ಐತಿಹಾಸಿಕ ದಸರಾ ಶ್ರೀರಂಗಪಟ್ಟಣದಲ್ಲಿ ಭರದ ಸಿದ್ಧತೆ!
ಮಂಡ್ಯ, ಸೆಪ್ಟೆಂಬರ್ 6: ಮೈಸೂರು ದಸರಾದ ಮೂಲ ಸ್ಥಾನವಾದ ಶ್ರೀರಂಗಪಟ್ಟಣದಲ್ಲಿ ಐತಿಹಾಸಿಕ ದಸರಾ ಮಹೋತ್ಸವನ್ನು ನಡೆಸಲು ಬೇಕಾದ ಸಿದ್ಧತಾ ಕಾರ್ಯಕ್ಕೆ ಮಂಡ್ಯ ಜಿಲ್ಲಾಡಳಿತ ಮುಂದಾಗಿದೆ.
ಈ ಕುರಿತು ದಸರಾ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಸೆ. 24 ರಿಂದ 27ರ ವರೆಗೆ ಅರ್ಥಪೂರ್ಣವಾಗಿ ದಸರಾ ಮಹೋತ್ಸವ ನಡೆಯಲಿದೆ.

ಈಗಾಗಲೇ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳು ಕೈಗೊಂಡಿರುವ ಕೆಲಸಗಳನ್ನು ತ್ವರಿತವಾಗಿ ಕ್ರಮಕೈಗೊಳ್ಳಲು ಅಧಿಕಾರಿಗಳು ಮುಂದಾಗಬೇಕು. ಜಂಬೂ ಸವಾರಿಗೆ ಗಣ್ಯರನ್ನು ಆಹ್ವಾನಿಸುವ ಬಗ್ಗೆ ಹಾಗೂ ಕಲಾತಂಡಗಳ ಮೆರವಣಿಗೆಯ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಪ್ರಮುಖ ಸ್ಥಳಗಳಲ್ಲಿ ದಸರಾ ಮಹೋತ್ಸವ ಕುರಿತು ಬ್ಯಾನರ್ಗಳನ್ನು ಅಳವಡಿಸಬೇಕು. ಶ್ರೀರಂಗಪಟ್ಟಣದ ಸರ್ಕಾರಿ ಕಚೇರಿಗಳನ್ನು ದೀಪಾಲಂಕಾರ ಮಾಡುವುದು, ರಾಜಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲು ಅಧಿಕಾರಿಗಳು ಕ್ರಮವಹಿಸಲು ಸೂಚಿಸಿದ ಡಿಸಿ ಮಂಜುಶ್ರೀ ಅವರು ಬಾಬುರಾಯನಕೊಪ್ಪಲಿನ ದಸರಾ ಬನ್ನಿಮಂಟವನ್ನು ಸ್ವಚ್ಛಗೊಳಿಸುವಂತೆ ಹಾಗೂ ಕ್ರೀಡಾ ದಸರಾ, ಮಕ್ಕಳ ದಸರಾ, ಮಹಿಳಾ ದಸರಾವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಮಿತಿಯ ಜವಾಬ್ದಾರಿ ಅರಿತು ಕೆಲಸ ಮಾಡುವಂತೆ ಕಿವಿಮಾತು ಹೇಳಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications