ವಿಧಾನಸಭೆ ಚುನಾವಣೆ: ಮಂಡ್ಯದಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರ: ಶಿವರಾಮೇಗೌಡ
ಮಂಡ್ಯ, ನವೆಂಬರ್ 2 : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಭದ್ರಕೋಟೆ ಸಂಪೂರ್ಣ ಛಿದ್ರವಾಗಲಿದೆ ಎಂದು ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ ಭವಿಷ್ಯ ನುಡಿದರು.
ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ಕೊಪ್ಪ ಹೋಬಳಿ, ಬಿದರಕೋಟೆ, ಕೊಪ್ಪ, ಬಳ್ಳೇಕೆರೆ, ಚೊಟ್ಟನಹಳ್ಳಿ, ಹುರುಗಲವಾಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸೋಮವಾರ ಸಂಜೆ ಜನಸಂಪರ್ಕ ಸಭೆ ನಡೆಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ವೇಳೆ. "ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆಯಾಗಿ ಉಳಿದಿಲ್ಲ" ಎಂದು ಹೇಳಿದ್ದಾರೆ.
"ರಾಜ್ಯದಲ್ಲಿ ಬಿಜೆಪಿ ಸರ್ಕಾರ 40 ಪೆರ್ಸೆಂಟ್ ಕಮೀಷನ್ ನಡೆಸಿದರೆ, ನಾಗಮಂಗಲ ಶಾಸಕ 48 ಪೆರ್ಸೆಂಟ್ ಪಡೆದು ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಅಭಿವೃದ್ಧಿ ಕೆಲಸಗಳಲ್ಲಿ ಅವರು ಅಧಿಕ ಮಟ್ಟದ ಕಮೀಷನ್ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಒಂದು ಸಭೆಯಲ್ಲಿ ಮಾತನಾಡುವಾಗ ದುಡ್ಡು ಕೊಟ್ಟು ಕೆಲಸ ತಂದು, ಜನರಿಂದ ವಸೂಲಿ ಮಾಡಿಕೊಳ್ಳುತ್ತೇವೆ ಎಂದು ಅವರೇ ನೇರವಾಗಿ ಹೇಳಿದ್ದಾರೆ. ಇಂತಹ ಶಾಸಕರು ಯಾರಿಗಾದರೂ ಬೇಕಾ?" ಎಂದು ಪ್ರಶ್ನಿಸಿದರು.
"ಸರಕಾರದ ಕೆಲಸಗಳನ್ನು ದುಡ್ಡು ಕೊಟ್ಟು ತಂದು ಮಾಡುವ ಅಗತ್ಯವಿಲ್ಲ, ಇದೆಲ್ಲಾ ದುಡ್ಡು ಹೊಡೆಯುವ ಕಾರ್ಯತಂತ್ರ ಎಂದು ಆಕ್ರೋಶವ್ಯಕ್ತಪಡಿಸಿದ ಅವರು, ಇದರ ವಿರುದ್ಧ ನಾವೇನು ಹೋರಾಟ ಮಾಡುವ ಅಗತ್ಯವಿಲ್ಲ, ಜನರೇ ಹೋರಾಟ ಮಾಡಲಿದ್ದಾರೆ" ಎಂದು ತಿಳಿಸಿದ್ದಾರೆ.

ಜೆಡಿಎಸ್ ಭದ್ರಕೋಟೆ ಛಿದ್ರ
ಈ ಹಿಂದೆ ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆಯಾಗಿದ್ದರೂ ಸಹ ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರಿದ್ದರೂ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಲಿಲ್ಲ. ನಂತರ ನಡೆದ ಎರಡು ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹೀನಾಯ ಸೋಲು ಕಂಡು ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಹೀಗಾಗಿ ಜೆಡಿಎಸ್ ಕೋಟೆ ಹಂತ ಹಂತವಾಗಿ ಕುಸಿಯುತ್ತಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಭದ್ರಕೋಟೆ ಛಿದ್ರವಾಗಲಿದೆ ಎಂದರು.

ಬಿಜೆಪಿಯಲ್ಲಿರುವವರೇ ನಮ್ಮನ್ನ ಬೆಂಬಲಿಸುತ್ತಾರೆ
ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸೆ ಹೋಗಿರುವ ಸ್ಥಳೀಯ ಮುಖಂಡರು ನನ್ನ ಪ್ರಾಡೆಕ್ಟ್ಗಳಾಗಿದ್ದಾರೆ. ಈಗ ಅವರು ತಮ್ಮ ಕೆಲಸ ಮಾಡಿಸಿಕೊಳ್ಳಲು ಬಿಜೆಪಿಯಲ್ಲಿದ್ದಾರೆ. ಆದರೆ ಮುಂದಿನ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಈ ಎಲ್ಲರೂ ನನ್ನ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಬಿಜೆಪಿ ಅರಳುತ್ತದೆ
ಬಿಜೆಪಿ ನೀಡಿದ ಸದೃಢ ಆಡಳಿತವನ್ನು ಮೆಚ್ಚಿ ಜೆಡಿಎಸ್-ಕಾಂಗ್ರೆಸ್ ಪಕ್ಷದವರು ಬಿಜೆಪಿ ಸೇರುವುದಕ್ಕೆ ಒಲವು ವ್ಯಕ್ತಪಡಿಸಿದ್ದಾರೆ. ಡಿಸೆಂಬರ್ ವೇಳೆಗೆ ಅಂತಿಮ ಚಿತ್ರಣ ಹೊರಬೀಳಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಮಂಗಳವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸೇರಲು ಬಯಸಿರುವ ಕಾಂಗ್ರೆಸ್-ಜೆಡಿಎಸ್ ಪಕ್ಷದ ಪ್ರಮುಖರ ಜೊತೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದೇವೆ. ಡಿಸೆಂಬರ್ ವೇಳೆಗೆ ಪಕ್ಷ ಸೇರ್ಪಡೆ ಬಗ್ಗೆ ನಿರ್ಧಾರವಾಗಲಿದೆ. ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದ ಮಂಡ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕೆ. ಸಿ. ನಾರಾಯಣಗೌಡರು ಗೆದ್ದು ತೋರಿಸಿದ್ದಾರೆ. ಮುಂದಿನ ಚುನಾವಣೆ ವೇಳೆಗೆ ಇನ್ನಷ್ಟು ಒಳ್ಳೆಯ ನಾಯಕರು ಬಿಜೆಪಿ ಸೇರಲಿದ್ದು, ಬಿಜೆಪಿಗೆ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಾಗಾಗಿ ಮತ್ತಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಅರಳುವುದು ನಿಚ್ಚಳವಾಗಿದೆ ಎಂದು ಭವಿಷ್ಯ ನುಡಿದರು.

ಜನರು ಸ್ಪಷ್ಟ ಬಹುಮತ ನಿರೀಕ್ಷಿಸುತ್ತಿದ್ದಾರೆ
ಬಿಜೆಪಿಯೊಳಗೆ ಮುಂದಿನ ಚುನಾವಣೆಗೆ ಪೂರ್ವಸಿದ್ಧತೆಗಳು ಆರಂಭಗೊಂಡಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ, ಯಡಿಯೂರಪ್ಪ ಸೇರಿದಂತೆ ಎಲ್ಲರೂ ಚುನಾವಣೆ ತಯಾರಿ ನಡೆಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಅತಂತ್ರ ಸರಕಾರ ಇನ್ನು ಯಾವತ್ತೂ ಬರುವುದಿಲ್ಲ ಎಂದು ದೃಢವಾಗಿ ಹೇಳಿದರು.
ಅತಂತ್ರ ಸರ್ಕಾರದ ಸ್ಥಿತಿ ಬಗ್ಗೆ ಜನರಿಗೆ ಗೊತ್ತಿದೆ. 2006ರಲ್ಲಿ ಬಿಜೆಪಿ- ಜೆಡಿಎಸ್ ಜೊತೆ ಸೇರಿ ಸರಕಾರ ಮಾಡಿದ್ದೆವು. ಅಂದು ಮೋಸ ಮಾಡಿ ಸರಕಾರ ಬೀಳಿಸಿದರು. 2018ರಲ್ಲಿ ಮತ್ತೆ ಕಾಂಗ್ರೆಸ್ ಜೊತೆ ಸೇರಿ ಜೆಡಿಎಸ್ ಸರಕಾರ ರಚನೆ ಮಾಡಿದರು. ಅದೂ ಬಿದ್ದುಹೋಯಿತು. ಈ ಕಾರಣದಿಂದ ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನರು ಸ್ಪಷ್ಟ ಬಹುಮತ ನೀಡಲಿದ್ದು, ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವುದು ಖಚಿತ ಎಂದು ಹೇಳಿದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications