ಜೆಡಿಎಸ್-ಕಾಂಗ್ರೆಸ್ ದೋಸ್ತಿಗಳಿಂದ ಅಮಿತ್ ಶಾ ಹೇಳಿಕೆಯನ್ನ ತಿರುಚುವ ಹುನ್ನಾರ: ಬಿಜೆಪಿ ಆರೋಪ
ಮಂಡ್ಯ, ಜನವರಿ, 03: ನಂದಿನಿ ಉತ್ಪನ್ನಗಳನ್ನು ವಿಶ್ವದರ್ಜೆಗೆ ಏರಿಸಲು ಗುಜರಾತಿನ ಅಮುಲ್ ಡೇರಿಯ ತಾಂತ್ರಿಕತೆ, ಆಡಳಿತಾತ್ಮಕ, ಮಾರುಕಟ್ಟೆ ವಿಸ್ತರಣೆಗೆ ಮಾರ್ಗದರ್ಶನ ಮತ್ತು ಸಹಕಾರ ಕೊಡಿಸುವುದಾಗಿ ಅಮಿತ್ ಶಾ ಹೇಳಿದ್ದರು. ಆದರೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಹೇಳಿಕೆಯನ್ನು ಜೆಡಿಎಸ್-ಕಾಂಗ್ರೆಸ್ ದೋಸ್ತಿಗಳು ತಿರುಚುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಕಾಂಗ್ರೆಸ್, ಜೆಡಿಎಸ್ ವಿರುದ್ಧ ಆಕ್ರೋಶ
ಇತ್ತೀಚೆಗೆ ಮಂಡ್ಯದಲ್ಲಿ ಮೆಗಾ ಡೇರಿ ಉದ್ಘಾಟನಾ ಸಮಾರಂಭದಲ್ಲಿ ಅಮಿತ್ ಶಾ ಅವರು ಹಾಲು ಒಕ್ಕೂಟದ ಕಾರ್ಯವೈಖರಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದರು. ಅಲ್ಲದೆ, ಕೆಎಂಎಫ್ಗೆ ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿಯಿಂದ ಸಿಗಬಹುದಾದ ಎಲ್ಲ ಸೌಲಭ್ಯಗಳು ಹಾಗೂ ಕೇಂದ್ರ ಸರ್ಕಾರದ ಸಹಕಾರ ಇಲಾಖೆಯಿಂದ ದೊರೆಯಬಹುದಾದ ಅಗತ್ಯ ನೆರವನ್ನೂ ಒದಗಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಇಂತಹ ಹೊಸ ಚಿಂತನೆಯ ವಿಚಾರವನ್ನು ಬಿಟ್ಟು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಜನರಲ್ಲಿ ಇಲ್ಲಸಲ್ಲದ ಗೊಂದಲ ಸೃಷ್ಠಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್ ಟೀಕಿಸಿದ್ದಾರೆ.

ಕಾಂಗ್ರೆಸ್, JDSನವರು ಸುಳ್ಳು ಹೇಳುತ್ತಿದ್ದಾರೆ
ಕೆಎಂಎಫ್ಗೆ ಕೇಂದ್ರ ಸರ್ಕಾರ ಸಹಕಾರ ಇಲಾಖೆಯಿಂದ ದೊರೆಯಬಹುದಾದ ನೆರವು ಮತ್ತು ಹಾಲು ಒಕ್ಕೂಟಗಳಿಗೆ ಗುಜರಾತ್ನ ಅಮುಲ್ ಡೇರಿಯಿಂದ ತಾಂತ್ರಿಕ, ಆಡಳಿತಾತ್ಮಕ, ಮಾರುಕಟ್ಟೆ ತಂತ್ರಗಳ ವಿನಿಮಯದ ಕುರಿತು ಮಾಹಿತಿ ನೀಡಿದ್ದರು. ಆದರೆ ಇದನ್ನು ಗಣನೆಗೆ ತೆಗೆದುಕೊಳ್ಳದೆ ಕುಮಾರಸ್ವಾಮಿ ಅವರು ಕಾರ್ಪೊರೇಟ್ ಕುಳಗಳ ಕಣ್ಣು ಬಿದ್ದಿದೆ. ಮುಂದಿನ ದಿನಗಳಲ್ಲಿ ಇದನ್ನೂ ಕೇಂದ್ರ ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತದೆ ಎಂದು ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವಿಧಾನ ಸಭಾಚುನಾವಣೆಗೂ ಮುನ್ನ ಇಸ್ರೇಲ್ ದೇಶಕ್ಕೆ ಭೇಟಿ ನೀಡಿದ್ದ ಕುಮಾರಸ್ವಾಮಿ ಅವರು ಅಲ್ಲಿನ ಕೃಷಿ ತಾಂತ್ರಿಕತೆಯನ್ನು ಇಲ್ಲಿಯೂ ಅಳವಡಿಸುವುದಾಗಿ ಬಡಾಯಿ ಕೊಚ್ಚಿಕೊಂಡಿದ್ದರು. ಎಲ್ಲೆಲ್ಲಿ ಇದನ್ನು ಅಳವಡಿಸಿದ್ದಾರೆ ಎಂಬುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರದ ಸ್ವಾಧೀನದಲ್ಲಿರುವ ಸ್ವಾಯತ್ತ ಸಂಸ್ಥೆಗಳನ್ನು ಶಿಫಾರಸ್ಸಿಲ್ಲದೆ ತೆಗೆದುಕೊಳ್ಳಲಾಗದು ಎಂಬುದನ್ನು ಸ್ವತಃ ಕಾನೂನು ತಿಳಿದಿರುವ ಸಿದ್ದರಾಮಯ್ಯ ಅವರು ತಿಳಿದುಕೊಳ್ಳಬೇಕು. ಸಾಮಾನ್ಯ ತಿಳುವಳಿಕೆ ಇಲ್ಲದವರಂತೆ ಮಾತನಾಡುವುದು ಕಾನೂನು ಓದಿರುವ ಸಿದ್ದರಾಮಯ್ಯನವರಿಗೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಿಡಿಕಾರಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications