ಕೆಆರ್ ಎಸ್ ಗೆ ಆಂತರಿಕ ಭದ್ರತಾ ಎಡಿಜಿಪಿ ಭಾಸ್ಕರ್ ರಾವ್ ಭೇಟಿ
ಮಂಡ್ಯ, ಸೆಪ್ಟೆಂಬರ್ 17: ಕೃಷ್ಣರಾಜ ಸಾಗರ ಜಲಾಶಯವು ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಆಂತರಿಕ ಭದ್ರತಾ ಎಡಿಜಿಪಿ ಭಾಸ್ಕರ್ ರಾವ್ ಅವರು ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಕೃಷ್ಣರಾಜ ಸಾಗರ ಜಲಾಶಯ ಮತ್ತು ಬೃಂದಾವನ ಭದ್ರತೆಯ ಕುರಿತು ಸ್ಥಳೀಯ ಆಣೆಕಟ್ಟೆ ಭದ್ರತಾ ಉಸ್ತುವಾರಿ ವಹಿಸಿಕೊಂಡಿರುವ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಗಳಿಂದ ಮಾಹಿತಿ ಪಡೆದು, ಪರೀಶಿಲನೆ ನಡೆಸಿ ಕೆಲವು ಸಲಹೆ-ಸೂಚನೆ ನೀಡಿದರು.
ಇನ್ಮುಂದೆ ದಿನನಿತ್ಯ ಸಾವಿರಾರು ಜನರು ಆಗಮಿಸುವ ನಿರೀಕ್ಷೆ ಇದ್ದು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಡ್ಡಾಯ ಮಾಸ್ಕ ಹಾಕಿಕೊಂಡು ಬರುವಂತೆ ನೋಡಿಕೊಳ್ಳಬೇಕು, ಈ ವೇಳೆ ದೈಹಿಕ ಅಂತರ ನಿಯಮ ಪಾಲಿಸುವಂತೆ ತಿಳಿಹೇಳಬೇಕು. ಬೃಂದಾವನ ಹಾಗೂ ಅಣೆಕಟ್ಟೆ ಭದ್ರತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಎಂದು ಎಡಿಜಿಪಿ ಭಾಸ್ಕರ್ ರಾವ್ ಸಲಹೆ ನೀಡಿದರು.

ಕೃಷ್ಣರಾಜ ಸಾಗರ ಜಲಾಶಯದ ಬಗ್ಗೆ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಾಸುದೇವ ಅವರಿಂದ ಮಾಹಿತಿ ಪಡೆದರು. ನಂತರ ಕಾವೇರಿ ಮಾತೆಯ ಪ್ರತಿಮೆಗೆ ಭಾಸ್ಕರ್ ರಾವ್ ಪೂಜೆ ಸಲ್ಲಿಸಿ, ಬೃಂದಾವನ ವೀಕ್ಷಣೆ ಮಾಡಿದರು.
ಕೆಆರ್ ಎಸ್ ಜಲಾಶಯವು ಪ್ರವಾಸಿಗರಿಗೆ ಮುಕ್ತವಾಗಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವು ಸೆ.16 ರಿಂದ ಪ್ರವಾಸಿಗರಿಗೆ ಬೃಂದಾವನ ಗಾರ್ಡನ್ ವೀಕ್ಷಿಸಲು ಅವಕಾಶ ಮಾಡಿಕೊಟ್ಟಿದೆ.
ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಕಳೆದ ಮಾರ್ಚ್ ತಿಂಗಳಿನಿಂದಲೇ ಕೆ.ಆರ್.ಎಸ್ ವೀಕ್ಷಿಸಲು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಇದೀಗ ಲಾಕ್ ಡೌನ್ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಕಾವೇರಿ ನೀರಾವರಿ ನಿಗಮ ನಿಯಮಿತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications