ಸೊಳ್ಳೆ ನಿಯಂತ್ರಿಸಲು ಮಂಡ್ಯದ ಗೌಡರ ವಿನೂತನ ಪ್ರತಿಭಟನೆ
ಮಂಡ್ಯ, ಆಗಸ್ಟ್ 05 : ನಮಗೆ ಬೇಕಾದ ಸೇವೆಗಳನ್ನು ಸಕಾಲದಲ್ಲಿ ಪಡೆದುಕೊಳ್ಳಲು ಇಲ್ಲಿ ಹೋರಾಟ ಮಾಡುತ್ತಲೇ ಇರಬೇಕು. ಕಾವೇರಿ ನೀರಿಗಾಗಲಿ, ರಸ್ತೆ ದುರಸ್ತಿಗಾಗಲಿ, ಕಸ ವಿಲೇವಾರಿಗಾಗಲಿ, ಚರಂಡಿ ಸ್ವಚ್ಛತೆಗಾಗಲಿ, ಸಂಬಳದ ಹೆಚ್ಚಳಕ್ಕಾಗಲಿ ಹೋರಾಟ ಮಾಡದಿದ್ದರೆ ಕೇಳಿದಾಗ ಸೇವೆ ದೊರೆಯುವುದಿಲ್ಲ.
ಹಾಗೆಯೆ, ಈ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಿಸಬೇಕೆಂದು ಮಂಡ್ಯದ ಜೆಡಿಯು ಜಿಲ್ಲಾಧ್ಯಕ್ಷರಾಗಿರುವ ಬಿಎಸ್ ಗೌಡ ಎಂಬುವವರು ಮಂಡ್ಯ ಜಿಲ್ಲಾ ಪಂಚಾಯತಿ ಕಚೇರಿಯೆದಿರು ಏಕಾಂಗಿಯಾಗಿ ವಿನೂತ ಪ್ರತಿಭಟನೆ ನಡೆಸಿದ್ದಾರೆ.
ಧ್ವಜಾರೋಹಣದ ಕಟ್ಟೆಯ ಮೇಲೆ ಸೊಳ್ಳೆ ಪರದೆಯನ್ನು ಸುತ್ತಿಕೊಂಡು ಡೆಂಗ್ಯೂ, ಚಿಕೂನ್ ಗುನ್ಯದಂಥ ರೋಗಗಳು ಹರಡದಂತೆ ಜಿಲ್ಲಾಡಳಿತ ಕೂಡಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ, ಸೊಳ್ಳೆಯ ಕಡಿತದಿಂದ ಉಂಟಾಗುವ ರೋಗಗಳ ಬಗ್ಗೆ ಫಲಕ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಡೆಂಗ್ಯೂ ಮತ್ತು ಚಿಕೂನ್ ಗುನ್ಯ ತಾಂಡವವಾಡುತ್ತಿವೆ. ಮೈಸೂರಿನಲ್ಲಿ ಹಲವಾರು ನಾಗರಿಕರು ಅಸುನೀಗಿದ್ದಾರೆ. ಬೆಂಗಳೂರಿನಲ್ಲಿ ಕೂಡ ಡೆಂಗ್ಯೂ ಮತ್ತು ಚಿಕೂನ್ ಗುನ್ಯ ರೋಗಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಮಂಡ್ಯದಲ್ಲಿಯೂ ಇದು ಹರಡದಂತೆ ಎಚ್ಚರ ವಹಿಸಬೇಕೆಂಬುದು ಗೌಡರ ಕಾಳಜಿ. ಇದಕ್ಕೆ ಜಿಲ್ಲಾಡಳಿತ ಸ್ಪಂದಿಸುವುದೆ?
ಡೆಂಗ್ಯೂ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ವಿಚಾರಗಳಿವು
ಈ ಡೆಂಗ್ಯೂ ಮತ್ತು ಚಿಕೂನ್ ಗುನ್ಯ ರೋಗಗಳಿಗೆ ಮೂಲ ಕಾರಣವಾಗಿರುವ ಸೊಳ್ಳೆಗಳನ್ನು ನಿಯಂತ್ರಿಸಲು ಕ್ರಮ ಜರುಗಿಸಲೆಂದು ಅನುದಾನ ಬಿಡುಗಡೆ ಮಾಡಲಾಗಿದ್ದರೂ, ಅದು ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಇದರಿಂದ ಜನರು ಈ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂಬುದು ಗೌಡರ ಆರೋಪ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications