ಮನ್ ಮುಲ್ ಚುನಾವಣೆ; ಜೆಡಿಎಸ್ ಗೆ ಅದೃಷ್ಟ, ಬಿಜೆಪಿಗೆ ಮುಖಭಂಗ
ಮಂಡ್ಯ, ಅಕ್ಟೋಬರ್ 3: ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ಸಂಘದ (ಮನ್ ಮುಲ್) ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಮನ್ ಮುಲ್ ಜೆಡಿಎಸ್ ಪಾಲಾಗಿದೆ. ಜೆಡಿಎಸ್ ಗೆ ಅದೃಷ್ಟ ಒಲಿದಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ.
ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಬೆಂಬಲ ವಿಚಾರ: ಕಾಂಗ್ರೆಸ್ ಒಳಗೇ ಕಿತ್ತಾಟ
ಲಾಟರಿ ಮೂಲಕ ಜೆಡಿಎಸ್ ಮನ್ ಮುಲ್ ಗದ್ದುಗೆ ಹಿಡಿದಿದ್ದು, ಅದೃಷ್ಟ ಲಕ್ಷ್ಮೀ ಜೆಡಿಎಸ್ ಕೈಹಿಡಿದಿದೆ. ಚಲಾವಣೆಯಾಗಿದ್ದ 16 ಮತಗಳಲ್ಲಿ 8-8 ಸಮಬಲ ಸಾಧಿಸಿದ್ದವು. ಸಮಬಲ ಸಾಧಿಸಿದ್ದ ಜೆಡಿಎಸ್-ಬಿಜೆಪಿ ಅಧ್ಯಕ್ಷ ಸ್ಥಾನದ ಸ್ಪರ್ಧಿಗಳನ್ನು ಲಾಟರಿ ಎತ್ತುವ ಮೂಲಕ ಆಯ್ಕೆ ಮಾಡಲಾಗಿದ್ದು, ಇದರಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ನ ರಾಮಚಂದ್ರು ಆಯ್ಕೆಯಾಗಿದ್ದಾರೆ.
ಮೈಮೂಲ್ ನಿಂದ ಹಾಲು ಉತ್ಪಾದಕರಿಗೆ 1 ರೂಪಾಯಿ ಹೆಚ್ಚಳ
ಬಿಜೆಪಿ ಹಿನ್ನಡೆಗೆ ಅಧಿಕಾರಿಯೊಬ್ಬರ ಕ್ರಾಸ್ ಓಟಿಂಗ್ ಶಂಕೆ ವ್ಯಕ್ತವಾಗಿದೆ. ಜೆಡಿಎಸ್ ಬಿಟ್ಟು ಬಿಜೆಪಿ ಸೇರಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಸ್ಪಿ ಸ್ವಾಮಿಗೆ ಮುಖಭಂಗವಾಗಿದೆ. ಉಪಾಧ್ಯಕ್ಷ ಸ್ಥಾನ ಕೂಡ ಜೆಡಿಎಸ್ ಗೆ ಲಭಿಸಿದೆ. 9 ಮತ ಪಡೆದು ರಘು ನಂದನ್ ಉಪಾಧ್ಯಕ್ಷ ಗದ್ದುಗೆ ಏರಿದ್ದಾರೆ. ಡಿಸಿಎಂ ಅಶ್ವತ್ ನಾರಾಯಣ, ಮಾಜಿ ಸಚಿವ ಚಲುವರಾಯಸ್ವಾಮಿಗೆ ತೀವ್ರ ಮುಖಭಂಗವಾಗಿದ್ದು, ಜೆಡಿಎಸ್ ಗೆ ಅಧಿಕಾರ ತಪ್ಪಿಸಲು ಉಭಯ ನಾಯಕರು ಕಸರತ್ತು ನಡೆಸಿದ್ದರು.