ಮಂಡ್ಯದಲ್ಲಿ ಮತಾಂತರದ ವಿವಾದ ಭುಗಿಲು, ಸತ್ಯ ಬಯಲಾಗಲಿ
ಮಂಡ್ಯ, ಜೂನ್ 8: ಮಂಡ್ಯದಲ್ಲಿ ಮತಾಂತರದ ವಿರುದ್ಧ ಕೂಗೆದ್ದಿದೆ. ಪಾಂಡವಪುರದ ಶ್ರೀನಿವಾಸ್ ಎಂಬುವರ ಮಗ ಚಂದನ್ ನನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಮತ್ತು ಬಿಜೆಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.
ಮುಸ್ಲಿಂ ಮುಖಂಡ ಯೂಸೂಫ್ ಎಂಬುವವರು ತಮ ಮಗಳಿಗೆ ಮದುವೆ ಮಾಡುವ ಸಲುವಾಗಿಯೇ ಚಂದನ್ ಗೆ ಮುಂಜಿ ಮಾಡಿ, ಇಸ್ಲಾಂಗೆ ಮತಾಂತರ ಮಾಡಿದ್ದಾರೆ. ಹತ್ತೊಂಬತ್ತು ವರ್ಷದ ನನ್ನ ಮಗನಿಗೆ ಮಾಡಲು ಹೊರಟಿರುವ ಬಲವಂತದ ಮದುವೆಯನ್ನು ತಡೆಯಬೇಕು ಎಂದು ಚಂದನ್ ನ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.[ಪ್ರೀತಿಸಿದ ಹುಡುಗಿಗಾಗಿ ಹಿಂದೂ ಧರ್ಮಕ್ಕೆ ಮತಾಂತರವಾದ ಮುಸ್ಲಿಂ ಯುವಕ]

ಈಗ ಈ ಪ್ರಕರಣದಲ್ಲಿ ಹಿಂದೂಪರ ಸಂಘಟನೆಗಳು ಪ್ರವೇಶಿಸಿದ್ದು, ಹಿಂದೂ ಯುವಕರನ್ನು ಜಿಹಾದ್ ಗೆ ಬಳಸಿಕೊಳ್ಳಲು ಮಾಡುತ್ತಿರುವ ಕೆಲಸ ಇದು ಎಂದು ಆರೋಪ ಮಾಡಿವೆ. ಆದರೆ ಇಡೀ ಪ್ರಕರಣ ಸಂಕೀರ್ಣವಾಗಿದ್ದು, ಸತ್ಯ ಹೊರಬರಬೇಕಿದೆ. ಪಾಂಡವಪುರ ಪೊಲೀಸರು ದೂರಿನ ಸತ್ಯಾಸತ್ಯತೆ ಪರಿಶೀಲಿಸಿ, ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕಾಪಾಡಬೇಕಿದೆ.[ಮತಾಂತರಕ್ಕಾಗಿ ಕ್ರಿಶ್ಚಿಯನ್ ಸಂಘಟನೆಗಳಿಂದ ಎನ್ ಜಿಒಗಳಿಗೆ 17 ಸಾವಿರ ಕೋಟಿ]
ಈ ಹಿಂದೆ ಮಂಡ್ಯದಲ್ಲೇ ನಡೆದ ಪ್ರಕರಣವೊಂದರಲ್ಲಿ ಎರಡು ಕೋಮಿನ ಹುಡುಗ-ಹುಡುಗಿ ಮದುವೆಯಾಗಲು ಕುಟುಂಬಗಳು ಒಪ್ಪಿಕೊಂಡಿದ್ದರೂ ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications