ಮಂಡ್ಯದಲ್ಲಿ ಜೆಡಿಎಸ್ ಸಮಾವೇಶ: ಬೆಂಗಳೂರು-ಮೈಸೂರು ಮಾರ್ಗ ಬದಲು
ಬೆಂಗಳೂರು, ಜು.20: ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಇಂದು(ಜು.20)ಮಧ್ಯಾಹ್ನ 2 ಗಂಟೆಗೆ ಬಾಗಿನ ಸಮರ್ಪಿಸಲಿದ್ದಾರೆ.
ನಂತರ ಮಂಡ್ಯದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರಿಗೆ ಕೃತಜ್ಞತಾ ಸಮಾವೇಶ ನಡೆಯಲಿದ್ದು ಬೆಂಗಳೂರು-ಮೈಸೂರು ಮಾರ್ಗವನ್ನು ಬದಲಿಸಲು ಡಿಸಿ ಮಂಜುಶ್ರೀ ಕ್ರಮ ಕೈಗೊಂಡಿದ್ದಾರೆ.
ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿ ನಂತರ ಮಂಡ್ಯದಲ್ಲಿ ಜೆಡಿಎಸ್ ಸಮಾವೇಶ ನಡೆಯಲಿದೆ, ಶ್ರೀರಂಗಪಟ್ಟಣ ಮಾರ್ಗದಲ್ಲಿ ಸಂಚಾರ ದಟ್ಟಣೆ ವಿಪರೀತವಾಗುತ್ತದೆ ಹಾಗಾಗಿ ಅದನ್ನು ನಿಯಂತ್ರಿಸಲು ಮಾರ್ಗ ಬದಲಿಸಲು ಡಿಸಿ ಮಂಜುಶ್ರೀ ತಿಳಿಸಿದ್ದಾರೆ.

ಮೈಸೂರಿಗೆ ತೆರಳುವವರು ಮಧ್ಯಾಹ್ನ 2 ಗಂಟೆಯಿಂದ ಸಂಜೆ 9ರವರೆಗೆ ಆ ಮಾರ್ಗದಲ್ಲಿ ಸಂಚರಿಸುವಂತಿಲ್ಲ, ಮಳವಳ್ಳಿ, ಬನ್ನೂರು, ಬಾಬು ರಾಯನ ಕೊಪ್ಪಲುಮದ್ದೂರು ಮೂಲಕ ಬೆಂಗಳೂರಿಗೆ ಸಂಚರಿಸಬೇಕಾಗಿದೆ. ಮಧ್ಯಾಹ್ನ 4 ಗಂಟೆಗೆ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕೃತಜ್ಞತಾ ಸಮಾವೇಶ ನಡೆಯಲಿದೆ.












Click it and Unblock the Notifications