ಕೆ.ಆರ್.ಪೇಟೆ ತಲುಪಿದ ಹೇಮಾವತಿ ನೀರು, ಜನರ ಮುಖದಲ್ಲಿ ಮಂದಹಾಸ
ಮಂಡ್ಯ, ಸೆಪ್ಟೆಂಬರ್, 11: ಕೊನೆಗೂ ಜಿಲ್ಲೆಯ ಕೆ.ಆರ್.ಪೇಟೆ ನಗರದ ಜನರ ಬಹು ದಿನದ ಕನಸು ನನಸಾಗಿ ಶುದ್ಧ ಕುಡಿಯುವ ನೀರು ದೊರೆಯುವ ಲಕ್ಷಣಗಳು ಕಂಡುಬಂದಿವೆ. ಈಗಾಗಲೇ ಈ ಸಂಬಂಧ ನಡೆಯುತ್ತಿದ್ದ ಯೋಜನೆಯ ಕಾಮಗಾರಿ ಅಂತಿಮ ಘಟ್ಟವನ್ನು ತಲುಪಿದ್ದು ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಕೆ.ಆರ್.ಪೇಟೆ ಪಟ್ಟಣದ ಜನತೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ 3ನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು 28ಕೋಟಿ ರೂಪಾಯಿ ವೆಚ್ಚದಲ್ಲಿ ಮಾಡಿದ್ದು ಅದು ಸಕಾರಗೊಂಡಿದೆ.

ಹೇಮಾವತಿ ನದಿ ದಡದಲ್ಲಿದ್ದರೂ ಕೆ.ಆರ್.ಪೇಟೆ ನಗರಕ್ಕೆ ಸಮರ್ಪಕವಾಗಿ ಶುದ್ಧ ನೀರು ಸರಬರಾಜು ಆಗುತ್ತಿಲ್ಲ ಎಂಬ ಆರೋಪಗಳಿದ್ದವು. ನಗರ ಬೆಳೆದಂತೆಲ್ಲ ಹಿಂದೆ ಮಾಡಿದ್ದ ಯೋಜನೆಗಳ ಮೂಲಕ ನೀರನ್ನು ತಲುಪಿಸುವುದು ಸುಲಭದ ಕೆಲಸವಾಗಿರಲಿಲ್ಲ. ಹೀಗಾಗಿ ಮೂರನೇ ಹಂತದ ನೀರಿನ ಯೋಜನೆಯನ್ನು ಮುಂದಿನ ತಲೆಮಾರನ್ನು ಗಮನದಲ್ಲಿಟ್ಟುಕೊಂಡು ಆರಂಭಿಸಲಾಗಿತ್ತು.
ಬಾಣಂತಿಗುಡ್ಡದಲ್ಲಿ ಅತ್ಯಾಧುನಿಕ ಶುದ್ಧೀಕರಣ ಘಟಕ
ಆದರೆ ಈ ಯೋಜನೆ ಅಷ್ಟು ಸುಲಭವಾಗಿ ಅನುಷ್ಠಾನಗೊಂಡಿರಲಿಲ್ಲ. ಇದರ ಹಿಂದೆ ದೊಡ್ಡ ದೊಡ್ಡ ಹೋರಾಟಗಳೇ ನಡೆದಿವೆ. ನಗರ ಹಣಕಾಸು ಮೂಲ ಸೌಕರ್ಯ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ ಅವರ ಹೋರಾಟದ ಫಲವಾಗಿ ಈ ಯೋಜನೆ ಸುಮಾರು 28 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆದಿದೆ ಎನ್ನುವುದನ್ನು ನಾವು ಸ್ಮರಿಸಲೇಬೇಕಾಗುತ್ತದೆ.
ಕೆ.ಆರ್.ಪೇಟೆ ಪಟ್ಟಣದ ಹೊರವಲಯದ ಸಾಧುಗೋನಹಳ್ಳಿಯ ಬಳಿ ಬಾಣಂತಿಗುಡ್ಡದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ನಿರ್ಮಿಸಿರುವ ನೀರು ಶುದ್ಧೀಕರಣ ಘಟಕವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಕೆ.ಆರ್.ಪೇಟೆ ಪಟ್ಟಣದ ಮುತ್ತುರಾಯಸ್ವಾಮಿ ದೇವಾಲಯದ ಬಳಿ ನಿರ್ಮಿಸಿರುವ 5ಲಕ್ಷ ಲೀಟರ್ ಸಾಮರ್ಥ್ಯದ ಬೃಹತ್ ವಾಟರ್ ಟ್ಯಾಂಕಿನಲ್ಲಿ ಸಂಗ್ರಹವಾಗುವ ನೀರು ಪಟ್ಟಣದ ವಿವಿಧ ಬಡಾವಣೆಗಳಿಗೆ ಸರಬರಾಜಾಗುತ್ತಿದೆ.
ಹೇಮಾವತಿ ನದಿಯಿಂದ ಬರುವ ನೀರು
ಇಲ್ಲಿಗೆ ನೀರನ್ನು ಕೆ.ಆರ್.ಪೇಟೆ ಪಟ್ಟಣದಿಂದ 10ಕಿಲೋ ಮೀಟರ್ ದೂರದಲ್ಲಿರುವ ಹೇಮಗಿರಿಯ ಬಳಿ ಹೇಮಾವತಿ ನದಿಯಿಂದ ನೀರನ್ನು ಪಂಪ್ ಮಾಡಿ ಸರಬರಾಜು ಮಾಡಲಾಗುತ್ತಿದೆ. ಈ ಯೋಜನೆಯಿಂದ ಪಟ್ಟಣದಲ್ಲಿ ವಾಸವಾಗಿರುವ 30 ಸಾವಿರಕ್ಕೂ ಹೆಚ್ಚು ಜನರಿಗೆ ಶುದ್ಧ ಕುಡಿಯುವ ನೀರು ದೊರೆಯುವಂತಾಗಿದೆ. ಈ ಯೋಜನೆಯು ಮುಂದಿನ ಮೂರು ದಶಕಗಳ ಜನಸಂಖ್ಯೆಯನ್ನು ಆಧರಿಸಿದೆ ಎಂಬುದೇ ವಿಶೇಷ.
ಇದೀಗ ಕೆ.ಆರ್.ಪೇಟೆ ಹಾಗೂ ಹೊಸಹೊಳಲು ವ್ಯಾಪ್ತಿಯ 23 ವಾರ್ಡ್ಗಳ ಜನರು ಶುದ್ಧ ಕುಡಿಯುವ ನೀರನ್ನು ಉಪಯೋಗಿಸುವಂತಾಗಿದೆ. ಸದ್ಯ ವಾರದ 7 ದಿನದ 24 ಗಂಟೆಗಳ ಕಾಲವೂ ಪರಿಶುದ್ಧವಾದ ಕುಡಿಯುವ ನೀರನ್ನು ಸರಬರಾಜು ಮಾಡಬೇಕೆಂಬ ಆಶಯದಿಂದ ಆರಂಭ ಮಾಡಲಾಗಿದೆ. ಮೂರನೇ ಹಂತದ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿ ಮುಗಿದಿದ್ದು, ಕೆ.ಆರ್.ಪೇಟೆ ವ್ಯಾಪ್ತಿಯ 17 ವಾರ್ಡ್ಗಳು ಹಾಗೂ ಹೊಸಹೊಳಲು ಭಾಗದ 6 ವಾರ್ಡ್ಗಳಲ್ಲಿ ವಾಸವಾಗಿರುವ 30 ಸಾವಿರಕ್ಕೂ ಹೆಚ್ಚಿನ ಜನರಿಗೆ ನೀರು ತಲುಪಿದೆ.
ಯೋಜನೆ ಯಶಸ್ವಿ ಅನುಷ್ಠಾನವಾಗಿದ್ದು ಹೇಗೆ?
ಈ ಯೋಜನೆ ಕುರಿತಂತೆ ಮಾತನಾಡಿರುವ ಎಂ.ಡಿ.ಕೃಷ್ಣಮೂರ್ತಿ ಅವರು ನಾನು ನಗರ ಹಣಕಾಸು ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷನಾಗಿದ್ದಾಗ, ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸಿ ಒಂದೇ ಕಂತಿನಲ್ಲಿ 55 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಸಿಕೊಟ್ಟಿದ್ದೆ.
ಕೆ.ಆರ್.ಪೇಟೆ ಪಟ್ಟಣದ ಜನತೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ 9ನಗರ ಕುಡಿಯುವ ನೀರು ಸರಬರಾಜು ಕಾರ್ಯಕ್ರಮವನ್ನು ಮಂಜೂರು ಮಾಡಿದ್ದೆ. ಮಾಜಿ ಸಚಿವ ನಾರಾಯಣಗೌಡರ ಇಚ್ಛಾಶಕ್ತಿಯ ಫಲವಾಗಿ ಕುಡಿಯುವ ನೀರು ಸರಬರಾಜು ಯೋಜನೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ. ಅದು ಏನೇ ಇರಲಿ ಪಟ್ಟದ ಜನರಿಗೆ ಶುದ್ಧ ನೀರು ತಲುಪಿತ್ತಲ್ಲ ಎನ್ನುವುದೇ ಸಂತಸದ ವಿಚಾರವಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications