ಕೆಆರ್ಎಸ್ಗೆ ಭಾರಿ ನೀರು; 100 ಅಡಿ ತಲುಪಿದ ನೀರಿನ ಮಟ್ಟ
ಮಂಡ್ಯ, ಆಗಸ್ಟ್ 09 : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆ. ಆರ್. ಎಸ್. ಜಲಾಶಯಕ್ಕೆ ಭಾರಿ ಪ್ರಮಾಣ ನೀರು ಹರಿದು ಬರುತ್ತಿದೆ. ಜಲಾಶಯದ ನೀರಿನ ಮಟ್ಟ 100 ಅಡಿ ತಲುಪಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೇವಲ ಒಂದೂವರೆ ದಿನದಲ್ಲಿ ಕೆ.ಆರ್. ಎಸ್. ಜಲಾಶಯದ ನೀರಿನ ಮಟ್ಟ 10 ಅಡಿ ಏರಿಕೆಯಾಗಿದೆ. ಜಲಾಶಯದಿಂದ ಸದ್ಯ 443 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಕೆ. ಆರ್. ಎಸ್. ಜಲಾಶಯದ ಗರಿಷ್ಟ ಮಟ್ಟ 124.80 ಅಡಿ. ಶುಕ್ರವಾರ ಸಂಜೆ ಜಲಾಶಯದಲ್ಲಿ 100.30 ಅಡಿ ನೀರಿನ ಸಂಗ್ರಹವಿದೆ. ಗುರುವಾರ 91 ಅಡಿ ಇದ್ದ ನೀರಿನ ಮಟ್ಟ, ಇಂದು ನೂರಕ್ಕೆ ಏರಿಕೆಯಾಗಿದೆ.

ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿದೆ. ಹಾಸನದ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ನೀರನ್ನು ಹೊರಬಿಡಲಾಗಿದೆ. ಇದರಿಂದಾಗಿ ಜಲಾಶಯಕ್ಕೆ ಶುಕ್ರವಾರ ಮಧ್ಯಾಹ್ನ 63, 211 ಕ್ಯುಸೆಕ್ ನೀರು ಹರಿದು ಬರುತ್ತಿತ್ತು.
ಹಾರಂಗಿ ಜಲಾಶಯದಿಂದ 30 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ. ಆದ್ದರಿಂದ, ಸಂಜೆಯ ವೇಳೆಗೆ ಕೆ. ಆರ್. ಎಸ್. ಜಲಾಶಯದ ಒಳ ಹರಿವಿನ ಪ್ರಮಾಣ 80 ಸಾವಿರಕ್ಕೆ ಏರಿಕೆಯಾಗುವ ನಿರೀಕ್ಷೆ ಇತ್ತು.
ಕಾವೇರಿ ಕೊಳ್ಳದ ಜಲಾಶಯಗಳ ಪೈಕಿ ಕೆ. ಆರ್. ಎಸ್. ಪ್ರಮುಖವಾದದ್ದು. ಮಂಡ್ಯ, ಮೈಸೂರು ಮತ್ತು ಬೆಂಗಳೂರು ಜಲಾಶಯದ ಮೇಲೆ ಅವಲಂಬಿತವಾಗಿವೆ. ಬೆಂಗಳೂರಿಗೆ ಕುಡಿಯುವ ನೀರನ್ನು ಸಹ ಇಲ್ಲಿಂದಲೇ ಪೂರೈಕೆ ಮಾಡಲಾಗುತ್ತದೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications