ಮುತ್ತತ್ತಿಯಲ್ಲಿ ಹೆಜ್ಜೇನು ದಾಳಿಗೆ ಮಳವಳ್ಳಿಯ ವೆಂಕಟೇಶ್ ಬಲಿ
ಮಂಡ್ಯ, ಜೂನ್ 13: ಒಂದಲ್ಲ ಒಂದು ಕಾರಣಕ್ಕೆ ಮಳವಳ್ಳಿ ತಾಲ್ಲೂಕಿನ ಪ್ರೇಕ್ಷಣೀಯ ತಾಣ ಮುತ್ತತ್ತಿ ಸುದ್ದಿಯಾಗುತ್ತಿದ್ದು, ಇಲ್ಲಿ ಸಾವನ್ನಪ್ಪುತ್ತಿರುವ ಜನರ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ.
ಇದೀಗ ಮುತ್ತತ್ತಿಗೆ ಪ್ರವಾಸ ಬಂದಿದ್ದ ವ್ಯಕ್ತಿಯೊಬ್ಬರು ಕಾವೇರಿ ನದಿಯ ದಡದಲ್ಲಿ ಕುಳಿತಿದ್ದಾಗ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲತಃ ಮಳವಳ್ಳಿ ತಾಲೂಕು, ಕಿರುಗಾವಲು ಗ್ರಾಮದ ವಾಸಿ ಪುಟ್ಟಸ್ವಾಮಿ ಎಂಬುವವರ ಪುತ್ರ ವೆಂಕಟೇಶ್ ಅಲಿಯಾಸ್ ಜಯರಾಮ್(42) ಮೃತಪಟ್ಟ ದುರ್ದೈವಿ.
ಇವರು ಬೆಂಗಳೂರಿನ ಜೆ.ಪಿ ನಗರದಲ್ಲಿ ವಾಸವಾಗಿದ್ದು, ಗಾರ್ಮೆಂಟ್ಸ್ನಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ತನ್ನ ಸ್ನೇಹಿತರಾದ ನರೇಂದ್ರ ಬಾಬು, ಶಿವು, ವಸಂತ, ರಮೇಶ ಅವರೊಂದಿಗೆ ಮುತ್ತತ್ತಿಗೆ ಪ್ರವಾಸಕ್ಕೆಂದು ಬಂದು ದೇವರ ದರ್ಶನ ಪಡೆದು ಮುತ್ತತ್ತಿ ಕಾವೇರಿ ನದಿಯ ದಡದಲ್ಲಿ ಕುಳಿತಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ್ದು, ಹೆಚ್ಚು ಹೆಜ್ಜೇನುಗಳು ಕಡಿದ ಪರಿಣಾಮ ವೆಂಕಟೇಶ್ ಆರೋಗ್ಯ ಸ್ಥಿತಿ ಗಂಭೀರವಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ತಕ್ಷಣ ಸಾತನೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ನಡುವೆ ಮೃತನ ಪೋಷಕರು ಆತನ ಬಯಕೆಯಂತೆ ಕಣ್ಣುಗಳನ್ನು ದಾನ ಮಾಡಿ ಮನವೀಯತೆ ಮೆರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications