ಮಂಡ್ಯ ಜೆಡಿಎಸ್ ಸಮಾವೇಶ : ನಿಖಿಲ್ ಅಭ್ಯರ್ಥಿ ಎಂದು ಘೋಷಣೆ
ಮಂಡ್ಯ, ಮಾರ್ಚ್ 14 : ಮಂಡ್ಯ ಲೋಕಸಭಾ ಕ್ಷೇತ್ರದ ಮದ್ದೂರಿನಲ್ಲಿ ಗುರುವಾರ ಜೆಡಿಎಸ್ನ ಬೃಹತ್ ಸಮಾವೇಶ ನಡೆಯುತ್ತಿದೆ. 2019ರ ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಎಂದು ಸಮಾವೇಶದ ಮೂಲಕ ಘೋಷಣೆ ಮಾಡಲಾಗುತ್ತದೆ.
ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತವರು ಕ್ಷೇತ್ರದಲ್ಲಿ ಜೆಡಿಎಸ್ನ ಸಮಾವೇಶ ಆರಂಭವಾಗಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ನಿಖಿಲ್ ಕುಮಾರಸ್ವಾಮಿ ಮುಂತಾದವರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಬೆಂಬಲಿಸಲ್ಲ : ಪ್ರಸನ್ನ
ಎಚ್.ಡಿ.ದೇವೇಗೌಡರು ಹೊಳೆನರಸೀಪುರದಲ್ಲಿ ಬುಧವಾರ ಸಮಾವೇಶ ನಡೆಸಿ ಪ್ರಜ್ವಲ್ ರೇವಣ್ಣ ಹಾಸನದ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರು. ಇಂದು ಮತ್ತೊಬ್ಬ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆ ಮಾಡಲು ಮಂಡ್ಯಕ್ಕೆ ಆಗಮಿಸಿದ್ದಾರೆ.
ಮಂಡ್ಯದ ಬಗ್ಗೆ ಗುಪ್ತಚರ ವರದಿ, ಜೆಡಿಎಸ್ ಹಾದಿ ಸುಲಭವಲ್ಲ!
12 ಗಂಟೆಗೆ ನಿಖಿಲ್ ಕುಮಾರಸ್ವಾಮಿ ಅವರು ವೇದಿಕೆಗೆ ಆಗಮಿಸಿದ್ದಾರೆ. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಸಲಹೆಯ ಮೇರೆಗೆ ರಾಹುಕಾಲ ಆರಂಭಕ್ಕೂ ಮುನ್ನ ನಿಖಿಲ್ ವೇದಿಕೆಗೆ ಆಗಮಿಸಿದರು.