ಕುಮಾರಸ್ವಾಮಿ ಸಿಎಂ ಆದಾಗ ಸಿಡಿ ಕೇಸ್ ಸಿಬಿಐಗೆ: ಎಲ್.ಆರ್ ಶಿವರಾಮೇಗೌಡ
ಮಂಡ್ಯ, ಏಪ್ರಿಲ್ 1: "ಎಚ್.ಡಿ ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗ ಸಿಡಿ ಪ್ರಕರಣವನ್ನು ಸಿಬಿಐನಿಂದ ತನಿಖೆ ಮಾಡಿಸಿ ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ'' ಎಂದು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಹೇಳಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಶಿವರಾಮೇಗೌಡ, ""ರಾಜ್ಯದಲ್ಲಿ ಡ್ರಗ್ಸ್ ಕೇಸ್ ಯಾವ ರೀತಿ ಹಳ್ಳ ಹಿಡಿದಿದೆ ಎಂದು ನಾವೆಲ್ಲ ನೋಡಿದ್ದೇವೆ. ಅದೇ ರೀತಿ ಸಿಡಿ ಪ್ರಕರಣ ಸಹ ಹಳ್ಳ ಹಿಡಿಯುತ್ತದೆ'' ಎಂದು ಆರೋಪಿಸಿದರು.
ಡ್ರಗ್ಸ್ ಪ್ರಕರಣದಲ್ಲಿ ಬಿಲ ಅಗೆದು ಇಲಿ ಹಿಡಿಯುವ ಹಾಗೆ ಬೇಕಾದವರನ್ನು ಬಿಟ್ಟು ಬೇಡವಾದವರನ್ನು ಹಿಡಿದರು. ಅದೇ ರೀತಿಯಲ್ಲಿ ಈ ಸಿಡಿ ಕೇಸ್ ಕೂಡ ಹಳ್ಳ ಹಿಡಿಯುತ್ತದೆ. ಪೊಲೀಸರು ಸರ್ಕಾರದ ಅನ್ನ ತಿನ್ನುತ್ತಿದ್ದೇವೆ ಎಂದು ಅಂದುಕೊಂಡಿದ್ದರೆ ಇಷ್ಟೊತ್ತಿಗೆ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕಿತ್ತು ಎಂದು ಆಗ್ರಹಿಸಿದರು.

ರಮೇಶ್ ಜಾರಕಿಹೊಳಿಯನ್ನು ಇಲ್ಲಿಯವರೆಗೆ ಬಂಧಿಸುವ ಕೆಲಸ ಮಾತ್ರ ಆಗಿಲ್ಲ. ಮುಖ್ಯಮಂತ್ರಿಗಳು ಅತ್ಯಾಚಾರ ಆರೋಪಿಯನ್ನು ಉಪ ಚುನಾವಣೆಯ ಪ್ರಚಾರಕ್ಕೆ ಆಹ್ವಾನ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಸಿಡಿ ಪ್ರಕರಣಕ್ಕೆ ನ್ಯಾಯವಾದರೂ ಹೇಗೆ ಸಿಗುತ್ತದೆ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ಟೀಕಿಸಿದರು.

ಒಂದು ವೇಳೆ ಎಸ್ಐಟಿ ಅಧಿಕಾರಿಗಳು ಈ ಕೇಸ್ ಅನ್ನು ಹಳ್ಳ ಹಿಡಿಸಿದರೆ, ನಾವು ನ್ಯಾಯಾಲಯದಲ್ಲಿ ಈ ಬಗ್ಗೆ ದೂರು ದಾಖಲು ಮಾಡಿ, ಸಿಬಿಐ ತನಿಖೆ ಆಗುವಂತೆ ಹೋರಾಟ ಮಾಡುತ್ತೇವೆ. ಅತ್ಯಾಚಾರಿ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ತಲೆ ತಗ್ಗಿಸಿ ಇರಬೇಕಿತ್ತು. ಆದರೆ ಅವರು ಸರ್ಕಾರವನ್ನು ಬೀಳಿಸುತ್ತೇನೆ ಎಂದು ಬೆದರಿಸುತ್ತಿದ್ದಾರೆ. ಹೀಗೆ ಇರುವಾಗ ಈ ಪ್ರಕರಣದಲ್ಲಿ ಜಾರಕಿಹೊಳಿಗೆ ಕ್ಲೀನ್ ಚೀಟ್ ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications