ಮಂಡ್ಯದಲ್ಲಿ ಜೆಡಿಎಸ್ ಸಮಾವೇಶ ದಿಢೀರ್ ಕ್ಯಾನ್ಸಲ್, ಕಾರಣವೇನು?
ಒಂದೆಡೆ ಕಾಂಗ್ರೆಸ್ ಸಾಲು ಸಾಲಾಗಿ ಸಮಾವೇಶಗಳನ್ನು ಆಯೋಜಿಸಿ ಶಕ್ತಿ ಪ್ರದರ್ಶನ ಮಾಡುತ್ತಿದೆ. ಇದಕ್ಕೆ ಟಕ್ಕರ್ ಕೊಡಲು ಜೆಡಿಎಸ್ ಕೂಡ ಎಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನ ಹಾಗೂ ಅಭಿನಂದನಾ ಸಮಾರಂಭದ ಹೆಸರಿನಲ್ಲಿ ಮಂಡ್ಯದಲ್ಲಿ ಬೃಹತ್ ಸಮಾವೇಶ ಆಯೋಜಿಸಲು ನಿರ್ಧರಿಸಿತ್ತು. ಇದೀಗ ಆ ಕಾರ್ಯಕ್ರಮವನ್ನು ದಿಢೀರನೆ ಮುಂದೂಡಲಾಗಿದೆ.
ಹೌದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ಮಂಡ್ಯದಲ್ಲಿ ಇದೇ ಡಿಸೆಂಬರ್ 15ರಂದು ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮಾಹಿತಿ ನೀಡಿದ್ದಾರೆ.

ಮಂಡ್ಯ ನಗರದಲ್ಲಿ ಡಿಸೆಂಬರ್ 20ರಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವ ಕಾರಣ ಈ ಸಮಾವೇಶವನ್ನು ಮುಂಡೂಡಿರುವುದಾಗಿ ಅವರು ಹೇಳಿದ್ದಾರೆ. ಸಾಹಿತ್ಯ ಸಮ್ಮೇಳನದ ಅವಧಿಯಲ್ಲಿ ಅಭಿನಂದನಾ ಸಮಾರಂಭ ನಡೆಸುವುದರಿಂದ ಗೊಂದಲ ಉಂಟಾಗುತ್ತದೆ. ಹಾಗಾಗಿ ಈ ಅಭಿನಂದನಾ ಕಾರ್ಯಕ್ರಮವನ್ನು ಮುಂದೂಡುವಂತೆ ಎಚ್.ಡಿ.ಕುಮಾರಸ್ವಾಮಿ ಅವರು ಸೂಚನೆ ನೀಡಿದ್ದಾರೆ. ಅದರಂತೆ ಸದ್ಯಕ್ಕೆ ಈ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಪುಟ್ಟರಾಜು ಸ್ಪಷ್ಟನೆ ನೀಡಿದ್ದಾರೆ.
ಇನ್ನು ಈ ಸಮಾರಂಭ ಮುಂದೂಡಿಕೆ ಮಾಡಲು ಬೇರೆ ಯಾವ ಕಾರಣ ಕೂಡ ಇಲ್ಲ. ಕನ್ನಡ ಸಾಹಿತ್ಯ ಸಮ್ಮೇಳನ ಮುಕ್ತಾಯ ಆದ ಬಳಿಕ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಚಿವ ಚೆಲುವರಾಯಸ್ವಾಮಿ ವಿರುದ್ಧ ವಾಗ್ದಾಳಿ: ಪುಟ್ಟರಾಜು ಅವರು ಕಾಂಗ್ರೆಸ್ ಸಚಿವ ಚೆಲುವರಾಯಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ಇದೆಲ್ಲ ಬಹಳ ದಿನ ನಡೆಯಲ್ಲ, ರಾಜಕಾರಣದಲ್ಲಿ ನಾನೂ ಅಧಿಕಾರ ನೋಡಿದ್ದೀನಿ. ಮೊದಲು ಗೌರವದಿಂದ ಮಾತನಾಡುವುದನ್ನು ಅವರು ಕಲಿಯಬೇಕು, ಇದನ್ನು ನಿಲ್ಲಿಸದಿದ್ರೆ ನಾವು ಕೂಡ ನಮ್ಮ ಶೈಲಿಯಲ್ಲೇ ಮಾತನಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ಜೆಡಿಎಸ್ನವರು ಚೆಲುವರಾಯಸ್ವಾಮಿ ಅವರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಡೆ ಇರಬೇಕೋ, ಡಿಸಿಎಂ ಡಿ.ಕೆ.ಶಿವಕುಮಾರ್ ಕಡೆಗೆ ಇರಬೇಕೋ ಎನ್ನುವ ಗೊಂದಲದಲ್ಲಿಲ್ಲ. ನಾವೆಲ್ಲ ಎಲ್ಲಿದ್ರೂ ದೇವೇಗೌಡರ ಕಡೇನೇ ಇರುತ್ತೇನೆ ಎಂದು ತಿರುಗೇಟು ನೀಡಿದ್ದಾರೆ. ನಿಖಿಲ್ ಸೋತಿದ್ದು ನಮ್ಮಿಂದ ಎಂಬರ್ಥದಲ್ಲಿ ಅವರು ಮಾತನಾಡುತ್ತಾರೆ. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇದ್ದಾಗಲೂ ನಿಖಿಲ್ ಚುನಾವಣೆಯಲ್ಲಿ ಸೋತರು. ಆಗ ಇವರೆಲ್ಲ ಏನು ಮಾಡಿದರು? ಮಂಡ್ಯ ಜನ ಅಂಬರೀಷ್ ಮೇಲಿದ್ದ ಪ್ರೀತಿಯಿಂದ ಸುಮಲತಾ ಅವರನ್ನು ಗೆಲ್ಲಿಸಿದ್ರು ಎಂದು ವಾಗ್ದಾಳಿ ನಡೆಸಿದ್ದಾರೆ.
ಇತ್ತೀಚೆಗೆ ಜೆಡಿಎಸ್ ತವರು ಜಿಲ್ಲೆಯಾದ ಹಾಸನದಲ್ಲಿ ಕಾಂಗ್ರೆಸ್ ಬೃಹತ್ ಮಟ್ಟದ ಸಮಾವೇಶ ಆಯೋಜಿಸಿತ್ತು. ಈ ಮೂಲಕ ಜೆಡಿಎಸ್ ನೆಲದಲ್ಲಿ ಕಾಂಗ್ರೆಸ್ ಕಹಳೆ ಮೊಳಗಿಸಿ, ಟಕ್ಕರ್ ಕೊಟ್ಟಿದೆ ಎನ್ನಲಾಗಿದೆ. ಇದು ದಳ ನಾಯಕರ ಕೋಪಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೋಟೆಯಾಗಿದ್ದ ಮಂಡ್ಯದಲ್ಲೇ ಗೆದ್ದಿರುವ ಕುಮಾರಸ್ವಾಮಿ ಅವರ ಜನ್ಮದಿನದ ಹೆಸರಲ್ಲಿ ಸಕ್ಕರೆನಾಡಲ್ಲೇ ಸಮಾವೇಶ ಆಯೋಜಿಸಿ ಶಕ್ತಿ ಪ್ರದರ್ಶಿಸಲು ಜೆಡಿಎಸ್ ಮುಂದಾಗಿದೆ ಎಂದು ಹೇಳಲಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications