HD Kumaraswamy: ಮಗನನ್ನು ಸೋಲಿಸಿದ ಸೇಡು ತೀರಿಸಿಕೊಂಡ ಅಪ್ಪ- ಮಂಡ್ಯದಲ್ಲಿ ಗೆದ್ದ ತೆನೆ ಹೊತ್ತ ಮಹಿಳೆ
ಮಂಡ್ಯ ಜೂನ್ 5: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ 2.82 ಲಕ್ಷ ಮತಗಳಿಂದ ಜಯ ಸಾಧಿಸಿದ್ದಾರೆ. ಅಲ್ಲದೆ ಕಳೆದ ಬಾರಿ ಮಗನ ಸೋಲಿನ ಸೇಡು ತೀರಿಸಿಕೊಳ್ಳುವಲ್ಲಿ ಹೆಚ್ಡಿ ಕುಮಾರಸ್ವಾಮಿ ಯಶಸ್ವಿಯಾಗಿದ್ದಾರೆ.
ಅಲ್ಲದೆ ಮಂಡ್ಯದಲ್ಲಿ ನಟ ಅಂಬರೀಷ್ ಅವರ ದಾಖಲೆಯನ್ನು ಭಗ್ನ ಮಾಡಿದ್ದಾರೆ. 2024ರ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ 2.82 ಲಕ್ಷ ಮತಗಳ ಆಂತರದಿಂದ ಜಯಭೇರಿ ಬಾರಿಸಿದ್ದಾರೆ. ಕುಮಾರಸ್ವಾಮಿ ಒಟ್ಟು 8,15,881 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ಚಂದ್ರು 5,67,261 ಮತಗಳನ್ನು ಗಳಿಸಿ ಪರಾಭವಗೊಂಡರು.

ಮಂಡ್ಯದಲ್ಲಿ ಪ್ರಚಂಡ ಗೆಲುವು ಸಾಧಿಸುವ ಮೂಲಕ ಹೆಚ್ಡಿ ಕುಮಾರಸ್ವಾಮಿ, 2019ರಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಸೇಡು ತೀರಿಸಿಕೊಂಡಿದ್ದಾರೆ. ಜೊತೆಗೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಅನ್ನು ಹೀನಾಯವಾಗಿ ಸೋಲಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಇಲ್ಲಿ 14 ಅಭ್ಯರ್ಥಿಗಳು ಕಣದಲ್ಲಿದ್ದರು. ಆದರೆ ಇದರಲ್ಲಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹಾಗೂ ರಾಜ್ಯದ ಸಿರಿವಂತ ಅಭ್ಯರ್ಥಿಗಳಾದ ಸ್ಟಾರ್ ಚಂದ್ರು ನಡುವೆಯೇ ನೇರ ಹಣಾಹಣಿ ಏರ್ಪಟ್ಟಿತ್ತು.
ಕುಮಾರಸ್ವಾಮಿ ಅವರಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದರೆ, ಮೊದಲ ಚುನಾವಣೆಯಲ್ಲಿ ಸ್ಟಾರ್ ಚಂದ್ರು ಗೆಲುವಿನ ಪಣ ತೊಟ್ಟಿದ್ದರು. ಅವರ ಪರ ಕಾಂಗ್ರೆಸ್ ಅಬ್ಬರದ ಪ್ರಚಾರವನ್ನೂ ನಡೆಸಿತ್ತು. ಸುಮಲತಾ ಜೊತೆಗಿದ್ದ ನಟ ದರ್ಶನ್ ಸಹ ಚಂದ್ರು ಪರವಾಗಿ ಪ್ರಚಾರ ಮಾಡಿದ್ದರು.
ಮಂಡ್ಯ ಜಿದ್ದಾಜಿದ್ದಿನ ಕಣ
ಹಾಗೆ ನೋಡಿದರೆ ಕಳೆದ ಚುನಾವಣೆಯಲ್ಲಿಯೂ ಮಂಡ್ಯ ಜಿದ್ದಾಜಿದ್ದಿನ ಕಣವಾಗಿತ್ತು. 2019ರಲ್ಲಿ ಇಲ್ಲಿ ನಟ, ದಿವಂಗತ ಅಂಬರೀಶ್ ಪತ್ನಿ, ಸ್ಟಾರ್ ನಟಿ ಸುಮಲತಾ ಅಂಬರೀಶ್ ಹಾಗೂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದರು. ಆದರೆ, ಇದರಲ್ಲಿ ಸುಮಲತಾ ಜಯಭೇರಿ ಬಾರಿಸಿದ್ದರು.ಈ ಚುನಾವಣೆಯಲ್ಲಿ 7,03,660 ಮತಗಳನ್ನು ಪಡೆದಿದ್ದ ಸುಮಲತಾ ಅಂಬರೀಶ್ 1,25,876 ಮತಗಳ ಭಾರೀ ಅಂತರದಿಂದ ನಿಖಿಲ್ ಕುಮಾರಸ್ವಾಮಿಗೆ ಸೋಲುಣಿಸಿದ್ದರು.

ಇದೇ ಕಾರಣಕ್ಕೆ ಈ ಬಾರಿ ಸ್ವತ: ಕುಮಾರಸ್ವಾಮಿ ಅವರೇ ಅಖಾಡಕ್ಕಿಳಿದಿದ್ದರು. ಅನಾರೋಗ್ಯದ ನಡುವೆಯೂ ಅವರು ಪ್ರಚಾರದಲ್ಲಿ ಭಾಗವಹಿಸಿ ಮತದಾರರ ಮನದ ಬಾಗಿಲು ತಟ್ಟಿದ್ದರು. ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಕೂಡ ಸಾಕಷ್ಟು ಪ್ರಚಾರ ಮಾಡಿದ್ದರು. ಸ್ಟಾರ್ ಚಂದ್ರು ಅವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಸಾಥ್ ನೀಡಿದ್ದರು. ಆದರೆ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ಮಾಡಿದ್ದರೂ ಮತದಾರರನ್ನು ಸೆಳೆಯಲು ಸಾಧ್ಯವಾಗಲಿಲ್ಲ.
ಇತ್ತ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಕೂಡ ಹೆಚ್ಡಿ ಕುಮಾರಸ್ವಾಮಿ ಅವರೊಂದಿಗೆ ಪ್ರಚಾರದಲ್ಲಿ ಭಾಗವಹಿಸಲೇ ಇಲ್ಲ. ಬಿಜೆಪಿಯಿಂದಿಗೆ ಮೈತ್ರಿ ಮಾಡಿಕೊಂಡಿದ್ದ ಸುಮಲತಾ ಅಂಬರೀಷ್ ಅವರಿಗೆ ಬಿಜೆಪಿಗೆ ಮತ ನೀಡಿ ಎಂದು ಮಂಡ್ಯದಲ್ಲಿ ಅಭಿಮಾನಿಗಳಿಗೆ ಮನವಿ ಮಾಡಿದ್ದರು.
ಮಂಡ್ಯದಲ್ಲಿ ಸವಾಲಾಗಿದ್ದ ಸುಮಲತಾ- ದರ್ಶನ್
ಆದರೆ ಕುಮಾರಸ್ವಾಮಿಗೆ ಮತ ಚಲಾಯಿಸಿ ಎಂದು ಎಲ್ಲೂ ಹೇಳಿಕೊಂಡಿರಲಿಲ್ಲ. ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದಕ್ಕೆ ಸಮುಲತಾ ಅವರಿಗೆ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಮತ ನೀಡಿ ಎಂದು ಹೇಳುವುದು ಅನಿವಾರ್ಯವಾಗಿತ್ತು. ಅದರೆ ಅವರು ಬಹಿರಂಗವಾಗಿ ನೇರವಾಗಿ ಹೆಚ್ಡಿ ಕುಮಾರಸ್ವಾಮಿ ಮತ ನೀಡಿ ಎಮದು ಕೇಳುವ ಬದಲಾಗಿ ಬಿಜೆಪಿಗೆ (ಮೈತ್ರಿ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿ) ಮತ ನೀಡಿ ಎಂದು ಮತದಾರರಿಗೆ ಮನವಿ ಮಾಡಿದ್ದರು.
ಇತ್ತ ಸುಮಲತಾ ಪ್ರಚಾರದಲ್ಲಿ ಭಾಗವಹಿಸದೇ ಇರುವುದು, ನಟ ದರ್ಶನ್ ಕೂಡ ಕಾಂಗ್ರೆಸ್ ಅಭ್ಯರ್ಥಿಯೊಂದಿಗೆ ಪ್ರಚಾರದಲ್ಲಿ ಭಾಗವಹಿಸಿರುವುದು ಎಲ್ಲವೂ ಕುಮಾರಸ್ವಾಮಿಗೆ ಸಾವಾಲಾಗಿತ್ತು. ಇದೆಲ್ಲದರ ನಡುವೆ ಕುಮಾರಸ್ವಾಮಿ ಬಹುಮತದಿಂದ ಗೆದ್ದು ಬೀಗಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications