ಮದ್ದೂರಿನಲ್ಲಿ 5 ಜನ ಐಪಿಎಲ್ ಬೆಟ್ಟಿಂಗ್ ದಂಧೆಕೋರರು ಅಂದರ್
ಮದ್ದೂರಿನ ಟಿಬಿ ವೃತ್ತದ ಬಳಿ ಇರುವ ನೈದಿಲೆ ಮಹಲ್ ರೆಸಿಡೆನ್ಸಿ ಲಾಡ್ಜ್ ನಲ್ಲಿ ಆರೋಪಿಗಳು ಕೊಠಡಿ ಬಾಡಿಗೆಗೆ ಪಡೆದು, ಪಂಜಾಬ್ ಹಾಗೂ ಡೆಲ್ಲಿ ತಂಡದ ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆ ಮಾಡುತ್ತ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು.
ಮಂಡ್ಯ, ಏಪ್ರಿಲ್ 18: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿದ್ದ ಐವರನ್ನು ಮದ್ದೂರು ಪೊಲೀಸರು ಬಂಧಿಸಿದ್ದಾರೆ ನಡೆದಿದೆ.
ಬಂಧಿತರಿಂದ ಬೆಟ್ಟಿಂಗ್ಗೆ ಬಳಕೆಯಾಗಿದ್ದ ಒಂದು ಇನೋವಾ ಕಾರು, 30 ಸಾವಿರ ನಗದು, ಒಂದು ಟಿವಿ, ಸೆಟ್ ಟಾಪ್ ಬಾಕ್ಸ್ ಹಾಗೂ 11 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ಮೂಲದವರಾದ ಬೈಯಪ್ಪನಹಳ್ಳಿಯ ಬುಕ್ಕಿ ಟಿ.ಆನಂದ್, ಚಾಲಕರಾದ ರಮೇಶ್ ರಾಮಕೃಷ್ಣ, ವಿಜಯನ್ ಹಾಗೂ ವಸತಿ ಗೃಹ ಬಾಡಿಗೆಗೆ ಪಡೆದಿದ್ದ ಲಿಂಗರಾಜು ಬಂಧಿತರಾಗಿದ್ದಾರೆ.[ಮಂಡ್ಯ: 35ಕ್ಕೂ ಹೆಚ್ಚು ಕೋತಿಗಳ ಮಾರಣಹೋಮ]

ಮದ್ದೂರು ಪಟ್ಟಣದ ಟಿಬಿ ವೃತ್ತದ ಸಮೀಪದ ನೈದಿಲೆ ಮಹಲ್ ರೆಸಿಡೆನ್ಸಿ ಲಾಡ್ಜ್ ನಲ್ಲಿ ಆರೋಪಿಗಳು ಕೊಠಡಿ ಬಾಡಿಗೆಗೆ ಪಡೆದು, ಪಂಜಾಬ್ ಹಾಗೂ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆ ಮಾಡುತ್ತ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದರಿಂದ ಜಿಲ್ಲಾ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ದಾಳಿಯ ಸುಳಿವು ದೊರೆಯದ ಕಾರಣ ಆರೋಪಿಗಳು ಕೊಠಡಿಯಲ್ಲಿ ಕ್ರಿಕೆಟ್ ಪಂದ್ಯ ನೋಡುತ್ತಾ ತಮ್ಮ ಬೆಟ್ಟಿಂಗ್ ದಂಧೆಯನ್ನು ಮುಂದುವರೆಸಿದ್ದರು ಈ ವೇಳೆ ದಾಳಿ ನಡೆಸಿ ಬಂಧಿಸಲಾಗಿದೆ.[ಕಾಂಗ್ರೆಸ್ ಬಿಡ್ತೀರಾ ಅಂದಿದ್ದಕ್ಕೆ ಅಂಬರೀಷಣ್ಣ ಏನಂದ್ರು ಗೊತ್ತಾ?]
ಕೊಠಡಿಯ ಬಾಗಿಲು ತಟ್ಟುತ್ತಿದ್ದಂತೆಯೇ ಬಾಗಿಲು ತೆಗೆದ ಆರೋಪಿಗಳು ಪೊಲೀಸರು ಬಂದಿದ್ದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ತಕ್ಷಣ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಬೆಟ್ಟಿಂಗ್ ದಂಧೆಗೆ ಬಳಸುತ್ತಿದ್ದ ವಸ್ತುಗಳನ್ನು ನಗದು ಸಹಿತ ವಶಪಡಿಸಿಕೊಂಡು ವಂಚನೆ, ಜೂಜು ಕಾಯಿದೆಯನ್ವಯ ಮೊಕದ್ದಮೆಯನ್ನು ಐವರ ಮೇಲೆ ದಾಖಲು ಮಾಡಿದ್ದಾರೆ.
ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದು, ನ್ಯಾಯಾಧೀಶರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಐಪಿಎಲ್ ಪಂದ್ಯದ ಹಿಂದೆ ಭಾರೀ ಬೆಟ್ಟಿಂಗ್ ನಡೆಯುತ್ತಿದ್ದು, ಗ್ರಾಮೀಣ ಪ್ರದೇಶಗಳಿಂದ ಆರಂಭವಾಗಿ ನಗರ ಪ್ರದೇಶಗಳ ತನಕ ಜಾಲ ಹರಡಿದೆ. ಈ ಪಂದ್ಯಾವಳಿ ಮುಗಿಯುವ ವೇಳೆಗೆ ಅದೆಷ್ಟು ಮಂದಿ ಎಲ್ಲವನ್ನು ಕಳೆದುಕೊಂಡು ಬೀದಿಗೆ ಬೀಳಲಿದ್ದಾರೋ ಆ ದೇವರಿಗೆ ಗೊತ್ತು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications