ದರ್ಶನ್ರನ್ನು ನನ್ನ ಮಗು ಅಂದುಕೊಳ್ಳಿ; ಹಂಸಲೇಖ ಅಚ್ಚರಿಯ ಹೇಳಿಕೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಬಗ್ಗೆ ಮೌನ ತಾಳಿದ್ದ ಚಿತ್ರರಂಗದ ಹಿರಿಯ ಕಲಾವಿದರು ಈಗ ಮಾತನಾಡಲು ಶುರು ಮಾಡಿದ್ದಾರೆ. ಇತ್ತಿಚೆಗೆ ತಾನೆ ರಕ್ಷಿತ ಮತ್ತು ಪ್ರೇಮ್ ದರ್ಶನ್ರನ್ನು ಭೇಟಿ ಮಾಡಿ ಬಂದಿದ್ದಾರೆ. ದರ್ಶನ್ ಪ್ರಕರಣದ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ಕೂಡ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಮಂಡ್ಯದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹಂಸಲೇಖ, ದರ್ಶನ್ ಪ್ರಕರಣವನ್ನು ಪ್ರಸ್ತಾಪಿಸಿದರು. ಆತನನ್ನು ನನ್ನ ಮಗು ಎಂದುಕೊಳ್ಳಿ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ದರ್ಶನ್ ಬಂಧನ ಪ್ರಕರಣ ಕನ್ನಡ ಚಿತ್ರರಂಗಕ್ಕೆ ಕೆಟ್ಟ ಹೆಸರು ಎನ್ನುವ ಬಗ್ಗೆ ಮಾತನಾಡಿದ ಅವರು, ದರ್ಶನ್ ಅತ್ಯುತ್ತನ್ನ ಸ್ಥಾನಕ್ಕೆ ಏರಿದವನು, ಆತ ಕೆಳಗೆ ಬೀಳುವುದು ಬೇಡ, ಮಲಯಾಳಂ ಚಿತ್ರರಂಗ ಕೂಡ ಹೀಗೆ ಆಗಿತ್ತು, ಆದರೆ ಈಗ ಅದು ಉತ್ತುಂಗದಲ್ಲಿದೆ ಎಂದರು.
ಮಲಯಾಳಂ ಸಿನಿಮಾ ರಂಗ ಕೆಳಗೆ ಬಿದ್ದು ಮೇಲೆ ಎದ್ದಿದೆ. ನಮ್ಮದು ಚಂದನವನ ಕಣ್ರಯ್ಯ, ಒಂದು ಮಳೆಗೆ ಮರ ಒಣಗಿದರೂ, ಇನ್ನೊಂದು ಮಳೆಗೆ ಕಾಡು ಬೆಳೆಯುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.
ಸಿಟ್ಟನ್ನು ಸ್ಕ್ರಿಪ್ಟ್ ಮಾಡಬಾರದು
ಸಿನಿಮಾದವರು ಸಿಟ್ಟನ್ನು ಸ್ಕ್ರಿಪ್ಟ್ ಮಾಡಬೇಕು, ದ್ವೇಷವನ್ನು ಕ್ಯಾರೆಕ್ಟರ್ ಮಾಡಬೇಕು. ಅದನ್ನು ಸಿನಿಮಾದಲ್ಲಿ ಮಾತ್ರ ತೋರಿಸಬೇಕು, ನಿಜ ಜೀವನದಲ್ಲಿ ಅದನ್ನೆಲ್ಲಾ ತರಬಾರದು. ಇದು ಕಲಾವಿದ ಕರ್ತವ್ಯ ಎಂದು ದರ್ಶನ್ಗೆ ಹಂಸಲೇಖ ಕಿವಿಮಾತು ಹೇಳಿದರು.
ನನ್ನ ಮಗು ಎಂದುಕೊಳ್ಳಿ
ದರ್ಶನ್ ನನ್ನ ಮಗು. ಮಗು ತಪ್ಪು ಮಾಡಿದಾಗ ತಂದೆ ಎಷ್ಟು ನೋವು ತಿಂತಾರೋ ಅಷ್ಟೇ ನೋವನ್ನು ನಾನು ಅನುಭವಿಸುತ್ತಿದ್ದೇನೆ. ಆ ಮಗು ಕೂಡ ಅಷ್ಟೇ ನೋವು ಪಡುತ್ತಿರುತ್ತದೆ ಎಂದು ದರ್ಶನ್ ಪರ ಕರುಣೆಯ ಮಾತನಾಡಿದ್ದಾರೆ.
ದರ್ಶನ್ ಕನ್ನಡ ಚಿತ್ರರಂಗಕ್ಕೆ ಕೊಟ್ಟಿರುವ ಕೊಡುಗೆಗಳ ಬಗ್ಗೆ ಕೂಡ ನೋಡೋಣ. ಕನ್ನಡ ಚಿತ್ರರಂಗ ಎಷ್ಟು ಕೀರ್ತಿ ಪಡೆದುಕೊಂಡಿತ್ತು, ಎಷ್ಟೊಂದು ಪ್ರಶಸ್ತಿಗಳನ್ನು ಪಡೆದಿತ್ತು, ಮೇಲಿದ್ದವರು ಕೆಳಗೆ ಬೀಳಬೇಕು, ಆದರೆ ದರ್ಶನ್ ಪ್ರಕರಣದಲ್ಲಿ ಅದಾಗಬಾರದು ಎಂದರು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications