದೆ. ನಮ್ಮದು ಚಂದನವನ ಕಣ್ರಯ್ಯ, ಒಂದು ಮಳೆಗೆ ಮರ ಒಣಗಿದರೂ, ಇನ್ನೊಂದು ಮಳೆಗೆ ಕಾಡು ಬೆಳೆಯುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.
ಸಿಟ್ಟನ್ನು ಸ್ಕ್ರಿಪ್ಟ್ ಮಾಡಬಾರದು
ಸಿನಿಮಾದವರು ಸಿಟ್ಟನ್ನು ಸ್ಕ್ರಿಪ್ಟ್ ಮಾಡಬೇಕು, ದ್ವೇಷವನ್ನು ಕ್ಯಾರೆಕ್ಟರ್ ಮಾಡಬೇಕು. ಅದನ್ನು ಸಿನಿಮಾದಲ್ಲಿ ಮಾತ್ರ ತೋರಿಸಬೇಕು, ನಿಜ ಜೀವನದಲ್ಲಿ ಅದನ್ನೆಲ್ಲಾ ತರಬಾರದು. ಇದು ಕಲಾವಿದ ಕರ್ತವ್ಯ ಎಂದು ದರ್ಶನ್ಗೆ ಹಂಸಲೇಖ ಕಿವಿಮಾತು ಹೇಳಿದರು.
ನನ್ನ ಮಗು ಎಂದುಕೊಳ್ಳಿ
ದರ್ಶನ್ ನನ್ನ ಮಗು. ಮಗು ತಪ್ಪು ಮಾಡಿದಾಗ ತಂದೆ ಎಷ್ಟು ನೋವು ತಿಂತಾರೋ ಅಷ್ಟೇ ನೋವನ್ನು ನಾನು ಅನುಭವಿಸುತ್ತಿದ್ದೇನೆ. ಆ ಮಗು ಕೂಡ ಅಷ್ಟೇ ನೋವು ಪಡುತ್ತಿರುತ್ತದೆ ಎಂದು ದರ್ಶನ್ ಪರ ಕರುಣೆಯ ಮಾತನಾಡಿದ್ದಾರೆ.
ದರ್ಶನ್ ಕನ್ನಡ ಚಿತ್ರರಂಗಕ್ಕೆ ಕೊಟ್ಟಿರುವ ಕೊಡುಗೆಗಳ ಬಗ್ಗೆ ಕೂಡ ನೋಡೋಣ. ಕನ್ನಡ ಚಿತ್ರರಂಗ ಎಷ್ಟು ಕೀರ್ತಿ ಪಡೆದುಕೊಂಡಿತ್ತು, ಎಷ್ಟೊಂದು ಪ್ರಶಸ್ತಿಗಳನ್ನು ಪಡೆದಿತ್ತು, ಮೇಲಿದ್ದವರು ಕೆಳಗೆ ಬೀಳಬೇಕು, ಆದರೆ ದರ್ಶನ್ ಪ್ರಕರಣದಲ್ಲಿ ಅದಾಗಬಾರದು ಎಂದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications