ಮಂಡ್ಯದಲ್ಲಿ ವಿಜಯಲಕ್ಷ್ಮೀ ಪಟಾಕಿ ಹೊಡೆಯುವತ್ತ ಜೆಡಿಎಸ್
Recommended Video

ಮಂಡ್ಯ, ನವೆಂಬರ್ 6: 1 ಲಕ್ಷ ಮತಗಳ ಗಡಿ ದಾಟುವ ಮೂಲಕ ಜೆಡಿಎಸ್ ಮಂಡ್ಯದಲ್ಲಿ ಕಿಂಗ್ ಆಗುವ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿವೆ.ಇದರಿಂದ ಮೈತ್ರಿ ಪಕ್ಷಕ್ಕೆ ಭಾರಿ ಮುನ್ನಡೆ ದೊರೆತಂತಾಗಿದೆ.
ಜೆಡಿಎಸ್ ಅಭ್ಯರ್ಥಿ ಎಲ್ ಆರ್ ಶಿವರಾಮೇಗೌಡ ಮೊದಲ ಸುತ್ತಿನಲ್ಲಿ 4570 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದರು, ಎರಡನೇ ಸುತ್ತಿನಲ್ಲಿ 27,372 ಮತಗಳನ್ನು ಪಡೆದಿದ್ದರು, ಮೂರನೇ ಸುತ್ತಿನಲ್ಲಿ 40,796 ಮತಗಳನ್ನು ಪಡೆದು ಭಾರಿ ಮುನ್ನಡೆ ಸಾಧಿಸಿದ್ದಾರೆ. ಇದೀಗ ನಾಲ್ಕನೇ ಸುತ್ತಿ ಮತ ಎಣಿಕೆಯಲ್ಲಿ 1ಲಕ್ಷ ಮತವನ್ನು ದಾಟಿದ್ದಾರೆ.
ಡಾ. ಸಿದ್ದರಾಮಯ್ಯ 15 ಸಾವಿರ ಮತಗಳನ್ನು ಪಡೆದು ಸೋಲುವ ದಿಕ್ಕಿನಲ್ಲಿ ಹೆಜ್ಜೆ ಹಾಕಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ನ ಭದ್ರಕೋಟೆ ಎನಿಸಿರುವ ಕ್ಷೇತ್ರಗಳ ಪೈಕಿ ಮಂಡ್ಯ ಕೂಡ ಒಂದಾಗಿದ್ದು, ಹಾಲಿ ಸಚಿವ ಸಿಎಸ್ ಪುಟ್ಟರಾಜು ಅವರ ರಾಜಿನಾಮೆಯಿಂದ ತೆರವಾಗಿತ್ತು.

ಈ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಎಲ್ಆರ್ ಶಿವರಾಮೇಗೌಡ ಕಣಕ್ಕಿಳಿದಿದ್ದು ಕಾಂಗ್ರೆಸ್ ಇಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಿತ್ತು.ಹೀಗಾಗಿ ಈ ಬಾರಿ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡರಿಗೆ ಕಾಂಗ್ರೆಸ್ ನ ಬೆಂಬಲವೂ ದೊರಕಿದೆ.
ಬಿಜೆಪಿಯಿಂದ ಡಾ. ಸಿದ್ದರಾಮಯ್ಯ ಕಣಕ್ಕಿಳಿದಿದ್ದು, ಎಷ್ಟರ ಮಟ್ಟಿಗೆ ಪ್ರತಿಸ್ಪರ್ಧೆ ಒಡ್ಡುತ್ತಾರೆ ಎಂಬುದು ಈಗಿರುವ ಕುತೂಹಲ, ಮೇಲ್ನೋಟಕ್ಕೆ ಜೆಡಿಎಸ್ ಗೆ ವಿಜಯಲಕ್ಷ್ಮೀ ಒಲಿಯುತ್ತಾಳೆ ಎನ್ನಲಾಗುತ್ತಿದ್ದು ಮತದಾರನ ಮನದಲ್ಲಿ ಅಡಗಿರುವ ಗುಟ್ಟು, ರಟ್ಟಾಗಲು ಈಗ ಕ್ಷಣಗಣನೆ ಆರಂಭಗೊಂಡಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications