ಜೆಡಿಎಸ್-ಕಾಂಗ್ರೆಸ್ ದೋಸ್ತಿಗಳಿಂದ ಅಮಿತ್ ಶಾ ಹೇಳಿಕೆಯನ್ನ ತಿರುಚುವ ಹುನ್ನಾರ: ಬಿಜೆಪಿ ಆರೋಪ
ಮಂಡ್ಯ, ಜನವರಿ, 03: ನಂದಿನಿ ಉತ್ಪನ್ನಗಳನ್ನು ವಿಶ್ವದರ್ಜೆಗೆ ಏರಿಸಲು ಗುಜರಾತಿನ ಅಮುಲ್ ಡೇರಿಯ ತಾಂತ್ರಿಕತೆ, ಆಡಳಿತಾತ್ಮಕ, ಮಾರುಕಟ್ಟೆ ವಿಸ್ತರಣೆಗೆ ಮಾರ್ಗದರ್ಶನ ಮತ್ತು ಸಹಕಾರ ಕೊಡಿಸುವುದಾಗಿ ಅಮಿತ್ ಶಾ ಹೇಳಿದ್ದರು. ಆದರೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಹೇಳಿಕೆಯನ್ನು ಜೆಡಿಎಸ್-ಕಾಂಗ್ರೆಸ್ ದೋಸ್ತಿಗಳು ತಿರುಚುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಕಾಂಗ್ರೆಸ್, ಜೆಡಿಎಸ್ ವಿರುದ್ಧ ಆಕ್ರೋಶ
ಇತ್ತೀಚೆಗೆ ಮಂಡ್ಯದಲ್ಲಿ ಮೆಗಾ ಡೇರಿ ಉದ್ಘಾಟನಾ ಸಮಾರಂಭದಲ್ಲಿ ಅಮಿತ್ ಶಾ ಅವರು ಹಾಲು ಒಕ್ಕೂಟದ ಕಾರ್ಯವೈಖರಿಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದರು. ಅಲ್ಲದೆ, ಕೆಎಂಎಫ್ಗೆ ರಾಷ್ಟ್ರೀಯ ಡೇರಿ ಅಭಿವೃದ್ಧಿ ಮಂಡಳಿಯಿಂದ ಸಿಗಬಹುದಾದ ಎಲ್ಲ ಸೌಲಭ್ಯಗಳು ಹಾಗೂ ಕೇಂದ್ರ ಸರ್ಕಾರದ ಸಹಕಾರ ಇಲಾಖೆಯಿಂದ ದೊರೆಯಬಹುದಾದ ಅಗತ್ಯ ನೆರವನ್ನೂ ಒದಗಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಇಂತಹ ಹೊಸ ಚಿಂತನೆಯ ವಿಚಾರವನ್ನು ಬಿಟ್ಟು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಜನರಲ್ಲಿ ಇಲ್ಲಸಲ್ಲದ ಗೊಂದಲ ಸೃಷ್ಠಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್ ಟೀಕಿಸಿದ್ದಾರೆ.

ಕಾಂಗ್ರೆಸ್, JDSನವರು ಸುಳ್ಳು ಹೇಳುತ್ತಿದ್ದಾರೆ
ಕೆಎಂಎಫ್ಗೆ ಕೇಂದ್ರ ಸರ್ಕಾರ ಸಹಕಾರ ಇಲಾಖೆಯಿಂದ ದೊರೆಯಬಹುದಾದ ನೆರವು ಮತ್ತು ಹಾಲು ಒಕ್ಕೂಟಗಳಿಗೆ ಗುಜರಾತ್ನ ಅಮುಲ್ ಡೇರಿಯಿಂದ ತಾಂತ್ರಿಕ, ಆಡಳಿತಾತ್ಮಕ, ಮಾರುಕಟ್ಟೆ ತಂತ್ರಗಳ ವಿನಿಮಯದ ಕುರಿತು ಮಾಹಿತಿ ನೀಡಿದ್ದರು. ಆದರೆ ಇದನ್ನು ಗಣನೆಗೆ ತೆಗೆದುಕೊಳ್ಳದೆ ಕುಮಾರಸ್ವಾಮಿ ಅವರು ಕಾರ್ಪೊರೇಟ್ ಕುಳಗಳ ಕಣ್ಣು ಬಿದ್ದಿದೆ. ಮುಂದಿನ ದಿನಗಳಲ್ಲಿ ಇದನ್ನೂ ಕೇಂದ್ರ ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತದೆ ಎಂದು ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವಿಧಾನ ಸಭಾಚುನಾವಣೆಗೂ ಮುನ್ನ ಇಸ್ರೇಲ್ ದೇಶಕ್ಕೆ ಭೇಟಿ ನೀಡಿದ್ದ ಕುಮಾರಸ್ವಾಮಿ ಅವರು ಅಲ್ಲಿನ ಕೃಷಿ ತಾಂತ್ರಿಕತೆಯನ್ನು ಇಲ್ಲಿಯೂ ಅಳವಡಿಸುವುದಾಗಿ ಬಡಾಯಿ ಕೊಚ್ಚಿಕೊಂಡಿದ್ದರು. ಎಲ್ಲೆಲ್ಲಿ ಇದನ್ನು ಅಳವಡಿಸಿದ್ದಾರೆ ಎಂಬುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರದ ಸ್ವಾಧೀನದಲ್ಲಿರುವ ಸ್ವಾಯತ್ತ ಸಂಸ್ಥೆಗಳನ್ನು ಶಿಫಾರಸ್ಸಿಲ್ಲದೆ ತೆಗೆದುಕೊಳ್ಳಲಾಗದು ಎಂಬುದನ್ನು ಸ್ವತಃ ಕಾನೂನು ತಿಳಿದಿರುವ ಸಿದ್ದರಾಮಯ್ಯ ಅವರು ತಿಳಿದುಕೊಳ್ಳಬೇಕು. ಸಾಮಾನ್ಯ ತಿಳುವಳಿಕೆ ಇಲ್ಲದವರಂತೆ ಮಾತನಾಡುವುದು ಕಾನೂನು ಓದಿರುವ ಸಿದ್ದರಾಮಯ್ಯನವರಿಗೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಿಡಿಕಾರಿದರು.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications