ನೀರಿನ ಸಂರಕ್ಷಣೆ ಬಗ್ಗೆ ಚಿಂತಿಸುವುದು ಅಗತ್ಯ: ತಿವೇಣಿ ಸಂಗಮ ಕುಂಭಮೇಳದಲ್ಲಿ ಡಾ. ವೀರೇಂದ್ರ ಹೆಗ್ಗಡೆ
ಮಂಡ್ಯ, ಅಕ್ಟೋಬರ್ 15: ಜೀವನಾಡಿಯಾಗಿರುವ ನೀರನ್ನು ಪೂಜಿಸಿ ಸಂರಕ್ಷಿಸುವುದರ ಜೊತೆಗೆ ನೀರಿನ ಬೆಲೆಯನ್ನೂ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆ ಸಲಹೆ ನೀಡಿದರು.
ಜಿಲ್ಲಾಡಳಿತದ ವತಿಯಿಂದ ಕೆ.ಆರ್. ಪೇಟೆ ತಾಲೂಕು ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಆಯೋಜಿಸಲಾಗಿದ್ದ ಮಹಾ ಕುಂಭಮೇಳ ಉದ್ಘಾಟಿಸಿ ಮಾತನಾಡಿದ ಅವರು, "ನೀರನ್ನು ಕೃಷಿ, ಕೈಗಾರಿಕೆ, ಪ್ರತಿನಿತ್ಯದ ಕೆಲಸಕ್ಕೆ ಬೇಕು. ಅನಾವೃಷ್ಠಿಯನ್ನು ಅನುಭವಿಸಿದ ಸಂದರ್ಭದಲ್ಲಿ ಪ್ರತಿ ಹನಿ ನೀರಿನ ಬೆಲೆ ತಿಳಿದಿದೆ. ಪ್ರತಿ ದಿನ ನಲ್ಲಿಯಲ್ಲಿ ಸದಾ ಸರಬರಾಜು ಆಗುತ್ತಿದ್ದ ನೀರು ನಿಗಧಿತ ಸಮಯಕ್ಕೆ ಸೀಮಿತವಾಗುತ್ತಿದೆ. ಇದು ನೀರನ್ನು ಉಳಿಸಿ ಎಂದು ಪರಿಸರ ನಮಗೆ ನೀಡಿರುವ ಎಚ್ಚರಿಕೆ ಗಂಟೆ. ಈ ಬಗ್ಗೆ ಗಂಭೀರ ಚಿಂತನೆ ನಡೆಸುವುದು ಅಗತ್ಯ," ಎಂದು ಪ್ರತಿಪಾದಿಸಿದರು.
ಬಹಳಷ್ಟು ವಸ್ತುಗಳು ನಮ್ಮ ಜೀವನದಲ್ಲಿ ಸಹಕರಿಯಾಗಿರುತ್ತದೆ. ಆಯುಧ ಪೂಜೆಯಲ್ಲಿ ಆಯುಧಗಳು ಹಾಗೂ ಮನೆಯಲ್ಲಿ ಉಪಯೋಗಿಸುವ ವಸ್ತುಗಳಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ಅದೇ ರೀತಿ ನೀರಿಗೂ ವಿಶೇಷ ಮಾನ್ಯ ನೀಡಿ ಸಂರಕ್ಷಿಸುವ ಕೆಲಸ ಆಗಬೇಕು. ಕೆ.ಆರ್.ಪೇಟೆಯಲ್ಲಿ ಕಾವೇರಿ, ಲಕ್ಷ್ಮಣ ತೀರ್ಥ ಹಾಗೂ ಹೇಮಾವತಿ ನದಿಗಳು ಸೇರಿ ತ್ರಿವೇಣಿ ಸಂಗಮವಾಗಿದೆ. ಇಲ್ಲಿ ನೀರನ್ನು ಪೂಜಿಸಿ, ಅರಾಧಿಸಲು ಕುಂಭ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಲ್ಲಿ ಪುಣ್ಯ ಸ್ನಾನ ಮಾಡಿ ಕರೆ ನೀಡಿದರು.

ಇದೇ ವೇಳೆ ರೇಷ್ಮೆ, ಯುಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ.ಕೆ.ಸಿ. ನಾರಾಯಣ ಗೌಡ ಅವರು ಮಾತನಾಡಿ, ಕಾವೇರಿ, ಹೇಮಾವತಿ, ಲಕ್ಷ್ಮಣತೀರ್ಥ ಮೂರು ನದಿಗಳು ಸಮಾಗಮವಾಗುವ ಈ ತ್ರಿವೇಣಿ ಸಂಗಮದಲ್ಲಿ ಜಗದ್ಗುರುಗಳ ದಿವ್ಯ ಸಾನಿಧ್ಯ ದಲ್ಲಿ ಮಹಾ ಕುಂಭಮೇಳ ಆಚರಣೆಯನ್ನು ಮಾಡುತ್ತಿದ್ದೇವೆ ಎಂದರು.
ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಹಾಗೂ ಇನ್ನಿತರ ಜಿಲ್ಲೆಗಳಿಂದ ಭಕ್ತಾಧಿಗಳು ಮಹಾ ಕುಂಭ ಮೇಳದಲ್ಲಿ ಪಾಲ್ಗೊಂಡು ಶ್ರೀ ಮಲೈ ಮಹದೇಶ್ವರ ಸ್ವಾಮಿಗೆ ಪೂಜೆಯನ್ನು ಸಲ್ಲಿಸಿ ಪುಣ್ಯ ಸ್ನಾನವನ್ನು ಮಾಡಿ ಅದರ ಲಾಭವನ್ನು ಭಕ್ತಾಧಿಗಳು ಪಡೆದುಕೊಳ್ಳಿ ಎಂದು ತಿಳಿಸಿದರು.

ದಕ್ಷಿಣ ಕರ್ನಾಟಕದಲ್ಲಿ ಮೂರು ನದಿಗಳು ಸಂಗಮವಾಗಿದೆ ಎಂದರೆ ಅದು ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ. ಹಾಗಾಗಿ ಈ ಸ್ಥಳ ಮುಂದಿನ ದಿನಮಾನದಲ್ಲಿ ದೊಡ್ಡ ತೀರ್ಥ ಸ್ಥಾನವಾಗಿ ಬೆಳೆಯಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಇದಕ್ಕೆ ಜಗದ್ಗುರುಗಳ ಸಹಕಾರ ನೀಡಬೇಕು. ಮಹಾ ಕುಂಭಮೇಳ ಮಹೋತ್ಸವಕ್ಕೆ ಆಗಮಿಸಿರುವ ಎಲ್ಲಾ ಭಕ್ತಾದಿಗಳಿಗೂ ಧನ್ಯವಾದಗಳನ್ನು ತಿಳಿಸಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications