ಮಂಡ್ಯದಲ್ಲಿ ತಡವಾಗಿ ಬೆಳಕಿಗೆ ಬಂದ ಹನಿಟ್ರ್ಯಾಪ್ ಪ್ರಕರಣ: ಉದ್ಯಮಿಯಿಂದ ₹ 50 ಲಕ್ಷ ವಸೂಲಿ
ಮಂಡ್ಯ, ಆಗಸ್ಟ್ 22: ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಚಿನ್ನಾಭರಣ ಅಂಗಡಿ ಮಾಲೀಕನನ್ನು ಹನಿಟ್ರಾಪ್ಗೆ ಒಳಪಡಿಸಿ 50 ಲಕ್ಷ ರೂ. ವಸೂಲಿ ಮಾಡಿರುವ ಬಗ್ಗೆ ವರದಿಯಾಗಿದೆ. ನಗರದ ಮಹಾವೀರ ವೃತ್ತದಲ್ಲಿರುವ ಶ್ರೀನಿಧಿ ಗೋಲ್ಡ್ ಮಾಲೀಕ ಎಸ್. ಜಗನ್ನಾಥಶೆಟ್ಟಿ ಎಂಬುವರೇ ಹನಿಟ್ರ್ಯಾಪ್ಗೆ ಒಳಗಾಗಿ 50 ಲಕ್ಷ ಕಳೆದುಕೊಂಡವರಾಗಿದ್ದು, ಈ ಸಂಬಂಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸುಭಾಷ್ನಗರ ಬಡಾವಣೆಯ ಸಲ್ಮಾಬಾನು, ಜಯಂತ್ ಹಾಗೂ ಇತರೆ ನಾಲ್ಕು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಘಟನೆ ವಿವರ
ಜಗನ್ನಾಥಶೆಟ್ಟಿ ಫೆಬ್ರವರಿ 26ರಂದು ರಾತ್ರಿ 8 ಗಂಟೆ ಸಮಯದಲ್ಲಿ ಮಂಗಳೂರಿಗೆ ಹೋಗಲು ಬಸ್ ನಿಲ್ದಾಣದ ಬಳಿ ನಿಂತಿದ್ದ ವೇಳೆ ಕಾರಿನಲ್ಲಿ ಬಂದಂತಹ ನಾಲ್ವರು ,ನಾವೂ ಮೈಸೂರಿಗೆ ಹೋಗುವವರಿದ್ದು, ನಮ್ಮ ಕಾರಿನಲ್ಲಿ ಬರುವಂತೆ ಕರೆದಿದ್ದಾರೆ. ಸ್ವಲ್ಪ ಪರಿಚಯವಿದ್ದ ಕಾರಣ ಜಗನ್ನಾಥ್ ಕಾರಿನಲ್ಲಿ ಹೋಗಿದ್ದಾರೆ . ಮೈಸೂರು ಸಿಟಿ ತಲುಪುತ್ತಿದ್ದಂತೆ ಕಾರಿನಲ್ಲಿದ್ದವರು ತಮ್ಮ ಬಳಿ ಇದ್ದ ಚಿನ್ನದ ಬಿಸ್ಕೇಟ್ ಮಾದರಿಯನ್ನು ತೆಗೆದು ಇದು ಚಿನ್ನದ ಬಿಸ್ಕೆಟ್ಟಾ ಎಂದು ಪ್ರಶ್ನಿಸಿದರು. ಈ ಬಗ್ಗೆ ಪರಿಶೀಲಿಸಬೇಕು ಎಂದು ತಿಳಿಸಿದಾಗ ಇಲ್ಲೇ ಬಂದು ನೋಡಿ ತಿಳಿಸಿ ಹೋಗುವಂತೆ ಬಲವಂತ ಮಾಡಿದ್ದಾರೆ. ಇದಕ್ಕೆ ಮೊದಲು ಜಗನ್ನಾಥಶೇಟ್ಟಿ ನಿರಾಕರಿಸಿದೆಯಾದರೂ, ಮತ್ತೆ ಅವರೊಂದಿಗೆ ಹೋಗಬೇಕಾಯಿತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಳಿಕ ಅವರು ಖಾಸಗಿ ಹೊಟೇಲೊಂದರ ಕೊಠಡಿಗೆ ಕರೆದೊಯ್ದರು. ಅಲ್ಲಿಗೆ ಸಲ್ಮಾಬಾನು, ಜಯಂತ್ ಇತರರು ಕೊಠಡಿಯಿಂದ ಹೊರನಡೆದರು. ನಂತರ ಅದೇ ರೂಂಗೆ ಮತ್ತೊಬ್ಬ ಹುಡುಗಿ ಬಂದಳು. ಸ್ವಲ್ಪ ಸಮಯದ ಬಳಿಕ ಕೊಠಡಿಗೆ ಆಗಮಿಸಿದ ಸಲ್ಮಾಬಾನು, ಜಯಂತು ಇತರರು ತಮ್ಮ ಬಳಿ ಇದ್ದ ಮೊಬೈಲ್ನಲ್ಲಿ ಎಲ್ಲವನ್ನೂ ಚಿತ್ರೀಕರಿಸಿ ನನ್ನ ತಂಗಿಯ ಜೊತೆ ಲಾಡ್ಜ್ಗೆ ಬಂದಿದ್ದೀಯಾ ಎಂದು ಹೇಳಿ ನನ್ನ ಮೇಲೆ ಹಲ್ಲೆ ನಡೆಸಿದರಲ್ಲದೆ, 4 ಕೋಟಿ ನೀಡಬೇಕು ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದರು.
ಇದರಿಂದ ಆತಂಕಗೊಂಡ ನಾನು, ನನ್ನ ಸ್ನೇಹಿತರಾದ ಎಲ್ಐಸಿ ಅಭಿವೃದ್ಧಿ ಅಧಿಕಾರಿ ಎಸ್. ಶ್ರೀನಿವಾಸಶೆಟ್ಟಿ ಅವರ ಮೂಲಕ ರಾಜಶ್ರೀ ಜ್ಯೂಯಲರ್ಸ್ನಿಂದ 25 ಲಕ್ಷ ಹಣ ತರಿಸಿಕೊಟ್ಟಿದ್ದೇನೆ. 23 ಲಕ್ಷ ರೂ.ಗಳನ್ನು ಮೈಸೂರಿನ ಸೂರ್ಯ ಜ್ಯೂಯಲರ್ಸ್ನಿಂದ ಆರೋಪಿಗಳೇ ಪಡೆದಿದ್ದಾರೆ. ಉಳಿದ ಎರಡು ಲಕ್ಷ ರೂ.ಗಳನ್ನು ಮೈಸೂರಿನ ಕಲ್ಪತರು ಸಿಲ್ವರ್ ಹೌಸ್ನಿಂದ ಆರೋಪಿಗಳು ಪಡೆದಿದ್ದರು. ಇಷ್ಟೆಲ್ಲಾ ಆದರೂ ಮತ್ತೆ ಈಗ ಹಣಕ್ಕಾಗಿ ಆರೋಪಿಗಳು ಪೀಡಿಸುತ್ತಿದ್ದು, ಇದರಿಂದ ಬೇಸತ್ತ ನಾನು ಪೊಲೀಸರಿಗೆ ದೂರು ನೀಡಬೇಕಾಯಿತು ಎಂದು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಮಾ ಬಾನು ಅವರನ್ನು ಬಂಧಿಸಿರುವ ಪೊಲೀಸರು ಆಕೆಯನ್ನು ನ್ಯಾಯಾಧೀಶರ ಮುಂದೆ ಹಾಜಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸಂಶಯಗಳು ಇದ್ದು, ಪೊಲೀಸರ ಉನ್ನತ ಮಟ್ಟದ ತನಿಖೆಯಿಂದ ಮಾತ್ರ ಎಲ್ಲವೂ ಬಯಲಾಗಲಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications