ಖಾತೆ ಬಗ್ಗೆ ಅಸಮಾಧಾನವಿಲ್ಲ: ಸಿಎಸ್ ಪುಟ್ಟರಾಜು ಸ್ಪಷ್ಟನೆ
Recommended Video
ಬೆಂಗಳೂರು, ಜೂನ್ 09: ಪ್ರಬಲ ಖಾತೆ ಸಿಗದಿರುವುದಕ್ಕೆ ಜೆಡೆಎಸ್ ವರಿಷ್ಠರ ಮೇಲೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದ್ದ ಮೇಲುಕೋಟೆ ಶಾಸಕ ಸಿಎಸ್ ಪುಟ್ಟರಾಜು ಸ್ಪಷ್ಟೀಕರಣ ನೀಡಿದ್ದಾರೆ.
ಸಣ್ಣ ನೀರಾವರಿ ಖಾತೆ ಸಿಕ್ಕಿರುವುದಕ್ಕೆ ಬೇಸರವಿಲ್ಲ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಬೇಕೆಂಬ ಕನಸಿತ್ತು ಅದು ಆಗಿದೆ ಅಷ್ಟೇ ಸಾಕಿದೆ ಎಂದು ಅವರು ಹೇಳಿದ್ದಾರೆ.
ಜಿ.ಟಿ.ದೇವೇಗೌಡಗೆ ಕೊಟ್ಟ ಮಾತು ತಪ್ಪಿದ ಕುಮಾರಸ್ವಾಮಿ
ಮಾಧ್ಯಮಗಳಲ್ಲಿ ಬಂಡಾಯದ ಬಗ್ಗೆ ಪ್ರಕಟವಾಗುತ್ತಿರುವ ವರದಿಗಳು ಸತ್ಯಕ್ಕೆ ದೂರವಾಗಿರುವುದು ಎಂದಿರುವ ಅವರು, ನಮ್ಮ ಬೆಂಬಲಿಗರೂ ಸಹ ಯಾವುದೇ ಪ್ರತಿಭಟನೆಗೆ ಮುಂದಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಪುಟ್ಟರಾಜು ಅವರಿಗೆ ಸಣ್ಣ ನೀರಾವರಿ ಖಾತೆ ನೀಡಲಾಗಿತ್ತು. ಇದರಿಂದ ಬೇಸರಗೊಂಡಿದ್ದ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಒತ್ತಾಯ ಹೇರಿದ್ದರು.
ಕುಮಾರಸ್ವಾಮಿ ಸಂಪುಟದ ಖಾತೆ ಹಂಚಿಕೆ: ದೇವೇಗೌಡ್ರ ಮಾಸ್ಟರ್ ಮೈಂಡ್
ಪುಟ್ಟರಾಜು ಅವರು ಕೂಡ ದುರ್ಬಲ ಖಾತೆ ಕೊಟ್ಟಿದ್ದಾರೆಂದು ಅಸಮಾಧಾನಗೊಂಡಿದ್ದಾರೆ. ಸರ್ಕಾರಿ ಕಾರನ್ನು ವಾಪಾಸ್ ಕಳುಹಿಸಿದ್ದಾರೆ ಎನ್ನಲಾಗಿತ್ತು. ಆದರೆ ಇದನ್ನು ಅವರು ಅಲ್ಲಗಳೆದಿದ್ದು, ಸರ್ಕಾರಿ ಕಾರು ತಮ್ಮ ಬಳಿಯೇ ಇದೆ ಎಂದಿದ್ದಾರೆ.
ಜಿಟಿ ದೇವೇಗೌಡ ಹಾಗೂ ಸಿಎಸ್ ಪುಟ್ಟರಾಜು ಅವರು ದುರ್ಬಲ ಖಾತೆ ನೀಡಿರುವುದಕ್ಕೆ ಜೆಡಿಎಸ್ ವರಿಷ್ಠರ ಮೇಲೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿತ್ತು. ಆದರೆ ಅಂತಹದ್ದೇನು ಇಲ್ಲ ಎಂದು ಪುಟ್ಟರಾಜು ಅವರು ಸ್ಪಷ್ಠನೆ ನೀಡಿದ್ದಾರೆ. ಆದರೆ ಜಿಟಿ ದೇವೇಗೌಡರ ಅಸಮಾಧಾನ ಮುಂದುವರೆದಿದ್ದು ಅವರು ಯಾರ ಕೈಗೂ ಸಿಗುತ್ತಿಲ್ಲ ಎನ್ನಲಾಗಿದೆ.