Get Updates
Get notified of breaking news, exclusive insights, and must-see stories!

7 ಶಾಸಕರನ್ನು ಗೆಲ್ಲಿಸಿದ ಮಂಡ್ಯ ಜನತೆಗೆ ಕುಮಾರಸ್ವಾಮಿ ಋಣ ಸಂದಾಯ

ಮಂಡ್ಯ, ಜುಲೈ 05 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಚೊಚ್ಚಲ ಬಜೆಟ್ ಮಂಡನೆ ಮಾಡಿದರು. ತಮ್ಮ ಬಜೆಟ್‌ನಲ್ಲಿ ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ.

ಗುರುವಾರ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ 2018-19ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. 2018ರ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಜೆಡಿಎಸ್ ಶಾಸಕರು ಜಯಗಳಿಸಿದ್ದಾರೆ.

ಮಂಡ್ಯ ಕ್ಷೇತ್ರದ ಸಂಸದರಾಗಿದ್ದ ಸಿ.ಎಸ್.ಪುಟ್ಟರಾಜು ಅವರು 2018ರ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ. ಆದ್ದರಿಂದ, ಸಂಸದ ಸ್ಥಾನ ತೆರವಾಗಿದೆ. ಸಂಸತ್ ಉಪ ಚುನಾವಣೆ, ಮುಂದಿನ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಕುಮಾರಸ್ವಾಮಿ ಅವರು ಜಿಲ್ಲೆಗೆ ಹಲವು ಕೊಡುಗೆಗಳನ್ನು ನೀಡಿದ್ದಾರೆ.

ಮಂಡ್ಯ ನಗರದ ಸರ್ವತೋಮುಖ ಅಭಿವೃದ್ಧಿಗೆ 50 ಕೋಟಿ. ರೂ.ಗಳ ವಿಶೇಷ ಪ್ಯಾಕೇಜ್ ಸೇರಿದಂತೆ ವಿವಿಧ ಯೋಜನೆಗಳನ್ನು ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಮಂಡ್ಯಕ್ಕೆ ಸಿಕ್ಕಿದ್ದೇನು? ಇಲ್ಲಿದೆ ಮಾಹಿತಿ

Karnataka Buget 2018 : What Mandya gets from Kumaraswamy budget

* ಮಂಡ್ಯ ನಗರದ ಸರ್ವತೋಮುಖ ಅಭಿವೃದ್ಧಿಗೆ 50 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್

* ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಯನ್ನು 800 ಹಾಸಿಗೆಗಳ ಆಸ್ಪತ್ರೆಯಾಗಿ ಅಭಿವೃದ್ಧಿ ಮಾಡುವುದು. 30 ಕೋಟಿ ಅನುದಾನ

* ಗಗನಚುಕ್ಕಿ, ಭರಚುಕ್ಕಿ ಜಲಪಾತ ಪದೇಶದಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ಹೆಚ್ಚುವರಿ ಪ್ರವಾಸಿ ಸೌಲಭ್ಯ ಒದಗಿಸಲು 5 ಕೋಟಿ ರೂ. ಅನುದಾನ

* ಲೋಕಪಾನಿ ನದಿಯಿಂದ ಮಂಡ್ಯ ಜಿಲ್ಲೆಯ ಹಾಗೂ ಇತರೆ ಕೆರೆಗಳಿಗೆ ನೀರು ತುಂಬಿಸುವ ಹಾಗೂ ಮಂಡ್ಯ ತಾಲೂಕಿನ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು 30 ಕೋಟಿ ರೂ.ಗಳ ಯೋಜನೆ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+