ಮುತ್ತತ್ತಿಯಲ್ಲಿ ಹೆಜ್ಜೇನು ದಾಳಿಗೆ ಮಳವಳ್ಳಿಯ ವೆಂಕಟೇಶ್ ಬಲಿ
ಮಂಡ್ಯ, ಜೂನ್ 13: ಒಂದಲ್ಲ ಒಂದು ಕಾರಣಕ್ಕೆ ಮಳವಳ್ಳಿ ತಾಲ್ಲೂಕಿನ ಪ್ರೇಕ್ಷಣೀಯ ತಾಣ ಮುತ್ತತ್ತಿ ಸುದ್ದಿಯಾಗುತ್ತಿದ್ದು, ಇಲ್ಲಿ ಸಾವನ್ನಪ್ಪುತ್ತಿರುವ ಜನರ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ.
ಇದೀಗ ಮುತ್ತತ್ತಿಗೆ ಪ್ರವಾಸ ಬಂದಿದ್ದ ವ್ಯಕ್ತಿಯೊಬ್ಬರು ಕಾವೇರಿ ನದಿಯ ದಡದಲ್ಲಿ ಕುಳಿತಿದ್ದಾಗ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲತಃ ಮಳವಳ್ಳಿ ತಾಲೂಕು, ಕಿರುಗಾವಲು ಗ್ರಾಮದ ವಾಸಿ ಪುಟ್ಟಸ್ವಾಮಿ ಎಂಬುವವರ ಪುತ್ರ ವೆಂಕಟೇಶ್ ಅಲಿಯಾಸ್ ಜಯರಾಮ್(42) ಮೃತಪಟ್ಟ ದುರ್ದೈವಿ.
ಇವರು ಬೆಂಗಳೂರಿನ ಜೆ.ಪಿ ನಗರದಲ್ಲಿ ವಾಸವಾಗಿದ್ದು, ಗಾರ್ಮೆಂಟ್ಸ್ನಲ್ಲಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳವಾರ ತನ್ನ ಸ್ನೇಹಿತರಾದ ನರೇಂದ್ರ ಬಾಬು, ಶಿವು, ವಸಂತ, ರಮೇಶ ಅವರೊಂದಿಗೆ ಮುತ್ತತ್ತಿಗೆ ಪ್ರವಾಸಕ್ಕೆಂದು ಬಂದು ದೇವರ ದರ್ಶನ ಪಡೆದು ಮುತ್ತತ್ತಿ ಕಾವೇರಿ ನದಿಯ ದಡದಲ್ಲಿ ಕುಳಿತಿದ್ದ ವೇಳೆ ಹೆಜ್ಜೇನು ದಾಳಿ ಮಾಡಿದ್ದು, ಹೆಚ್ಚು ಹೆಜ್ಜೇನುಗಳು ಕಡಿದ ಪರಿಣಾಮ ವೆಂಕಟೇಶ್ ಆರೋಗ್ಯ ಸ್ಥಿತಿ ಗಂಭೀರವಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ತಕ್ಷಣ ಸಾತನೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ನಡುವೆ ಮೃತನ ಪೋಷಕರು ಆತನ ಬಯಕೆಯಂತೆ ಕಣ್ಣುಗಳನ್ನು ದಾನ ಮಾಡಿ ಮನವೀಯತೆ ಮೆರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications