ಕಾವೇರಿ ಜಲಾಶಯದಲ್ಲಿ ವ್ಯಾಪಕ ಮಳೆ: ನಿಧಾನವಾಗಿ ಮೈದುಂಬುತ್ತಿರುವ ಕೆಆರ್ಎಸ್
ಮಂಡ್ಯ, ಜು6: ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಕಾರಣ ರೈತರ ಜೀವನಾಡಿ ಕೃಷ್ಣರಾಜಸಾಗರ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ಹೆಚ್ಚಿದೆ. ಪರಿಣಾಮ ಜಲಾಶಯ ನಿಧಾನವಾಗಿ ಭರ್ತಿಯಾಗಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವವರಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ಸುರಕ್ಷಿತ ತಾಣಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ.
ಜಲಾಶಯದ ಗರಿಷ್ಠ ಮಟ್ಟ 124.80 ಇದ್ದು, ಬುಧವಾರ ಜಲಾಶಯದಲ್ಲಿ 114.70 ಅಡಿ ನೀರು ಸಂಗ್ರಹವಾಗಿತ್ತು. ಒಟ್ಟು 49.452 ಟಿಎಂಸಿ ಸಾಮರ್ಥ್ಯದ ಅಣೆಕಟ್ಟೆಯಲ್ಲಿ 36.719 ಟಿಎಂಸಿ ನೀರು ಸಂಗ್ರಹವಾಗಿದೆ.

ಜಲಾಶಯಕ್ಕೆ 29468 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಜಲಾಶಯದಿಂದ 3171 ಕ್ಯೂಸೆಕ್ ನೀರನ್ನು ಹೊರಗೆ ಹರಿಯಬಿಡಲಾಗುತ್ತಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 90.52 ಅಡಿ ನೀರು ಸಂಗ್ರಹವಾಗಿತ್ತು.
ಈ ಬಾರಿ ಮುಂಗಾರು ಜುಲೈ ಅಂತ್ಯದಲ್ಲೇ ಪ್ರಾರಂಭವಾಗಿರುವ ಕಾರಣ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣವೂ ಹೆಚ್ಚಿದೆ. ಕಳೆದ ವರ್ಷ 1468 ಕ್ಯೂಸೆಕ್ ಮಾತ್ರ ಒಳ ಹರಿವಿತ್ತು. ಜಲಾಶಯದಿಂದ 1341 ಕ್ಯೂಸೆಕ್ ನೀರನ್ನು ಹೊರ ಹರಿವು ದಾಖಲಾಗಿತ್ತು. ಇದೇ ರೀತಿ ಮಳೆ ಬೀಳುತ್ತಿದ್ದರೆ ಜುಲೈ ಅಂತ್ಯ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಜಲಾಶಯ ಭರ್ತಿಯಾಗುವ ಸಾಧ್ಯತೆಗಳಿವೆ.

2010ರಲ್ಲಿ ಅಕ್ಟೋಬರ್ನಲ್ಲಿ ಭರ್ತಿ
ಸಾಮಾನ್ಯವಾಗಿ ಜುಲೈನಿಂದ ಆಗಸ್ಟ್ ತಿಂಗಳಲ್ಲೇ ಅಣೆಕಟ್ಟು ಭರ್ತಿಯಾಗುತ್ತದೆ. ಒಮ್ಮೊಮ್ಮೆ ಸೆಪ್ಟೆಂಬರ್ನಲ್ಲಿ, ಅಪರೂಪವೆಂಬಂತೆ ಅಕ್ಟೋಬರ್ನಲ್ಲಿ ಪೂರ್ಣ ಮಟ್ಟ ತಲುಪುತ್ತದೆ. 2010ರ ಅಕ್ಟೋಬರ್ 18ರಂದು ಅಣೆಕಟ್ಟು ಭರ್ತಿಯಾಗಿತ್ತು. ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರು ಕಾವೇರಿ ಮಾತೆಗೆ ಬಾಗೀನ ಸಮರ್ಪಿಸಿದ್ದರು. ಕಳೆದ ವರ್ಷ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications