110 ಅಡಿ ತಲುಪಿದ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ

ಮಂಡ್ಯ, ಜುಲೈ 26; ಕಾವೇರಿ ನದಿ ಪಾತ್ರದಲ್ಲಿ ಭಾರೀ ಮಳೆಯಾಗುತ್ತಿದ್ದು ಕೃಷ್ಣರಾಜ ಸಾಗರ (ಕೆಆರ್‌ಎಸ್) ನೀರಿನ ಮಟ್ಟ 110.10 ಅಡಿಗೆ ತಲುಪಿದೆ. 10,034 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಜಲಾಶಯಕ್ಕೆ ಭಾನುವಾರ ಸಂಜೆಯ ವೇಳೆಗೆ 37,048 ಕ್ಯುಸೆಕ್ ಒಳಹರಿವು ಇತ್ತು. ಗರಿಷ್ಠ 124.80 ಅಡಿ ಎತ್ತರದ ಜಲಾಶಯದ ನೀರಿನ ಮಟ್ಟ 110 ಅಡಿಗೆ ತಲುಪಿದೆ.

ಒಳಹರಿವು ಹೆಚ್ಚಿರುವ ಹಿನ್ನಲೆಯಲ್ಲಿ ಕಾವೇರಿ ನೀರಾವರಿ ನಿಗಮ ಹೊರ ಹರಿವಿನ ಪ್ರಮಾಣವನ್ನು ಸಹ ಹೆಚ್ಚಳ ಮಾಡಿದೆ. 10,034 ಕ್ಯುಸೆಕ್ ಹೊರ ಹರಿವು ಇದ್ದು, ಜಲಾಶಯದ ತಗ್ಗು ಪ್ರದೇಶದಲ್ಲಿರುವ ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ.

krs

ಕೆಆರ್‌ಎಸ್ ಜಲಾಶಯದ ನೀರನ್ನು ಕೃಷಿಗೆ ಮಾತ್ರ ಬಳಕೆ ಮಾಡುವುದಿಲ್ಲ. ಬೆಂಗಳೂರು, ಮಂಡ್ಯ ಮತ್ತು ಮೈಸೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಲು ಸಹ ಬಳಕೆ ಮಾಡಲಾಗುತ್ತದೆ. ಕಳೆದ ವರ್ಷ ಇದೇ ಸಮಯದಲ್ಲಿ ಜಲಾಶಯದಲ್ಲಿ107 ಅಡಿ ನೀರಿನ ಸಂಗ್ರಹವಿತ್ತು.

ಕಾವೇರಿ ಕೊಳ್ಳದ ಜಲಾಶಯಗಳು; ಕಾವೇರಿ ಕೊಳ್ಳದಲ್ಲಿ ಹಾರಂಗಿ, ಹೇಮಾವತಿ, ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿವೆ. ಎಲ್ಲಾ ಜಲಾಶಯಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದ್ದು, ಭರ್ತಿಯಾಗಲು ಕೆಲವೇ ಅಡಿಗಳು ಬಾಕಿ ಇದೆ.

ಹಾರಂಗಿಯಲ್ಲಿ 869.95 ಮೀಟರ್, ಹೇಮಾವತಿಯಲ್ಲಿ 888.97 ಮೀಟರ್, ಕಬಿನಿಯಲ್ಲಿ694.89 ಮೀಟರ್ ನೀರಿನ ಸಂಗ್ರಹವಿದೆ. ಮಲೆನಾಡು ಮತ್ತು ಕೊಡಗು ಭಾಗದಲ್ಲಿ ಜುಲೈ 26ರ ಬಳಿಕ ಮಳೆಯ ಅಬ್ಬರ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+