ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂಬರೀಶ್ ಅಭಿಮಾನಿಗಳ ಮಾತು ನೋವು ತಂದಿದೆ : ಕುಮಾರಸ್ವಾಮಿ

|
Google Oneindia Kannada News

Recommended Video

Lok Sabha Elections 2019 : ಅಂಬರೀಶ್ ಅಭಿಮಾನಿಗಳ ಮಾತು ನೋವು ತಂದಿದೆ : ಕುಮಾರಸ್ವಾಮಿ | Oneindia Kannada

ಮಂಡ್ಯ, ಮಾರ್ಚ್ 15 : 'ಅಂಬರೀಶ್ ಅವರಿಗೆ ನನ್ನ ಹೃದಯದಲ್ಲಿ ಅಣ್ಣನ ಸ್ಥಾನ ನೀಡಿದ್ದೇನೆ. ಆ ಪ್ರೀತಿ, ವಾತ್ಸಲ್ಯ ದೊಡ್ಡದು. ಇದನ್ನು ಅರ್ಥ ಮಾಡಿಕೊಳ್ಳದ ಅವರ ಅಭಿಮಾನಿಗಳು ನನ್ನ, ನಿಖಿಲ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಇದು ನನಗೆ ತೀವ್ರ ನೋವು ಉಂಟು ಮಾಡಿದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಗುರುವಾರ ಮಂಡ್ಯದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಅಂಬರೀಶ್ ಮಗ ಅಭಿಷೇಕ್ ಬೇರೆಯಲ್ಲ. ನನ್ನ ಮಗ ನಿಖಿಲ್ ಬೇರೆಯಲ್ಲ. ಅಂಬರೀಶ್ ಅಭಿಮಾನಿಗಳ ಮಾತನಾಡುವ ಮುನ್ನ ಅಂಬರೀಶ್ ಆತ್ಮ ಏನು ಹೇಳುತ್ತದೆ ಎನ್ನುವುದನ್ನು ಯೋಚಿಸಲಿ' ಎಂದರು.

ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ: ಸುಮಲತಾ ಅಭಿಮತಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ: ಸುಮಲತಾ ಅಭಿಮತ

'ಅಂಬರೀಶ್ ಅವರು ವಿಧಿವಶರಾದಾಗ ಅವರ ಮಗ ಫೋನ್ ಮಾಡಿ ಆಸ್ಪತ್ರೆಗೆ ಬನ್ನಿ ಎಂದ ನಾನು ರಾತ್ರಿ 12 ಗಂಟೆಗೆ ಅಲ್ಲಿಗೆ ಹೋದೆ. 3 ಗಂಟೆಯ ತನಕ ಅಲ್ಲೇ ಇದ್ದೆ. ಅಂಬರೀಶ್ ಅವರು ಬಾಳಿ ಬದುಕಿದ ಜೆ.ಪಿ.ನಗರದ ಮನೆಯಲ್ಲಿ ಕೆಲಸಗಳು ನಡೆಯುತ್ತಿತ್ತು. ಆದ್ದರಿಂದ ಪಾರ್ಥಿವ ಶರೀರ ಎಲ್ಲಿಗೆ ತೆಗೆದುಕೊಂಡು ಹೋಗಬೇಕು ಎಂಬುದು ತೀರ್ಮಾನ ಆಗಿರಲಿಲ್ಲ' ಎಂದು ತಿಳಿಸಿದರು.

ಮಂಡ್ಯ ಜೆಡಿಎಸ್‌ ಸಮಾವೇಶ : ನಿಖಿಲ್ ಅಭ್ಯರ್ಥಿ ಎಂದು ಘೋಷಣೆಮಂಡ್ಯ ಜೆಡಿಎಸ್‌ ಸಮಾವೇಶ : ನಿಖಿಲ್ ಅಭ್ಯರ್ಥಿ ಎಂದು ಘೋಷಣೆ

HD Kumaraswamy upset with Ambareesh fans

'ನಮ್ಮ ಅಧಿಕಾರಿಗಳು 3 ಗಂಟೆಗೆ ಆಸ್ಪತ್ರೆಗೆ ಕರೆಸಿದೆ. ಜೆ.ಪಿ.ನಗರದ ಮನೆಯನ್ನು ಕ್ಲೀನ್ ಮಾಡಿಸಿ. ಪಾರ್ಥಿವ ಶರೀರವನ್ನು ಅಲ್ಲಿಗೆ ತೆಗೆದುಕೊಂಡು ಹೋಗಿ ಪೂಜಾ ಕಾರ್ಯಗಳನ್ನು ಮಾಡಲಿ ಎಂದು ಹೇಳಿದೆ. ಮುಖ್ಯಮಂತ್ರಿಯಾಗಿ ಆವತ್ತು ಅದು ನನ್ನ ಜವಾಬ್ದಾರಿಯಾಗಿತ್ತು' ಎಂದು ಕುಮಾರಸ್ವಾಮಿ ಹೇಳಿದರು.

ರಂಗೇರುತ್ತಿದೆ ಮಂಡ್ಯ ಅಖಾಡ: ತಾಯಿ ಸುಮಲತಾ ಪರ ಪ್ರಚಾರಕ್ಕಿಳಿದ ಅಭಿಷೇಕ್ರಂಗೇರುತ್ತಿದೆ ಮಂಡ್ಯ ಅಖಾಡ: ತಾಯಿ ಸುಮಲತಾ ಪರ ಪ್ರಚಾರಕ್ಕಿಳಿದ ಅಭಿಷೇಕ್

'ಅಂದು ಆಸ್ಪತ್ರೆಯಲ್ಲಿ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತೆಗೆದುಕೊಂಡು ಹೋಗುವುದು ಬೇಡ ಎಂದವರು ಇಂದು ಮಂಡ್ಯದ ಬಗ್ಗೆ, ಮಂಡ್ಯದ ಮಣ್ಣಿನ ಬಗ್ಗೆ ಮಾತನಾಡುತ್ತಿದ್ದಾರೆ' ಎಂದು ಕುಮಾರಸ್ವಾಮಿ ದೂರಿದರು.

'ನೀವು ಮಂಡ್ಯದ ಗಂಡನ್ನು ಅಂತಿಮವಾಗಿ ನೋಡಲು ಬಯಸಿದಿರಿ. ಅದಕ್ಕಾಗಿ ಮಂಡ್ಯದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಯಿತು. ಮುಖ್ಯಮಂತ್ರಿಯಾಗಿ ಅದು ನನ್ನ ಜವಾಬ್ದಾರಿಯಾಗಿತ್ತು' ಎಂದರು.

English summary
Karnataka Chief Minister H.D.Kumaraswamy upset with Ambareesh fans who opposed Nikhil Kumaraswamy to contest from Mandya for Lok sabha elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X