ಹನುಮಧ್ವಜ ವಿವಾದ: ಶುಕ್ರವಾರ ಮಂಡ್ಯ-ಕೆರಗೋಡು ಬಂದ್ಗೆ ಕರೆ
ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 9ರಂದು ಕೆರಗೋಡು ಹಾಗೂ ಮಂಡ್ಯ ಬಂದ್ಗೆ ಶ್ರೀರಾಮಭಜನಾ ಮಂಡಳಿ, ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗ ದಳ ಸಂಘಟನೆಗಳು ಕರೆ ನೀಡಿವೆ.
ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವ ಸಲುವಾಗಿ ಫೆ.7 (ಬುಧವಾರ) ಪ್ರಗತಿಪರ ಸಂಘನೆಗಳು ಮಂಡ್ಯ ಬಂದ್ ಕರೆ ನೀಡಿದ್ದವು. ಜಿಲ್ಲಾಡಳಿತ ಅವರೊಂದಿಗೆ ಮಾತುಕತೆ ನಡೆಸುವ ಮೂಲಕ ಮಂಡ್ಯ ಬಂದ್ ಕರೆಯನ್ನು ಹಿಂಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿತ್ತು. ಅದೇ ರೀತಿ ಫೆ.9ರಂದು ನೀಡಿರುವ ಬಂದ್ನ್ನು ಹಿಂಪಡೆಯುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದವು.

ಜಿಲ್ಲಾಡಳಿತ ವಿಶ್ವಹಿಂದೂಪರಿಷತ್, ಭಜರಂಗದಳ ಕಾರ್ಯಕರ್ತರೊಂದಿಗೂ ಮಾತುಕತೆ ನಡೆಸಿ ಬಂದ್ನಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಜನಸಾಮಾನ್ಯರು, ವ್ಯಾಪಾರಸ್ಥರಿಗೆ ಉಂಟಾಗುವ ತೊಂದರೆ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಮನವರಿಕೆ ಮಾಡಿಕೊಟ್ಟಿದ್ದರು. ಸಭೆಯಲ್ಲಿ ಸ್ಪಷ್ಟವಾಗಿ ಏನನ್ನೂ ತಿಳಿಸದೆ ಪರಸ್ಪರರು ಕುಳಿತು ಮಾತುಕತೆ ನಡೆಸಿ ವಿಷಯ ತಿಳಿಸುವುದಾಗಿ ಹೇಳಿಬಂದಿದ್ದರು.
ಬಳಿಕ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಕೆರಗೋಡು ಶ್ರೀರಾಮ ಭಜನಾ ಮಂಡಳಿಯವರು ಫೆ.9 ರಂದು ಸ್ವಯಂಘೋಷಿತ ಬಂದ್ಗೆ ಕರೆ ನೀಡಿದ್ದು, ವರ್ತಕರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಬೆಂಬಲ ಸೂಚಿಸುವಂತೆ ಮನವಿ ಮಾಡಿವೆ.
ಬೈಕ್ ರ್ಯಾಲಿ
ಫೆ.9ರಂದು ಕೆರಗೋಡು ಬಂದ್ಗೆ ಕರೆ ನೀಡಿರುವ ಶ್ರೀರಾಮ ಭಜನಾ ಮಂಡಳಿಯವರು ಅಂದು ಬೆಳಗ್ಗೆ 9 ಗಂಟೆಗೆ ಕೆರಗೋಡಿನಲ್ಲಿ ಹನುಮಧ್ವಜ ಇಳಿಸಿದ ಸ್ಥಳದಿಂದ ನೂರಾರು ಬೈಕ್ಗಳೊಂದಿಗೆ ಮಂಡ್ಯ ನಗರ ರೈಲ್ವೆ ನಿಲ್ದಾಣದ ಬಳಿಯ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನ ಆಗಮಿಸಲಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ವೌನ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಕೆರಗೋಡು ಬಂದ್ಗೆ ಸ್ಥಳೀಯ ವರ್ತಕರು, ಭಜರಂಗಸೇನೆ, ಕರ್ನಾಟಕ ರಕ್ಷಣಾ ವೇದಿಕೆ, ಹೋಟೆಲ್ ಮಾಲೀಕರು, ಕಾರು, ಲಾರಿ ಮಾಲೀಕರ ಸಂಘ, ಚಿತ್ರಮಂದಿರ ಸೇರಿದಂತೆ ಎಲ್ಲರೂ ಬೆಂಬಲ ಘೋಷಿಸಿರುವುದಾಗಿ ವೀಡಿಯೋ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಕುಟಿಲ ನೀತಿಯಿಂದಾಗಿ ಅರ್ಜುನ ಧ್ವಜಸ್ತಂಭದಲ್ಲಿದ್ದ ಶ್ರೀ ಹನುಮಧ್ವಜವನ್ನು ಇಳಿಸಿ ಹಿಂದೂ ಧರ್ಮಕ್ಕೆ, ಹಿಂದೂ ಧರ್ಮದವರ ಭಾವನೆಗಳಿಗೆ ಅವಮಾನ ಮಾಡಿದ್ದಾರೆ. ಮತ್ತೆ ಧ್ವಜಸ್ತಂಭದಲ್ಲಿ ಹನುಮಧ್ವಜ ಹಾರಾಟಕ್ಕೆ ಅವಕಾಶ ಮಾಡಿಕೊಡುವಂತೆ ಕೋರಿ ಬಂದ್ ಆಚರಿಸಲಾಗುತ್ತಿದ್ದು, ಇದಕ್ಕೆ ಎಲ್ಲರೂ ಬೆಂಬಲ ಸೂಚಿಸುವಂತೆ ವಿಶ್ವ ಹಿಂದೂಪರಿಷತ್ ಕಾರ್ಯದರ್ಶಿ ಬಸವರಾಜು ಮನವಿ ಮಾಡಿದ್ದಾರೆ
ಬಲವಂತದ ಬಂದ್ ಮಾಡುವಂತಿಲ್ಲ
ಶಾಂತಿಯುತವಾಗಿ ಬಂದ್ ಮಾಡಿದರೆ ನಮ್ಮ ಅಭ್ಯಂತರವಿಲ್ಲ. ಒಮ್ಮೆ ಬಲವಂತವಾಗಿ ಅಂಗಡಿ ಮುಚ್ಚಿಸುವುದು, ಶಾಂತಿ ಕದಡುವಂತೆ ಮಾಡುವುದು, ಸಾರ್ವಜನಿಕರಿಗೆ ತೊಂದರೆ ಕೊಡುವುದು, ಕಾನೂನು-ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವುದಕ್ಕೆ ಮುಂದಾದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿರುವ ಧ್ವಜಕಂಬದಲ್ಲಿ ರಾಷ್ಟ್ರೀಯ ಹಬ್ಬಗಳಂದು ರಾಷ್ಟ್ರಧ್ವಜ ಮತ್ತು ಕನ್ನಡ ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸುವುದಕ್ಕಷ್ಟೇ ಅನುಮತಿ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು, ಜನರನ್ನು ತಪ್ಪುದಾರಿಗೆ ಎಳೆಯುವುದು ಸರಿಯಲ್ಲ ಎಂದು ಅವರು ಹೇಳಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications