ಮಂಡ್ಯ: ಮಾನಸಿಕ ಅಸ್ವಸ್ಥನಿಗೆ ಹೊಸ ರೂಪ ಕೊಟ್ಟ ಕೆ.ಎಂ.ದೊಡ್ಡಿ ಪೊಲೀಸರು
ಮಂಡ್ಯ, ಜುಲೈ 13: ಮಾನಸಿಕ ಅಸ್ವಸ್ಥನಾಗಿ ರಸ್ತೆಯಲ್ಲಿ ಓಡಾಡುತ್ತಿದ್ದ ಯುವಕನಿಗೆ ಪೊಲೀಸರು ಹೊಸ ಉಡುಪು ತೊಡಿಸಿ, ಉಪಚರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಭುಸ್ವಾಮಿ ಮತ್ತು ಅರುಣ್ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಕೆ.ಎಂ.ದೊಡ್ಡಿ ಠಾಣಾ ವ್ಯಾಪ್ತಿಯ ಎಚ್.ಹೊಸಹಳ್ಳಿ ಗ್ರಾಮದ ಬಳಿ ಗಸ್ತಿನಲ್ಲಿದ್ದ ವೇಳೆ ಅದೇ ಗ್ರಾಮದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಗಮನಿಸಿದ್ದಾರೆ. ಈತನ ಬಗ್ಗೆ ಸ್ಥಳಿಯರನ್ನು ವಿಚಾರಣೆ ಮಾಡಿದಾಗ ಎಚ್.ಹೊಸಹಳ್ಳಿ ಗ್ರಾಮದ ಯುವಕನಾಗಿದ್ದು ಈತ ಹುಟ್ಟಿನಿಂದಲೇ ಮಾನಸಿಕ ಅಸ್ವಸ್ಥ ಎಂಬ ಕಾರಣಕ್ಕೆ ಆತನ ಕುಟುಂಬದವರು ಪೋಷಣೆ ಮಾಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಮಾಹಿತಿ ಸಿಕ್ಕಿತು.

ತಕ್ಷಣ ಪ್ರಭುಸ್ವಾಮಿ ಮತ್ತು ಅರುಣ್ ಅವರು ಆ ಯುವಕನಿಗೆ ಬಿಸ್ಕೇಟ್, ಊಟ, ನೀರು ಕೊಡಿಸಿ ಬಳಿಕ ಸಮಾಜ ಸೇವಕರಾದ ಹಲಗೂರಿನ ಲಿಂಗಪಟ್ಟಣ ಗ್ರಾಮದ ಮುಖ್ಯಶಿಕ್ಷಕ ಸುಂದ್ರಪ್ಪ ಮತ್ತು ಕ್ಷೌರಿಕ ನಾಗರಾಜು ಅವರನ್ನು ಕರೆಸಿ ತಲೆಕೂದಲು ತೆಗೆಯಲು ಮುಂದಾದರು. ಈ ವೇಳೆ ಕೆಲಕಾಲ ಆತ ವಿರೋಧ ಮಾಡಿದ್ದಾನೆ. ಆದರೆ ಎಸ್.ಐ.ಹಾಗಲಹಳ್ಳಿ ಮತ್ತು ಎಚ್.ಹೊಸಹಳ್ಳಿ ಗ್ರಾಮದ ಸಾರ್ವಜನಿಕರ ಸಹಾಯದೊಂದಿಗೆ ತಲೆ ಕೂದಲನ್ನು ತೆಗೆದು ನಾಲೆಯಲ್ಲಿ ಸ್ಥಾನ ಮಾಡಿಸಿ ಹೊಸಬಟ್ಟೆ ತೊಡಿಸಿ ಊಟ ಮಾಡಿಸಿದ ನಂತರ ಅವರ ಸಂಬಂಧಿಕರೊಡನೆ ಮನೆಗೆ ಕಳುಹಿಸಿದ್ದಾರೆ.
ಹೀಗೆ ಒಂದಲ್ಲ ಒಂದು ಸಮಾಜ ಸೇವೆಯಲ್ಲಿ ತೊಡಗುವ ಪ್ರಭುಸ್ವಾಮಿ ಪರಿಸರ ಸಂರಕ್ಷಣೆಯಲ್ಲಿ ಸದಾ ಮುಂದು. ಇವರು ರಕ್ತದಾನ ಶಿಬಿರ ಕಾರ್ಯಕ್ರಮಗಳಲ್ಲಿ ಮುಂಚೂಣಿಯಾಗಿರುತ್ತಾರೆ. ಕಾರ್ಯಕ್ರಮ ಆಯೋಜಕರಿಗೆ ಕೈಜೋಡಿಸುತ್ತಾ ಗಿಡ ನೆಡುವ ಮೂಲಕ ಗಿಡ ನೆಡು ಮರ ಮಾಡು ಎಂಬ ಆಂದೋಲನದ ಅಡಿಯಲ್ಲಿ ಪ್ರಕೃತಿಗೆ ತನ್ನದೇಯಾದ ಕೊಡುಗೆ ನೀಡುತ್ತಾ ಬಂದಿದ್ದಾರೆ. ಹೀಗೆ ಅನೇಕ ಸಮಾಜ ಮುಖಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

ಇವರ ಸಾಮಾಜಿಕ ಕಾರ್ಯಕ್ಕೆ ಸಾರ್ವಜನಿಕರು ಈಗ ಎಲ್ಲೆಡೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಇಲಾಖೆ ಮೇಲಾಧಿಕಾರಿಗಳು ಕೂಡ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಭುಸ್ವಾಮಿ 'ನಾನೊಬ್ಬ ಭಾರತೀಯ ಪ್ರಜೆ. ನನ್ನ ಕೈಲಾದ ಸೇವೆಗಳನ್ನು ಮಾಡಬೇಕೆಂಬುದೇ ನನ್ನ ಹಂಬಲ. ನನ್ನ ಪೊಲೀಸ್ ವೃತ್ತಿಯೊಂದಿಗೆ ನಾನು ಯಾವುದೇ ಫಲಾಪೇಕ್ಷೆ ಇಲ್ಲದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗುತ್ತೇನೆ' ಎಂದಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications