ಕಾಂಗ್ರೆಸ್ನ ಮತ್ತೊಬ್ಬ ಸಚಿವನಿಗೆ ಭಾರಿ ಸಂಕಷ್ಟ! ಕೇಳಿಬಂತು ದೊಡ್ಡ ಆರೋಪ
ಮುಡಾ ಕೇಸ್ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರನ್ನು ಸುತ್ತಿಕೊಂಡಿದೆ. ಇದೀಗ ಮತ್ತೊಬ್ಬ ಕಾಂಗ್ರೆಸ್ ನಾಯಕನಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರ ಮೇಲೆ ಭಾರಿ ಆರೋಪವೊಂದು ಕೇಳಿಬರುತ್ತಿದೆ. ಹೀಗಾಗಿ ಶೀಘ್ರವೇ ಚಲುವರಾಯಸ್ವಾಮಿ ಅವರಿಗೂ ಕಂಟಕ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಂಡ್ಯ ಜಿಲ್ಲೆಯ ಚಂದೂಪುರದಲ್ಲಿ ಬಾರ್ & ರೆಸ್ಟೋರೆಂಟ್ ತೆರೆಯಲು ಪರವಾನಗಿ ನೀಡುವ ವಿಚಾರವಾಗಿ ಲಂಚದ ಆರೋಪ ಕೇಳಿಬಂದಿದೆ. ಈ ಸಂಬಂಧ ದೂರು ಕೂಡ ದಾಖಲಾಗಿದ್ದು, ದೂರುದಾರರ ಸಲ್ಲಿಸಿರುವ ಆಡಿಯೋ ರೆಕಾರ್ಡಿಂಗ್ನಲ್ಲಿ ಸಚಿವ ಚಲುರಾಯಸ್ವಾಮಿ ಹೆಸರು ಕೂಡ ಇದೆ ಎಂದು ಹೇಳಲಾಗಿದೆ.

ಈ ಕೇಸ್ ಸಂಬಂಧ ಆಡಿಯೋ ಮತ್ತು ವಿಡಿಯೋ ಸಾಕ್ಷಿಗಳನ್ನು ಸಲ್ಲಿಸಲಾಗಿದ್ದು, ಇದರ ಸತ್ಯತೆ ತಿಳಿಯಲು ಲೋಕಾಯುಕ್ತ ಮುಂದಾಗಿದೆ. ಈ ಕೇಸ್ ವಿಚಾರವಾಗಿ ಎಫ್ಐಆರ್ ದಾಖಲಿಸುವ ಸಾಧ್ಯತೆಯೂ ಇದ್ದು, ಒಂದು ವೇಳೆ ಎಫ್ಐಆರ್ ದಾಖಲಾದರೆ ಚಲುವರಾಯಸ್ವಾಮಿ ಅವರಿಗೂ ಸಂಕಷ್ಟ ಎದುರಾಗಲಿದೆಯಂತೆ.
ಸರ್ಕಾರಿ ಇಲಾಖೆ ಅಧಿಕಾರಿ ಹಾಗೂ ದೂರುದಾರನ ನಡುವೆ ಈ ಸಂಭಾಷಣೆ ನಡೆದಿದೆ. ಇದರಲ್ಲಿ ಸಚಿವ ಚಲುವರಾಯಸ್ವಾಮಿ ಅವರ ಹೆಸರು ಕೂಡ ಉಲ್ಲೇಖವಾಗಿದೆ. ಇದರ ಬೆನ್ನಲ್ಲೇ ಭಾರಿ ಲಂಚ ಪಡೆಯುವ ವಿಚಾರದಲ್ಲಿ ಸಚಿವರ ಹೆಸರು ತಳುಕು ಹಾಕಿಕೊಂಡಿದ್ದು, ಈ ಬಗ್ಗೆ ವಿಪಕ್ಷಗಳು ಕೂಡ ತರಾಟೆಗೆ ತೆಗೆದುಕೊಳ್ಳುತ್ತಿವೆ.
ಏನಿದು ಆರೋಪ?: ಮಂಡ್ಯದ ಚಂದೂಪುರದಲ್ಲಿ ಬಾರ್ & ರೆಸ್ಟೋರೆಂಟ್ಗೆ ಅನುಮತಿ ಪಡೆಯಲು ಮಹಿಳೆಯೊಬ್ಬರ ಹೆಸರಿನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಮೊದಲಿಗೆ ಆನ್ಲೈನ್ ಮೂಲಕ ಸಲ್ಲಿಕೆಯಾಗಿದ್ದ ಅರ್ಜಿ ರಿಜೆಕ್ಟ್ ಆಗಿತ್ತು. ಇದಾದ ನಂತರ ಮಹಿಳೆಯ ಪುತ್ರ ಖುದ್ದು ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿದ್ರು. ಇನ್ನು ಲೈಸೆನ್ಸ್ ನೀಡಲು ಅಬಕಾರಿ ಇಲಾಖೆ ಅಧಿಕಾರಿಗಳು ಬರೋಬ್ಬರಿ 40 ಲಕ್ಷ ರೂಪಾಯಿ ಲಂಚ ಕೇಳಿದ್ದಾರೆ ಎಂದು ಆರೋಪಿಸಲಾಗಿದೆ. ಬಳಿಕ 20 ಲಕ್ಷ ರೂಪಾಯಿ ಆದರೂ ಕೊಡಬೇಕು ಎಂದು ಡಿಮ್ಯಾಂಡ್ ಮಾಡಿದ್ದರು ಎಂದು ದೂರುದಾರರು ಹೇಳಿದ್ದಾರೆ.

ಇನ್ನು ಲಂಚ ಕೇಳಿರುವ ಆರೋಪದ ಮೇರೆಗೆ ಅಬಕಾರಿ ಇಲಾಖೆಯ ರವಿಶಂಕರ್ ಹಾಗೂ ಇನ್ಸ್ಪೆಕ್ಟರ್ ಶಿವಶಂಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದು, ಇದರ ಜೊತೆಗೆ ಅಧಿಕಾರಿಗಳು ಮಾತನಾಡಿರುವ ಆಡಿಯೋ ಕೂಡ ದೂರಿನೊಂದಿಗೆ ಸಲ್ಲಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ಅಧಿಕಾರಿಗಳು ಕೇಸ್ನ ತನಿಖೆಗೆ ಫೀಲ್ಡಿಗಿಳಿದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಆದೇಶಿಸಿದರೆ, ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆಡಿಯೋದಲ್ಲಿ ಸಚಿವರ ಹೆಸರೂ ಇರುವುದರಿಂದ ಕಂಟಕ ಎದುರಾಗಲಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಜೆಡಿಎಸ್ ಕೂಡ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ರಾಜ್ಯ ಅಬಕಾರಿ ಇಲಾಖೆಯಲ್ಲಿ ಮಂಥ್ಲಿ ಮನಿ ಹೆಸರಲ್ಲಿ ವಸೂಲಿ ದಂಧೆ ಎಗ್ಗಿಲ್ಲದೆ ಜೋರಾಗಿ ನಡೆಯುತ್ತಿದೆ. ಅಂದು ಪ್ರಧಾನಿ ಮೋದಿಯವರ ಆಡಿದ್ದ ಮಾತು ಇಂದು ಸತ್ಯವಾಗಿದೆ. ರಾಜ್ಯ ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್ಗೆ ಲಂಚ ವಸೂಲಿ ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವ ಚಲುವರಾಯಸ್ವಾಮಿ ಮುಂದಾಳತ್ವದಲ್ಲೇ ಅಧಿಕಾರಿಗಳು ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಸಚಿವರಿಗೂ ಪಾಲು ಹೋಗುತ್ತಿರುವುದು ಆಡಿಯೋ ಸಂಭಾಷಣೆಯಲ್ಲಿ ಜಗಜ್ಜಾಹೀರಾಗಿದೆ ಎಂದು ವಾಗ್ದಾಳಿ ನಡೆಸಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications