ಕೆಆರ್ ಪೇಟೆ ತಾಲೂಕಿನಲ್ಲಿ ಜೆಡಿಎಸ್ ಕಾರ್ಯಕರ್ತನ ಕೊಲೆ
ಕೆಆರ್ ಪೇಟೆ ತಾಲೂಕಿನ ಮುರಕನಹಳ್ಳಿಯಲ್ಲಿ ಜೆಡಿಎಸ್ ಕಾರ್ಯಕರ್ತನನ್ನು ಶನಿವಾರ ರಾತ್ರಿ ಕೊಲೆ ಮಾಡಲಾಗಿದೆ. ಮೊದಲೇ ಹೊಗೆಯಾಡುತ್ತಿದ್ದ ಕಾಂಗ್ರೆಸ್-ಜೆಡಿಎಸ್ ರಾಜಕೀಯ ವೈಷಮ್ಯದ ಜೊತೆಗೆ ಈ ಕೊಲೆ ಸೇರಿಕೊಂಡು ಬಿಗುವಿನ ವಾತಾವರಣ ನಿರ್ಮಾಣವಾಗಿದೆ
ಮಂಡ್ಯ, ಜನವರಿ 1: ಜಿಲ್ಲೆಯ ಕೆ.ಆರ್.ಪಟ್ಟಣದ ಮುರಕನಹಳ್ಳಿಯಲ್ಲಿ ಶನಿವಾರ ರಾತ್ರಿ ಜೆಡಿಎಸ್ ಕಾರ್ಯಕರ್ತ ಹರೀಶ್ ಎಂಬಾತನ ಕೊಲೆಯಾಗಿದೆ. ರಾಜಕೀಯ ವೈಷಮ್ಯದಿಂದಲೇ ಈ ಕೊಲೆಯಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಹತ್ತು ದಿನಗಳ ಅವಧಿಯಲ್ಲಿ ಮೂರಕ್ಕೂ ಹೆಚ್ಚು ಮಂದಿ ಜೆಡಿಎಸ್ ಕಾರ್ಯಕರ್ತರು ಜಿಲ್ಲೆಯಲ್ಲಿ ಕೊಲೆಯಾಗಿದ್ದಾರೆ.
ಚಾಕುವಿನಿಂದ ಇರಿದು ಹರೀಶ್ ಕೊಲೆ ಮಾಡಲಾಗಿದೆ. ಕೊಲೆಯ ಸುದ್ದಿ ಹರಡುತ್ತಿದ್ದಂತೆ ಆಕ್ರೋಶಗೊಂಡ ಜನರು ಕೆಲ ವಾಹನಗಳಿಗೆ ಬೆಂಕಿ ಹೊತ್ತಿಸಿದ್ದಾರೆ. ಈ ಬೆಂಕಿಯನ್ನು ನಂದಿಸಲು ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಲಾಗಿದೆ. ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣ ಆಗಿದ್ದು, ಭಯದ ವಾತಾವರಣ ಮುಂದುವರಿದಿದೆ.[ಬುದ್ಧಿವಾದ ಹೇಳಿದ್ದಕ್ಕೆ ಬದುಕನ್ನೇ ಕೊನೆಗೊಳಿಸಿದ ಹದಿನೇಳರ ಪೋರರು]

ಮಾಜಿ ಶಾಸಕರ ಮಗನೇ ಈ ಕೊಲೆ ಮಾಡಿಸಿದ್ದಾನೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದು, ಬಿಗಿ ಕಾವಲು ಹಾಕಲಾಗಿದೆ. ಕಳೆದ ಕೆಲ ದಿನಗಳಿಂದ ವೈಯಕ್ತಿಕ ಕಾರಣವೂ ಸೇರಿದಂತೆ ರಾಜಕೀಯ ವೈಷಮ್ಯಕ್ಕಾಗಿ ಜೆಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಕೊಲೆಗಳಾಗಿವೆ. ಸ್ಥಳೀಯ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications