ಜೆಡಿಎಸ್ನವರು ನನ್ನನ್ನು ಪ್ರಚಾರಕ್ಕೆ ಕರೆದಿಲ್ಲ: ಸುಮಲತಾ ಸ್ಪಷ್ಟನೆ
ಮಂಡ್ಯ :ಮತದಾನ ಮಾಡುವುದು ನನ್ನ ಕರ್ತ್ಯವ್ಯ, ಅದನ್ನ ನಿರ್ವಹಿಸಿದ್ದೇನೆ. ದೇವೇಗೌಡರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅವರಿಗೆ ಸರಿಯಾದ ಮಾಹಿತಿ ಇಲ್ಲದೆ ಆ ರೀತಿ ಹೇಳಿದ್ದಾರೆ. ಅವರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ದೊಡ್ಡರಸಿನಕೆರೆಯ ಮತಗಟ್ಟೆ ಸಂಖ್ಯೆ 167ರಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ದೊಡ್ಡವರು. ಆದರೆ, ಸ್ವತಂತ್ರ ಸಂಸದೆಯಾಗಿ ನನ್ನ ಜವಾಬ್ದಾರಿಯನ್ನ ನಿರ್ವಹಿಸಿದ್ದೀನಿ. ಮೋದಿಯವರು ಪ್ರಧಾನಿಯಾಗಬೇಕೆಂಬ ಉದ್ದೇಶದಿಂದ ನಾನು ಗೆದ್ದಂತಹ ಸೀಟ್ ತ್ಯಾಗ ಮಾಡಿದ್ದೀನಿ. ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನು ಕೂಡ ಎನ್ಡಿಎಗೆ ಕೊಟ್ಟಿದ್ದೇವೆ. ಮೈತ್ರಿ ಪರ ನಮ್ಮ ಬೆಂಬಲಿಗರು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ ಎಂದರು.

ಆದರೆ, ಜೆಡಿಎಸ್ ನಾಯಕರು ಯಾವುದೇ ಸಭೆ, ಪ್ರಚಾರಕ್ಕೆ ಆಹ್ವಾನಿಸಿಲ್ಲ. ಅವರು ಕರೆದು ನಾನು ಬರದೇ ಇದ್ದರೆ ತಪ್ಪಾಗುತ್ತಿತ್ತು. ಆದರೆ, ಅವರು ನನ್ನ ಕರೆದೇ ಇಲ್ಲ. ಇನ್ನು ಪ್ರಚಾರಕ್ಕೆ ಬರಲಿಲ್ಲ ಎಂಬುದಕ್ಕೆ ಅರ್ಥವಿದೆಯೇ ಎಂದು ಸುಮಲತಾ ಮರು ಪ್ರಶ್ನಿಸಿದರು.
ಕರೆಯದಿರುವುದು ಬೇಸರವಾಗಿದೆ
ನಾನಿಲ್ಲದೆ ಚುನಾವಣೆ ಮಾಡಿಕೊಳ್ಳುತ್ತೇವೆಂಬ ಭಾವನೆ ಇರಬಹುದು. ದೇವೇಗೌಡ ಅವರು ಹೇಳಿಕೆ ನೀಡಿದ ನಂತರ ನನಗೆ ಒಂದಷ್ಟು ಕರೆ ಬಂದವು. ನನ್ನ ಯಾವುದೇ ಪ್ರಚಾರಕ್ಕೆ ಕರೆದಿಲ್ಲ. ಕುಮಾರಸ್ವಾಮಿ ನಮ್ಮ ಮನೆಗೆ ಬಂದು ಹೋದ ನಂತರ ನನಗೆ ಒಂದು ಫೋನ್ ಮಾಡಿ ಪ್ರಚಾರಕ್ಕೆ ಬನ್ನಿ ಎಂದು ಕೇಳಿಲ್ಲ. ಇಷ್ಟು ತ್ಯಾಗ ಮಾಡಿಯೂ ನನ್ನ ಕರೆಯಲಿಲ್ಲ ಎನ್ನುವುದು ನನಗೆ ಬೇಸರವಾಯಿತು. ಹಾಗಿದ್ದರೆ ನಾನು ಮಾಡಿದ್ದು ತಪ್ಪಾ? ಎಂದರು.
ನನ್ನ ಅಭಿಮಾನಿಗಳು ಒಂದಷ್ಟು ಜನ ವಿರೋಧ ವ್ಯಕ್ತಪಡಿಸಿದರು. ಸೋತ ಸೀಟನ್ನೇ ಬಿಡಲ್ಲ, ಅಂತಹದರಲ್ಲಿ ನಾನು ಗೆದ್ದ ಸೀಟು ಬಿಟ್ಟು ಕೊಟ್ಟಿದ್ದಿನಿ. ಅವರ ಮನಸ್ಸಿನಲ್ಲಿ ಏನಿದೆ ಎಂಬುದು ನನಗೆ ಗೊತ್ತಿಲ್ಲ. ಆದರೆ, ಅವರು ನನ್ನ ಪ್ರಚಾರಕ್ಕೆ ಕರೆದಿಲ್ಲ. ಪಕ್ಷ ಸೂಚನೆ ನೀಡಿದ ಕಡೆ ಹೋಗಿ ನಾನು ಪ್ರಚಾರಕ್ಕೆ ಹೋಗಿದ್ದೇನೆ. ಮಂಗಳೂರುವರೆಗೂ ಹೋಗಿದ್ದೀನಿ, ಮಂಡ್ಯಕ್ಕೆ ಬರುತ್ತಿರಲಿಲ್ಲವೇ? ಆ ದಿನ ನನ್ನ ಸೀಟನ್ನ ಬಿಟ್ಟಾಗಲೂ ಬೇಸರವಾಗಿರಲಿಲ್ಲ. ಆದರೆ, ದೇವೇಗೌಡರ ಹೇಳಿಕೆ ನನಗೆ ಬೇಸರ ತರಿಸಿದೆ ಎಂದರು.
ಎನ್ಡಿಎ, ಬಿಜೆಪಿ ಗೆಲ್ಲಬೇಕು ಎಂಬುದು ಇದೆ. ಮಂಡ್ಯದಲ್ಲೂ ಒಳ್ಳೆಯ ಟ್ರೆಂಡ್ ಇದೆ ಎಂದು ಮಾತನಾಡುತ್ತಾರೆ. ರಾಜ್ಯದ 28 ಕ್ಷೇತ್ರಗಳಲ್ಲೂ ಎನ್ಡಿಎ ಅಭ್ಯರ್ಥಿಗಳು ಗೆಲ್ಲಬೇಕು ಎಂಬುದು ನನ್ನ ಆಶಯ ಎಂದರು.
ಸಚಿವ ಎನ್.ಚಲುವರಾಯಸ್ವಾಮಿ ಅವರ ಋಣ ಸಂದಾಯದ ಹೇಳಿಕೆಗೆ ಪ್ರತಿಕ್ರಿಯಿಸಿ, ಚುನಾವಣೆ ಬಂದಾಗ ಅವರು ಋಣ ಸಂದಾಯ ಬಗ್ಗೆ ಮಾತನಾಡುತ್ತಾರೆ. ಆ ಬಗ್ಗೆ ಅವರನ್ನೇ ಕೇಳಿ ಎಂದು ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications