ಮೇಲುಕೋಟೆ ವೈರಮುಡಿ ದರ್ಶನಕ್ಕೆ ಗುರುತಿನ ಚೀಟಿ ಕಡ್ಡಾಯ
ಮಂಡ್ಯ, ಮಾರ್ಚ್ 22: ಮೇಲುಕೋಟೆಯ ಚೆಲುವ ನಾರಾಯಣಸ್ವಾಮಿಯ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 19 ರಿಂದ ಆರಂಭಗೊಂಡಿದ್ದು, ಮಾ.30 ರವರೆಗೆ ನಡೆಯಲಿದೆ. ಈ ಜಾತ್ರೆಯಲ್ಲಿ ಭಾಗವಹಿಸಲು ಮೇಲುಕೋಟೆಯ ಸ್ಥಳೀಯರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಆಗಮಿಸುವವರು ಸರ್ಕಾರ ನೀಡಿರುವ ಯಾವುದಾದರೊಂದು ಗುರುತಿನ ಚೀಟಿಯನ್ನು ತರುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ತಿಳಿಸಿದ್ದಾರೆ.
ಸೋಮವಾರ (ಮಾ.22) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದು, ಸದರಿ ಆಚರಣೆಗೆ ಅಂತರ್ ರಾಜ್ಯ, ಅಂತರ್ ಜಿಲ್ಲೆ, ಮಂಡ್ಯದ ಇತರೆ ತಾಲ್ಲೂಕುಗಳಿಂದ ಬರುವ ಭಕ್ತಾಧಿಗಳಿಗೆ ಕಡ್ಡಾಯವಾಗಿ ಪ್ರವೇಶ ನಿರ್ಬಂಧಿಸಲಾಗಿದೆ ಎಂದರು.
ರಾಜ್ಯ ಸರ್ಕಾರದ ಆದೇಶದಂತೆ ಕೋವಿಡ್-19 ವೈರಸ್ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ನಿಯಮಗಳನ್ನು ಸೂಚಿಸಲಾಗಿದ್ದು, ಭಕ್ತಾಧಿಗಳಿಗೆ ಎರಡು ಕಡೆ ಚೆಕ್ ಪೋಸ್ಟ್ ಗಳನ್ನು ನಿಯೋಜಿಸಲಾಗಿದ್ದು, ಕೋವಿಡ್-19 ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲಾಗುವುದು ಹಾಗೂ ನೆಗೆಟಿವ್ ವರದಿ ಬಂದವರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಸ್ಥಳೀಯ ಸಾರ್ವಜನಿಕರು ಮತ್ತು ಭಕ್ತಾಧಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ತಪ್ಪಿದಲ್ಲಿ ದಂಡ ವಿಧಿಸಲಾಗುವುದು ಮತ್ತು ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಆಗಮಿಸಿ ದೇವರ ದರ್ಶನವನ್ನು ಪಡೆಯುವುದು. ದೇವಸ್ಥಾನದ ಪ್ರಾಂಗಣದೊಳಗೆ ಒಂದು ಬಾರಿಗೆ 50 ರಿಂದ 100 ಮಂದಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಿದೆ ಎಂದರು.
ದೇವಾಲಯದ 200 ಮೀ. ಒಳ ಮತ್ತು ಹೊರ ಆವರಣದಲ್ಲಿ ಯಾವುದೇ ರೀತಿಯ ಸಾಮೂಹಿಕ ಭೋಜನ ವ್ಯವಸ್ಥೆ, ಪ್ರಸಾದ ವಿತರಣೆ ಇರುವುದಿಲ್ಲ. ಸುತ್ತಮುತ್ತಲಿನ ಹೊಟೇಲ್ಗಳಲ್ಲಿ ತಂಗುವಿಕೆಯನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಾ.24 ರಂದು ಬೆಳಿಗ್ಗೆ 7 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವಾಲಯದಲ್ಲಿ ನಡೆಯುವ ಪೂಜಾ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಯೂಟ್ಯೂಬ್, ಫೇಸ್ಬುಕ್ ಮತ್ತು ಜಿಲ್ಲಾಧಿಕಾರಿಗಳ ವೆಬ್ ಸೈಟ್ ನಲ್ಲಿ ನೇರ ಪ್ರಸಾರ ಮಾಡಲಾಗುವುದು. ಸಾರ್ವಜನಿಕರನ್ನು ಹೊರತುಪಡಿಸಿ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಮಾಧ್ಯಮದವರಿಗೆ ಹಾಗೂ ಅರ್ಚಕರು ಮತ್ತು ಸ್ವಯಂಸೇವಕರಿಗೆ ಪಾಸ್ ಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ಮಾತನಾಡಿ, ""ಮಹೋತ್ಸವ ಸಂದರ್ಭದಲ್ಲಿ ಹೆಚ್ಚು ಜನ ಸೇರದಂತೆ ಬಿಗಿ ಬಂದೋಬಸ್ತ್ಗಾಗಿ 4 ಡಿಎಸ್ಪಿ, 16 ಸಿಪಿಐ, 31 ಪಿಎಸ್ಐ, 100 ಎಎಸ್ಐ, 432 ಹೆಡ್ ಕಾನ್ಸ್ಟೇಬಲ್ ಮತ್ತು ಪಿಸಿ, 2 ಕೆ.ಎಸ್.ಆರ್.ಪಿ, 9 ಡಿಎಆರ್ ಹಾಗೂ 2 ಕ್ಯೂಆರ್ಪಿ ಸೇರಿದಂತೆ ಒಟ್ಟು 650 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ'' ಎಂದರು.
ಸುದ್ದಿಗೋಷ್ಠಿಯಲ್ಲಿ ಪಾಂಡವಪುರ ಉಪ ವಿಭಾಗಾಧಿಕಾರಿ ಶಿವಾನಂದಮೂರ್ತಿ, ವಾರ್ತಾಧಿಕಾರಿ ಟಿ.ಕೆ ಹರೀಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications