Get Updates
Get notified of breaking news, exclusive insights, and must-see stories!

International Yoga Day 2023: ಮಂಡ್ಯ ಜಿಲ್ಲೆಯ KRS ಬಳಿ ವಿಶ್ವ ಯೋಗ ದಿನಾಚರಣೆಗೆ ಸಿದ್ಧತೆ ಹೇಗಿದೆ?, ಇಲ್ಲಿದೆ ವಿವರ

ಮಂಡ್ಯ, ಜೂನ್‌, 07: ಈ ಬಾರಿಯ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಜೂನ್‌ 21ರಂದು ವಿಶ್ವವಿಖ್ಯಾತ ಕೃಷ್ಣರಾಜಸಾಗರದ ಬಳಿ ನಡೆಸಲು ನಿರ್ಧರಿಸಲಾಗಿದ್ದು, ಇಲ್ಲಿ ಸಕಲ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜೂನ್‌ 21ರಂದು ಬೆಳಗ್ಗೆ 7ರಿಂದ 7:45ರವರೆಗೂ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

How are the preparations for International Yoga Day near KRS of Mandya district?

1,500 ಜನರು ಭಾಗವಹಿಸುವ ನಿರೀಕ್ಷೆಯಿದೆ

9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಯಲು ಅಧಿಕಾರಿಗಳು ತಮಗೆ ವಹಿಸಿರುವ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಜಿಲ್ಲೆಯಲ್ಲಿ 1,500 ಜನರು ಯೋಗ ದಿನಾಚರಣೆಯಲ್ಲಿ ಭಾಗವಹಿಸುವ ಗುರಿ ನಿಗದಿಪಡಿಸಲಾಗಿದ್ದು, ಪ್ರತಿ ತಾಲೂಕಿನಿಂದ 200 ರಿಂದ 300 ಜನರನ್ನು ಕರೆತರಬೇಕು. ಜೊತೆಗೆ ಎರಡು ದಿನದ ಪೂರ್ವ ಪ್ರದರ್ಶನ ನೀಡಬೇಕು. ಇದರಲ್ಲಿ ಯೋಗ ಶಿಕ್ಷಕರು ಭಾಗಿಯಾಗಲಿದ್ದಾರೆ ಎಂದರು.

ಇದಕ್ಕಾಗಿ ಪ್ರತಿ ಹಳ್ಳಿ, ನಗರ, ಪಟ್ಟಣ, ಜಿಲ್ಲೆ ಮುಂತಾದ ಎಲ್ಲಾ ಸ್ಥಳದಲ್ಲಿ ಯೋಗದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಪ್ರಮುಖ ಸಾರ್ವಜನಿಕ ಸಂಸ್ಥೆಗಳಾದ ಆಸ್ಪತ್ರೆ, ಪೊಲೀಸ್ ಠಾಣೆ, ಬಸ್ ನಿಲ್ದಾಣ, ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಬ್ಯಾನರ್ ಮತ್ತು ಯೋಗ ಕುರಿತು ಮಾನ್ಯ ಪ್ರಧಾನ ಮಂತ್ರಿಯವರ ಘೋಷಣಾ ವಾಕ್ಯಗಳನ್ನು ಪ್ರದರ್ಶಿಸಬೇಕು ಎಂದರು.
ಅಲ್ಲದೆ ಶಿಷ್ಟಾಚಾರದ ಪ್ರಕಾರ ಜನಪ್ರತಿನಿಧಿಗಳು ಹಾಗೂ ಸಚಿವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಎಂದು ಹೇಳಿದರು.

ಜಿಲ್ಲೆಯ ಯೋಗ ಸಂಸ್ಥೆಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್.ಎಸ್.ಎಸ್, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಆಯುಷ್ ಯೋಗ ತರಬೇತುದಾರರುಗಳು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಇರುವ ಯೋಗ ತರಬೇತುದಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದರು.

ವಿಶೇಷ ಬಸ್ ವ್ಯವಸ್ಥೆ

ಜೂನ್ 21ರಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಗಮಿಸುವ ಯೋಗಪಟುಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದ್ದು, ಅಂದು ಬೆಳಗ್ಗೆ ಮಂಡ್ಯದಿಂದ ಕೆ.ಆರ್.ಎಸ್, ಕೆ.ಆರ್.ಎಸ್.ನಿಂದ ಮಂಡ್ಯದವರೆಗೆ ಬಸ್ ಸೌಲಭ್ಯದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್. ನಾಗಾರಾಜು ಅವರು ತಿಳಿಸಿದರು. ಇನ್ನು ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಸಿಹಿ ಹಾಗೂ ತಿಂಡಿಯ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಸಭೆಯಲ್ಲಿ ಹೆಚ್ಚುವರಿ ಮಂಡ್ಯ ಉಪವಿಭಾಗಾಧಿಕಾರಿ ಕೃಷ್ಣಕುಮಾರ್, ರೆಡ್‌ಕ್ರಾಸ್ ಸಂಸ್ಥೆಯ ಮೀರಾ ಶಿವಲಿಂಗಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಸೀತಾಲಕ್ಷ್ಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕ ಓಂಪ್ರಕಾಶ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್‌ಗಳಾದ ವಿಜಯ್‌ ಕುಮಾರ್, ಸೌಮ್ಯ, ಅಶ್ವಿನಿ, ನರಸಿಂಹಮೂರ್ತಿ, ಹಿರಿಯ ಯೋಗ ಶಿಕ್ಷಕರಾದ ಶಂಕರನಾರಾಯಣಶಾಸ್ತ್ರಿ , ಆಯುಷ್ ವೈದ್ಯಾಧಿಕಾರಿ ಡಾ.ಲೋಕೇಶ್ ಎಸ್.ಎನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯೋಗ ದಿನದಂದು ಮೈಸೂರಿಗೆ ಆಗಮಿಸಿದ್ದು, ಅರಮನೆಯ ಆವರಣದಲ್ಲಿ ಸಕಲ ಸಿದ್ಧತೆಯನ್ನು ಮಾಡಲಾಗಿತ್ತು. ಅದೇ ರೀತಿ ಈ ಬಾರಿ ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಬಳಿ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+