ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಮಾರಸ್ವಾಮಿಗೆ ಮೋಸ ಮಾಡಲ್ಲ : ರವೀಂದ್ರ ಶ್ರೀಕಂಠಯ್ಯ

|
Google Oneindia Kannada News

ಮಂಡ್ಯ, ಡಿಸೆಂಬರ್ 17 : "ಮಂಡ್ಯದ ಜನರು ವಿಶ್ವಾಸದಿಂದ ಅಧಿಕಾರ ಕೊಟ್ಟಿದ್ದಾರೆ. ಜೆಡಿಎಸ್ ಪಕ್ಷವನ್ನು ಬಿಟ್ಟು ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮೋಸ ಮಾಡುವುದಿಲ್ಲ" ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದರು.

ಶ್ರೀರಂಗಪಟ್ಟಣ ಕ್ಷೇತ್ರದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಮಂಗಳವಾರ ಹಬ್ಬಿತ್ತು. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಈ ಕುರಿತು ಸ್ಪಷ್ಟನೆಯನ್ನು ನೀಡಿದರು.

ಮತ್ತೆ ಆಪರೇಷನ್ ಕಮಲ; ಇಬ್ಬರು ಜೆಡಿಎಸ್ ಶಾಸಕರು ಬಿಜೆಪಿಗೆ?ಮತ್ತೆ ಆಪರೇಷನ್ ಕಮಲ; ಇಬ್ಬರು ಜೆಡಿಎಸ್ ಶಾಸಕರು ಬಿಜೆಪಿಗೆ?

"ಮಂಡ್ಯದ ಜನರು ವಿಶ್ವಾಸದಿಂದ ಅಧಿಕಾರ ನೀಡಿದ್ದಾರೆ. ಜೆಡಿಎಸ್ ಪಕ್ಷವನ್ನು ಬಿಟ್ಟು ಜನರಿಗೆ, ಎಚ್. ಡಿ. ಕುಮಾರಸ್ವಾಮಿ ಅವರಿಗೆ ಮೋಸ ಮಾಡುವುದಿಲ್ಲ" ಎಂದು ರವೀಂದ್ರ ಶ್ರೀಕಂಠಯ್ಯ ಸ್ಪಷ್ಟಪಡಿಸಿದರು.

I Will Not Quit JDS Says Ravindra Srikantaiah

"ನಮ್ಮ ಕುಟುಂಬದಲ್ಲಿ ಮೂವರು ಶಾಸಕರಿದ್ದೇವೆ. ಜೆಡಿಎಸ್ ಪಕ್ಷದಿಂದ ನಾವು ಶಾಸಕರಾಗಿದ್ದೇವೆ. ಜೆಡಿಎಸ್ ಶಾಸಕರನ್ನು ಸೆಳೆಯುವ ಮೊದಲು ಕ್ಷೇತ್ರದಲ್ಲಿ ಒಂದು ಸ್ಥಾನ ಗೆದ್ದಿರುವ ಅವರು ಜಿಲ್ಲೆಯನ್ನು ಅಭಿವೃದ್ಧಿ ಮಾಡಲಿ" ಎಂದು ರವೀಂದ್ರ ಶ್ರೀಕಂಠಯ್ಯ ಸವಾಲು ಹಾಕಿದರು.

ಇನ್ನೂ ನಿಂತಿಲ್ಲ ಆಪರೇಷನ್ ಕಮಲ; ಈ ಸಾರಿ ಯಾರಿಗೆ ಗಾಳ?ಇನ್ನೂ ನಿಂತಿಲ್ಲ ಆಪರೇಷನ್ ಕಮಲ; ಈ ಸಾರಿ ಯಾರಿಗೆ ಗಾಳ?

"ನಾನು ಜೆಡಿಎಸ್ ಪಕ್ಷವನ್ನು ಬಿಡುವುದಿಲ್ಲ. ಶಾಸಕ ಸ್ಥಾನದ ಅವಧಿ ಮುಗಿಯುವ ತನಕ ಜೆಡಿಎಸ್ ಪಕ್ಷದಲ್ಲಿಯೇ ಇರಲಿದ್ದೇನೆ. ಮುಂದಿನ ದಿನಗಳಲ್ಲಿ ಏನು ಬೇಕಾದರೂ ಆಗಬಹುದು. ಸದ್ಯಕ್ಕಂತೂ ಯಾವುದೇ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕಿಸಿಲ್ಲ" ಎಂದು ಹೇಳಿದರು.

ಕಮಲ ಹಿಡಿದ ಕೆ.ಗೋಪಾಲಯ್ಯರಿಗೆ ಒಲಿದ 'ಮಹಾಲಕ್ಷ್ಮಿ'ಕಮಲ ಹಿಡಿದ ಕೆ.ಗೋಪಾಲಯ್ಯರಿಗೆ ಒಲಿದ 'ಮಹಾಲಕ್ಷ್ಮಿ'

ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇಬ್ಬರು ಸಹ ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರಾಗಿದ್ದು, ಕೆ. ಆರ್. ಪೇಟೆ ಉಪ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ಸೇರುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು.

English summary
I will not quit JD(S) and cheat Mandya people and H.D.Kumaraswamy said Srirangapatna JD(S) MLA Ravindra Srikantaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X